‘ನೇರ ಮರವನ್ನೇ ಮೊದಲು ಕತ್ತರಿಸೋದು’; ಫಲಿತಾಂಶದ ಬಳಿಕ ನಿಗೂಢಾರ್ಥದಲ್ಲಿ ಅನುಪಮ್ ಖೇರ್ ಪೋಸ್ಟ್  

ಅಯೋಧ್ಯೆಯಲ್ಲಿ ಬಿಜೆಪಿ ಪಕ್ಷ ಸೋತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಮುಖ ಕಡೆಗಳಲ್ಲಿ ಸೋತಿದೆ. ಇದಾದ ಬಳಿಕ ಅನುಪಮ್ ಖೇರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ‘ಪ್ರಾಮಾಣಿಕ ವ್ಯಕ್ತಿಗೆ ಯಾವಾಗಲೂ ನೋವು ಸಿಗುತ್ತದೆ’ ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ. 

‘ನೇರ ಮರವನ್ನೇ ಮೊದಲು ಕತ್ತರಿಸೋದು’; ಫಲಿತಾಂಶದ ಬಳಿಕ ನಿಗೂಢಾರ್ಥದಲ್ಲಿ ಅನುಪಮ್ ಖೇರ್ ಪೋಸ್ಟ್  
ಅನುಪಮ್ ಖೇರ್-ಮೋದಿ
Follow us
|

Updated on: Jun 05, 2024 | 12:26 PM

ಲೋಕಸಭಾ ಚುನಾವಣಾ ಫಲಿತಾಂಶ ಬಿಜೆಪಿ ಪಾಲಿಗೆ ಶಾಕಿಂಗ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಪಕ್ಷ ಸೋತಿದೆ. ಎನ್​ಡಿಎ ಬಹುಮತ ಸಾಧಿಸಿದೆಯಾದರೂ ಬಿಜೆಪಿ ಪಕ್ಷಕ್ಕೆ ಬಹುಮತ ಸಾಧಿಸಲು ಸಾಧ್ಯವಾಗಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಿಜೆಪಿ ಸೋತಿದೆ. ಈ ಫಲಿತಾಂಶದ ಬಳಿಕ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಅವರು ನಿಗೂಡಾರ್ಥದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅನುಪಮ್ ಅವರು ಬಿಜೆಪಿ ತತ್ವಗಳನ್ನು ಒಪ್ಪಿದವರು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಹೀಗಾಗಿ ಅವರು ಹೇಳಿರೋದು ಮೋದಿ ಬಗ್ಗೆ ಎನ್ನಲಾಗುತ್ತಿದೆ.

ರಾಮ ಮಂದಿರ ನಿರ್ಮಾಣದ ಬಗ್ಗೆ ಬಿಜೆಪಿ ಸಾಕಷ್ಟು ಆಸಕ್ತಿ ತೋರಿಸಿತ್ತು. ಅವರ ಆಡಳಿತಾವಧಿಯಲ್ಲೇ ರಾಮ ಮಂದಿರ ನಿರ್ಮಾಣ ಕೂಡ ಆಯಿತು. ಆದಾಗ್ಯೂ ಅಯೋಧ್ಯೆಯಲ್ಲಿ ಬಿಜೆಪಿ ಪಕ್ಷ ಸೋತಿದೆ. ಇದಾದ ಬಳಿಕ ಅನುಪಮ್ ಖೇರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ‘ಪ್ರಾಮಾಣಿಕ ವ್ಯಕ್ತಿಗೆ ಯಾವಾಗಲೂ ನೋವು ಸಿಗುತ್ತದೆ’ ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಖ್ಯಾತ ನಿರ್ಮಾಪಕರು ನನ್ನನ್ನು ಹೊರಗಿಟ್ಟಿದ್ದಾರೆ’: ಅನುಪಮ್ ಖೇರ್ ಮಾಡಿದ ತಪ್ಪೇನು?

‘ಪ್ರಾಮಾಣಿಕ ವ್ಯಕ್ತಿ ಯಾವಾಗಲೂ ಹೆಚ್ಚು ಪ್ರಾಮಾಣಿಕನಾಗಿರಬಾರದು ಎಂದು ನಾನು ಆಗಾಗ ಯೋಚಿಸುತ್ತೇನೆ. ಯಾವಾಗಲೂ ನೇರವಾಗಿರುವ ಮರವನ್ನೇ ಮೊದಲು ಕತ್ತರಿಸುತ್ತಾರೆ. ಪ್ರಾಮಾಣಿಕ ವ್ಯಕ್ತಿ ಯಾವಾಗಲೂ ಹೆಚ್ಚು ಸಮಸ್ಯೆಯನ್ನು ಎದುರಿಸುತ್ತಾರೆ. ಎಷ್ಟೇ ಅಡೆತಡೆ ಬಂದರೂ ಅವರು ಪ್ರಾಮಾಣಿಕತೆಯನ್ನು ಬಿಟ್ಟುಕೊಡುವುದಿಲ್ಲ. ಈ ಕಾರಣದಿಂದಲೇ ಅವರು ಕೋಟಿ ಕೋಟಿ ಜನರಿಗೆ ಸ್ಫೂರ್ತಿಯಾಗಿದ್ದಾರೆ’ ಎಂದಿದ್ದಾರೆ ಅನುಪಮ್ ಖೇರ್.

ಇನ್ನು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಂಗನಾ ರಣಾವತ್ ಅವರು ಗೆಲುವು ಸಾಧಿಸಿದ್ದಾರೆ. ಅವರಿಗೆ ಅನುಪಮ್ ಖೇರ್ ಅಭಿನಂದನೆ ತಿಳಿಸಿದ್ದಾರೆ. ಹೊಸ ಪ್ರಯಾಣಕ್ಕೆ ಅವರು ಶುಭ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ