AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

Anupam Kher: ಸಿನಿಮಾ, ಕಿರುತೆರೆ, ರಂಗಭೂಮಿ ಮತ್ತು ರಾಜಕೀಯದಲ್ಲೂ ಗುರುತಿಸಿಕೊಂಡಿರುವ ಕಿರಣ್​ ಅವರಿಗೆ ಇತ್ತೀಚೆಗೆ ಆರೋಗ್ಯ ಕೈ ಕೊಟ್ಟಿತ್ತು. ಬ್ಲಡ್​ ಕ್ಯಾನ್ಸರ್​ನಿಂದ ಅವರು ಬಳಲುತ್ತಿದ್ದಾರೆ.

Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​
ಕಿರಣ್​ ಖೇರ್​ - ಅನುಪಮ್​ ಖೇರ್​
ಮದನ್​ ಕುಮಾರ್​
|

Updated on: May 08, 2021 | 12:33 PM

Share

ಕೊರೊನಾ ವೈರಸ್​ನಿಂದಾಗಿ ಅನೇಕ ಸೆಲೆಬ್ರಿಟಿಗಳು ಅಸುನೀಗುತ್ತಿದ್ದಾರೆ ಎಂಬುದು ನಿಜ. ಆದರೆ ಇದೇ ಸಂದರ್ಭವನ್ನು ಗುರಿಯಾಗಿಸಿಕೊಂಡು ಒಂದಷ್ಟು ಜನರು ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಿರತರಾಗಿದ್ದಾರೆ. ಅನೇಕ ಸೆಲೆಬ್ರಿಟಿಗಳ ಸಾವಿನ ವದಂತಿ ಹರಡಿಸಲಾಗುತ್ತಿದೆ. ಇತ್ತೀಚೆಗೆ ಬಾಲಿವುಡ್​ ನಟ ಅನುಪಮ್​ ಖೇರ್​ ಅವರ ಪತ್ನಿ ಕಿರಣ್​ ಖೇರ್​ ನಿಧನರಾದರು ಎಂಬ ಸುಳ್ಳು ಸುದ್ದಿ ಕೇಳಿಬಂತು. ಅದಕ್ಕೆ ಅನುಪಮ್​ ಖೇರ್​ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಕಿರಣ್​ ಖೇರ್​ ಅವರ ಆರೋಗ್ಯದ ಬಗ್ಗೆಯೂ ಅಪ್​ಡೇಟ್​ ನೀಡಿದ್ದಾರೆ.

‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ತಾವು ಕೂಡ ಕೊವಿಡ್​ ಲಸಿಕೆ ಪಡೆಯುತ್ತಿರುವ ವಿಡಿಯೋವನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ.

ಸಿನಿಮಾ, ಕಿರುತೆರೆ, ರಂಗಭೂಮಿ ಮತ್ತು ರಾಜಕೀಯದಲ್ಲೂ ಗುರುತಿಸಿಕೊಂಡಿರುವ ಕಿರಣ್​ ಅವರಿಗೆ ಇತ್ತೀಚೆಗೆ ಆರೋಗ್ಯ ಕೈ ಕೊಟ್ಟಿತ್ತು. ಬ್ಲಡ್​ ಕ್ಯಾನ್ಸರ್​ನಿಂದ ಅವರು ಬಳಲುತ್ತಿದ್ದಾರೆ. ಆ ಬಗ್ಗೆಯೂ ಅನೇಕ ವದಂತಿಗಳು ಹಬ್ಬಿದ್ದವು. ಈ ಕುರಿತು ಏ.1ರಂದು ಟ್ವೀಟ್​ ಮಾಡಿದ್ದ ಅನುಪಮ್​ ಖೇರ್​ ಅಸಲಿ ವಿಚಾರ ತೆರೆದಿಟ್ಟಿದ್ದರು. ‘ಸದ್ಯ ಕಿರಣ್​ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಅವರು ಹೊರಬರುತ್ತಾರೆ ಎಂಬ ನಂಬಿಕೆ ನಮಗಿದೆ. ಒಳ್ಳೆಯ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಆಕೆ ಫೈಟರ್​. ಎಲ್ಲವನ್ನೂ ಧೈರ್ಯವಾಗಿ ಎದುರಿಸುತ್ತಾರೆ’ ಎಂದು ಅನುಪಮ್​ ಖೇರ್​ ಟ್ವೀಟ್​ ಮಾಡಿದ್ದರು.

View this post on Instagram

A post shared by Anupam Kher (@anupampkher)

ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಲು ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಕಿರಣ್​ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಕೊರೊನಾ ವ್ಯಾಕ್ಸಿನ್​ ಪಡೆಯುವ ಸಲುವಾಗಿ ಹೊರಗೆ ಬಂದಿರುವ ಅವರ ಫೋಟೋವನ್ನು ಅನುಪಮ್​ ಖೇರ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಿರಣ್​ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಹಾರೈಸುತ್ತಿದ್ದಾರೆ.

ಇದನ್ನೂ ಓದಿ: 

ನಾನು ಜೀವಂತವಾಗಿದ್ದೇನೆ. ಯಾರೋ ಸಾಮಾಜಿಕ ಜಾಲತಾಣದಲ್ಲಿ ನನ್ನ ಪೋಟೋ ಹಾಕಿ RIP ಹಾಕಿದ್ದಾರೆ : ಹಿರಿಯ ನಟ ದೊಡ್ಡಣ್ಣ

Doddanna Death Hoax: ದೊಡ್ಡಣ್ಣ ಮೃತಪಟ್ಟಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಅಸಲಿ ವಿಚಾರ ಏನು?

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ