ನಿರ್ದೇಶಕ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್​’ ನಟ ಅನುಪಮ್ ಖೇರ್

ರಾಜಮೌಳಿ ಅವರು ಹೈದರಾಬಾದ್​ನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ಅನುಪಮ್ ಖೇರ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ.

ನಿರ್ದೇಶಕ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್​’ ನಟ ಅನುಪಮ್ ಖೇರ್
ರಾಜಮೌಳಿ-ಅನುಪಮ್ ಖೇರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 03, 2022 | 9:34 PM

ನಟ ಅನುಪಮ್ ಖೇರ್ (Anupam Kher)​ ಹಾಗೂ ನಿರ್ದೇಶಕ ಎಸ್​​.ಎಸ್​. ರಾಜಮೌಳಿ (SS Rajamouli) ಇಬ್ಬರೂ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅನುಪಮ್ ಖೇರ್ ನಟನೆಯ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರ (RRR Movie) ಗೆದ್ದು ಬೀಗಿದೆ. ಈಗ ರಾಜಮೌಳಿ ಮನೆಗೆ ಅನುಪಮ್ ಖೇರ್ ಭೇಟಿ ನೀಡಿದ್ದಾರೆ. ಖ್ಯಾತ ನಿರ್ದೇಶಕನಿಗೆ ಶಾಲು ಹೊದಿಸಿ ಅವರು ಸನ್ಮಾನ ಮಾಡಿದ್ದಾರೆ. ಈ ವಿಡಿಯೋವನ್ನು ಅನುಪಮ್ ಖೇರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ರಾಜಮೌಳಿ ಅವರ ಸರಳತೆಯನ್ನು ಕೊಂಡಾಡಿದ್ದಾರೆ.

ರಾಜಮೌಳಿ ಅವರು ಹೈದರಾಬಾದ್​ನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ಅನುಪಮ್ ಖೇರ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ರಾಜಮೌಳಿ ಅವರ ಸರಳತೆ ಕಂಡು ಅನುಪ್​ ಖೇರ್ ಅವರು ಅಚ್ಚರಿ ಹೊರಹಾಕಿದ್ದಾರೆ.

‘ರಾಮಾಜಿ ಹಾಗೂ ರಾಜಮೌಳಿ, ನಿಮ್ಮ ಪ್ರೀತಿಗೆ, ರುಚಿಯಾದ ಮಧ್ಯಾಹ್ನದ ಊಟಕ್ಕೆ ಧನ್ಯವಾದಗಳು. ನಿಮ್ಮದೇ ಮನೆಯಲ್ಲಿ ಶಾಲು ಹೊದಿಸಿ ನಿಮ್ಮನ್ನು ಸ್ವಾಗತಿಸಲು ನನಗೆ ಸಂತೋಷವಿದೆ. ನಿಮ್ಮ ಸರಳತೆ ಮತ್ತು ನಮ್ರತೆ ನನಗೆ ಇಷ್ಟವಾಯಿತು. ನಿಮ್ಮಿಬ್ಬರಿಂದ ಕಲಿಯುವುದು ತುಂಬಾ ಇದೆ’ ಎಂದು ಅನುಪಮ್ ಖೇರ್ ಅವರು ಬರೆದುಕೊಂಡಿದ್ದಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಂಡ ಇಬ್ಬರು ಭೇಟಿ ಆದರೆ ಆ ಬಗ್ಗೆ ಸಾಕಷ್ಟು ಕುತೂಹಲಗಳು ಹುಟ್ಟಿಕೊಳ್ಳುತ್ತವೆ. ಅದೇ ರೀತಿ ಇವರ ಭೇಟಿ ಕೂಡ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ‘ನೀವಿಬ್ಬರೂ ಹೊಸ ಪ್ರಾಜೆಕ್ಟ್​​ಗಾಗಿ ಒಂದಾಗುತ್ತಿದ್ದೀರಾ?’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.  ಇನ್ನೂ ಕೆಲವರು ಅನುಪಮ್ ಖೇರ್ ಹಾಗೂ ರಾಜಮೌಳಿ ಇಬ್ಬರ ಸರಳತೆಯನ್ನು ಕೊಂಡಾಡಿದ್ದಾರೆ.

View this post on Instagram

A post shared by Anupam Kher (@anupampkher)

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ

ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದೆ. ಒಟಿಟಿಯಲ್ಲೂ ಚಿತ್ರ ಸಾಕಷ್ಟು ಒಳ್ಳೆಯ ವಿಮರ್ಶೆ ಪಡೆದುಕೊಂಡಿದೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 1000+ ಕೋಟಿ ರೂಪಾಯಿ ಗಳಿಕೆ ಮಾಡಿದೆ ಅನ್ನೋದು ವಿಶೇಷ.

Published On - 9:33 pm, Wed, 3 August 22

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ