AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡಕ್ಕೆ ಡಬ್​ ಮಾಡಲ್ಲ, ಕನ್ನಡಿಗರು ತೆಲುಗಿನಲ್ಲೇ ನೋಡ್ತಾರೆ’; ಟಾಲಿವುಡ್​​ ನಟ ನಾನಿ ಹೇಳಿಕೆಗೆ ಕರುನಾಡು ಗರಂ

Ante Sundaraniki | Nani: ಕನ್ನಡಿಗರು ಗರಂ ಆಗಿದ್ದನ್ನು ಕಂಡು ನಟ ನಾನಿ ಕ್ಷಮೆ ಕೇಳಿದ್ದಾರೆ. ಟ್ವಿಟರ್​ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ.

‘ಕನ್ನಡಕ್ಕೆ ಡಬ್​ ಮಾಡಲ್ಲ, ಕನ್ನಡಿಗರು ತೆಲುಗಿನಲ್ಲೇ ನೋಡ್ತಾರೆ’; ಟಾಲಿವುಡ್​​ ನಟ ನಾನಿ ಹೇಳಿಕೆಗೆ ಕರುನಾಡು ಗರಂ
ನಾನಿ
TV9 Web
| Edited By: |

Updated on: Apr 21, 2022 | 9:17 AM

Share

ಕನ್ನಡ ಸಿನಿಮಾಗಳ ಬಗ್ಗೆ ಪರಭಾಷೆಯವರಿಗೆ ಇರುವ ಭಾವನೆಯೇ ಬೇರೆ. ಇಲ್ಲಿನ ಮಾರುಕಟ್ಟೆ ಚಿಕ್ಕದು ಎಂಬ ಮಾತನ್ನು ಕೆಲವರು ಈಗಲೂ ಹೇಳುತ್ತಾರೆ. ಅಂಥವರಿಗೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಉತ್ತರ ನೀಡಿದೆ. ಆ ನಂತರವೂ ಕೆಲವರು ಕನ್ನಡ ಸಿನಿಪ್ರೇಕ್ಷಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಟಾಲಿವುಡ್ನಟ ನಾನಿ  (Actor Nani) ಅವರು ಈಗ ಅಂಥದ್ದೊಂದು ಹೇಳಿಕೆ ನೀಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿರುವ ಅವರು ಈಗ ಕನ್ನಡಿಗರ (Kannadigas) ಭಾವನೆಗಳಿಗೆ ಧಕ್ಕೆ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅನೇಕ ನೆಟ್ಟಿಗರು ಗರಂ ಆಗಿದ್ದಾರೆ. ಜನರಿಂದ ವಿರೋಧ ತೀವ್ರವಾಗುತ್ತಿದ್ದಂತೆಯೇ ನಾನಿ ಕ್ಷಮೆ ಕೇಳಿದ್ದಾರೆ. ಅಷ್ಟಕ್ಕೂ ಅವರು ಮಾತನಾಡಿದ್ದು ಏನು? ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದು ಯಾಕೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ನಾನಿ ನಟನೆಯ ‘ಅಂಟೆ ಸುಂದರಾನಿಕಿ’ (Ante Sundaraniki) ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾವನ್ನು ಕನ್ನಡಕ್ಕೆ ಯಾಕೆ ಡಬ್​ ಮಾಡಿಲ್ಲ ಎಂದು ಕೇಳಿದ್ದಕ್ಕೆ ನಾನಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಿನಿಮಾಗಳು ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗುವ ಟ್ರೆಂಡ್​ ಈಗ ಜೋರಾಗಿದೆ. ಅದರಂತೆ ನಾನಿ ಅವರ ‘ಅಂಟೆ ಸುಂದರಾನಿಕಿ’ ಸಿನಿಮಾ ಕೂಡ ತೆಲುಗಿನ ಜತೆಗೆ ಮಲಯಾಳಂ ಮತ್ತು ತಮಿಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆದರೆ ಕನ್ನಡಕ್ಕೆ ಡಬ್​ ಮಾಡಿಲ್ಲ. ಯಾಕೆ ಎಂದು ಕೇಳಿದ್ದಕ್ಕೆ ನಾನಿ ಅವರು ಎಡವಟ್ಟಿನ ಮಾತನಾಡಿದ್ದಾರೆ.

‘ಬಹುತೇಕ ಎಲ್ಲ ಕನ್ನಡಿಗರಿಗೆ ತೆಲುಗು ಅರ್ಥ ಆಗುತ್ತದೆ. ಅವರು ತೆಲುಗಿನಲ್ಲಿಯೇ ಸಿನಿಮಾ ನೋಡಲು ಇಷ್ಟಪಡುತ್ತಾರೆ. ಹಾಗಾಗಿ ನಮ್ಮ ಚಿತ್ರವನ್ನು ಕೂಡ ಕನ್ನಡಿಗರು ತೆಲುಗಿನಲ್ಲೇ ನೋಡುತ್ತಾರೆ’ ಎಂದು ಈ ಸಿನಿಮಾದ ಟೀಸರ್​ ಲಾಂಚ್​ ವೇಳೆ ನಾನಿ ಹೇಳಿದ್ದಾರೆ. ಈ ಮಾತಿಗೆ ನೆಟ್ಟಿಗರಿಂದ ಸಖತ್​ ವಿರೋಧ ವ್ಯಕ್ತವಾಗಿದೆ. ಕನ್ನಡಕ್ಕೆ ಡಬ್​ ಮಾಡಿದರೆ ಮಾತ್ರ ಸಿನಿಮಾ ನೋಡುತ್ತೇವೆ. ಇಲ್ಲದಿದ್ದರೆ ನೋಡುವುದಿಲ್ಲ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ‘ನಮಗೆ ತೆಲುಗು ಅರ್ಥ ಆಗುವುದಿಲ್ಲ. ತೆಲುಗಿನಲ್ಲಿ ಸಿನಿಮಾ ನೋಡಲು ನಾವು ಇಷ್ಟಪಡುವುದಿಲ್ಲ’ ಎಂದು ಹಲವರು ನೇರವಾಗಿ ಕನ್ನಡದಲ್ಲಿಯೇ ಕಮೆಂಟ್​ ಮಾಡಿದ್ದಾರೆ.

ಕನ್ನಡಿಗರು ಈ ಪರಿ ಗರಂ ಆಗಿದ್ದನ್ನು ಕಂಡು ನಾನಿ ಕ್ಷಮೆ ಕೇಳಿದ್ದಾರೆ. ‘ಡಬ್ಬಿಂಗ್​ ಇಲ್ಲದೇ ಇರುವಾಗಲೂ ಕೂಡ ಕನ್ನಡದ ಅನೇಕ ಕುಟುಂಬಗಳು ನಮ್ಮ ತೆಲುಗು ಸಿನಿಮಾಗಳನ್ನು ನೋಡಿ ಮೆಚ್ಚಿಕೊಂಡಿದ್ದಾರೆ ಎಂಬುದು ನನ್ನ ಮಾತಿನ ಅರ್ಥವಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾನು ಆ ಕುರಿತು ಮಾತ್ರ ಹೇಳಿದ್ದು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅದು ಬೇರೆ ಸ್ವರೂಪ ಪಡೆದಿದೆ. ಸರಿಯಾಗಿ ಹೇಳಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೇಳುತ್ತೇನೆ. ಕನ್ನಡ ಸಿನಿಮಾಗಳು ಗಡಿ ಮೀರಿ ಸಾಧನೆ ಮಾಡುತ್ತಿರುವುದರ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ನಾನಿ ಟ್ವೀಟ್​ ಮಾಡಿದ್ದಾರೆ.

‘ಅಂಟೆ ಸುಂದರಾನಿಕಿ’ ಸಿನಿಮಾ ಜೂ.10ರಂದು ಬಿಡುಗಡೆ ಆಗಲಿದೆ. ರಿಲೀಸ್​ ಸಂದರ್ಭದಲ್ಲಿ ಕನ್ನಡಿಗರಿಂದ ಮತ್ತೆ ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ. ಪ್ರತಿಷ್ಠಿತ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡಿದೆ.

ಇದನ್ನೂ ಓದಿ:

ಕನ್ನಡದ ಬಗ್ಗೆ ತಪ್ಪು ಮಾತನಾಡಿ ಬಹಿರಂಗವಾಗಿ ಕ್ಷಮೆ ಕೇಳಿದ ಆಶಿಕಾ ಪಡುಕೋಣೆ, ಚಂದು ಗೌಡ

ಕನ್ನಡ ಮಾತಾಡಲು ನಮ್ಮಲ್ಲಿ ಕೀಳರಿಮೆ ಬೇಡ, ಕನ್ನಡಿಗರೇ ಭಾಷೆಯನ್ನು ಅಸಡ್ಡೆ ಮಾಡುತ್ತಿದ್ದಾರೆ: ಲೂಸ್ ಮಾದ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್