AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶಾ ರವಿಕೃಷ್ಣನ್ ಕನ್ನಡದವರಲ್ಲ; ಅಚ್ಚರಿಯ ವಿಚಾರ ರಿವೀಲ್ ಮಾಡಿದ ರೌಡಿ ಬೇಬಿ

ನಿಶಾ ರವಿಕೃಷ್ಣನ್ ಅವರು ನಿಶಾ ಮಿಲನ್ ಎಂದು ಕೂಡ ಜನಪ್ರಿಯತೆ ಪಡೆದವರು. ಅವರು 2018ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಸರ್ವಮಂಗಲ ಮಾಂಗಲ್ಯೆ’ ಅವರು ನಟಿಸಿದ ಮೊದಲ ಧಾರಾವಾಹಿ. ಈ  ಧಾರಾವಾಹಿ 2018ರಿಂದ 2019ರವರೆಗೆ ಪ್ರಸಾರ ಕಂಡಿತು.

ನಿಶಾ ರವಿಕೃಷ್ಣನ್ ಕನ್ನಡದವರಲ್ಲ; ಅಚ್ಚರಿಯ ವಿಚಾರ ರಿವೀಲ್ ಮಾಡಿದ ರೌಡಿ ಬೇಬಿ
ನಿಶಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 19, 2024 | 9:23 AM

Share

ನಿಶಾ ರವಿಕೃಷ್ಣನ್ ಅವರು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಮೊದಲು ಅವರು ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈಗ ‘ಅಣ್ಣಯ್ಯ’ ಹೆಸರಿನ ಧಾರಾವಾಹಿ ಮಾಡುತ್ತಿದ್ದಾರೆ. ಅವರು ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾರೆ. ಆದರೆ, ಅವರು ಕನ್ನಡದವರು ಅಲ್ಲ ಎನ್ನುವ ವಿಚಾರ ನಿಮಗೆ ಗೊತ್ತೇ? ಆ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ ಕೇಳಿ.

ನಿಶಾ ರವಿಕೃಷ್ಣನ್ ಅವರು ನಿಶಾ ಮಿಲನ್ ಎಂದು ಕೂಡ ಜನಪ್ರಿಯತೆ ಪಡೆದವರು. ಅವರು 2018ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಸರ್ವಮಂಗಲ ಮಾಂಗಲ್ಯೆ’ ಅವರು ನಟಿಸಿದ ಮೊದಲ ಧಾರಾವಾಹಿ. ಈ  ಧಾರಾವಾಹಿ 2018ರಿಂದ 2019ರವರೆಗೆ ಪ್ರಸಾರ ಕಂಡಿತು. ಸ್ಟಾರ್ ಸುವರ್ಣದಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. 2019ರಲ್ಲಿ ಅವರಿಗೆ ಸಿಕ್ಕಿದ್ದೇ ‘ಗಟ್ಟಿಮೇಳ’ ಧಾರಾವಾಹಿ.

ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಿಶಾ ಅವರು ಅಮೂಲ್ಯ ಹೆಸರಿನ ಪಾತ್ರ ಮಾಡಿದರು. ಈ ಧಾರಾವಾಹಿ ಮೂಲಕ ರೌಡಿ ಬೇಬಿ ಎಂದೇ ಫೇಮಸ್ ಆದರು. ಕಥಾ ನಾಯಕನ ಜೊತೆಗಿನ ಕೆಮಿಸ್ಟ್ರಿ ಕಾರಣಕ್ಕೆ ಅವರು ಸಾಕಷ್ಟು ಸುದ್ದಿ ಆದರು. ಈ ಧಾರಾವಾಹಿ 2019ರಿಂದ 2024ರವರೆಗೆ ಪ್ರಸಾರ ಕಂಡಿತು. ಈ ವರ್ಷ ಧಾರಾವಾಹಿ ಪ್ರಸಾರವನ್ನು ಅಂತ್ಯ ಮಾಡಿದೆ. ಆ ಬಳಿಕ ಒಂದು ತೆಲುಗು ಧಾರಾವಾಹಿಯಲ್ಲಿ ನಟಿಸಿದ್ದರು.

ಸದ್ಯ ನಿಶಾ ಅವರು ‘ಅಮ್ಮಯ್ಯಿಗಾರು’ ಹೆಸರಿನ ತೆಲುಗು ಧಾರಾವಾಹಿ ಹಾಗೂ ‘ಅಣ್ಣಯ್ಯ’ ಹೆಸರಿನ ಕನ್ನಡದ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ವಿಶೇಷ ಎಂದರೆ ಅವರು ಮೂಲ ಮಲಯಾಳಿ. ನಿಶಾ ಅವರ ಕುಟುಂಬ ಮಲಯಾಳಿ ಹಿನ್ನೆಲೆ ಹೊಂದಿದೆ. ಆದರೆ, ಹುಟ್ಟಿದ್ದು ಬೆಂಗಳೂರೇ ಆಗಿದ್ದರಿಂದ ಅವರನ್ನು ಎಲ್ಲರೂ ಕನ್ನಡವರು ಎಂದು ಗುರುತಿಸುತ್ತಾರೆ. ಅಲ್ಲದೆ, ಅವರಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡಲು ಬರುತ್ತದೆ.

ಇದನ್ನೂ ಓದಿ: ಮುದ್ದು ಮುದ್ದಾಗಿ ಪೋಸ್ ನೀಡಿದ ನಟಿ ನಿಶಾ ರವಿಕೃಷ್ಣನ್; ಇಲ್ಲಿದೆ ಫೋಟೋ ಗ್ಯಾಲರಿ

‘ಅಣ್ಣಯ್ಯ’ ಧಾರಾವಾಹಿಗೆ ಪ್ರಮೋದ್ ಶೆಟ್ಟಿ ನಿರ್ಮಾಣ ಇದೆ. ಈ ಧಾರಾವಾಹಿಯಲ್ಲಿ ಅವರು ಡಾ. ಪಾರ್ವತಿ ಹೆಸರಿನ ಪಾತ್ರ ಮಾಡಿದ್ದಾರೆ. ಈ ಧಾರಾವಾಹಿ ಕೆಲವೊಮ್ಮೆ ಟಾಪ್ ಐದರಲ್ಲಿ ಸ್ಥಾನ ಪಡೆದುಕೊಳ್ಳುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:10 am, Tue, 19 November 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್