AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಇಮೇಜ್​ಗಿಂತ ಜನರ ಪ್ರಾಣ ಮುಖ್ಯ; ಮೋದಿ ಸರ್ಕಾರವನ್ನು ಟೀಕಿಸಿ ಅಚ್ಚರಿ ಮೂಡಿಸಿದ ಅನುಪಮ್​ ಖೇರ್​

Narednra Modi: ಸದ್ಯ ಆಗುತ್ತಿರುವುದಕ್ಕೆಲ್ಲ ಸರ್ಕಾರವೇ ಕಾರಣ. ಬರೀ ಇಮೇಜ್​ ಸೃಷ್ಟಿ ಮಾಡಿಕೊಳ್ಳುವುದಕ್ಕಿಂತ ಜನರ ಪ್ರಾಣ ಕೂಡ ಮುಖ್ಯ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಅನುಪಮ್​ ಖೇರ್ ಟೀಕಿಸಿದ್ದಾರೆ.

ನಿಮ್ಮ ಇಮೇಜ್​ಗಿಂತ ಜನರ ಪ್ರಾಣ ಮುಖ್ಯ; ಮೋದಿ ಸರ್ಕಾರವನ್ನು ಟೀಕಿಸಿ ಅಚ್ಚರಿ ಮೂಡಿಸಿದ ಅನುಪಮ್​ ಖೇರ್​
ಅನುಪಮ್​ ಖೇರ್​ - ನರೇಂದ್ರ ಮೋದಿ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: May 13, 2021 | 5:19 PM

ಬಾಲಿವುಡ್​ ನಟ ಅನುಪಮ್​ ಖೇರ್​ ಅವರು ಆಗಾಗ ರಾಜಕೀಯ ವಿಚಾರಗಳಲ್ಲಿ ಮೂಗು ತೂರಿಸುತ್ತಾರೆ. ದೇಶದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಹೆಚ್ಚಾಗಿ ಅವರು ಮೋದಿ ಸರ್ಕಾರವನ್ನು ಓಲೈಸುತ್ತಾರೆ ಎಂಬುದು ಮೇಲ್ನೋಟಕ್ಕೇ ಗೊತ್ತಾಗುತ್ತದೆ. ಆ ಕಾರಣಕ್ಕಾಗಿ ಅವರು ನೆಟ್ಟಿಗರಿಂದ ಪರ ಮತ್ತು ವಿರೋಧ ಎರಡೂ ಬಗೆಯ ಪ್ರತಿಕ್ರಿಯೆ ಪಡೆಯುತ್ತಾರೆ. ಇಂಥ ಅನುಪಮ್​ ಖೇರ್​ ಅವರು ಈಗ ನೀಡಿರುವ ಒಂದು ಹೇಳಿಕೆ ಅಚ್ಚರಿ ಮೂಡಿಸಿದೆ.

ಪ್ರಸ್ತುತ ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಹಬ್ಬಿದೆ. ಅಂತ್ಯ ಸಂಸ್ಕಾರ ಮಾಡಲು ಕೂಡ ಜನರು ಹಲವೆಡೆ ಕಷ್ಟಪಡುತ್ತಿರುವ ಸನ್ನಿವೇಶ ಎದುರಾಗಿದೆ. ಇದರ ಬಗ್ಗೆ ಮಾತನಾಡಿರುವ ಅನುಪಮ್​ ಖೇರ್​ ಅವರು ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಈ ಅನಾರೋಗ್ಯದ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿದೆ. ಈ ಪರಿಸ್ಥಿತಿಯನ್ನು ಇನ್ನೊಂದು ಪಕ್ಷದವರು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಕೂಡ ಸರಿಯಲ್ಲ. ಸದ್ಯ ಆಗುತ್ತಿರುವುದಕ್ಕೆಲ್ಲ ಸರ್ಕಾರವೇ ಕಾರಣ. ಬರೀ ಇಮೇಜ್​ ಸೃಷ್ಟಿಸಿಕೊಳ್ಳುವುದಕ್ಕಿಂತ ಜನರ ಪ್ರಾಣ ಕೂಡ ಮುಖ್ಯ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು’ ಎಂದು ಅನುಪಮ್​ ಖೇರ್​ ಅವರು ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದಿ ಅನುಪಮ್​ ಖೇರ್​ ಮತ್ತು ಅವರ ಪತ್ನಿ ಕಿರಣ್​ ಖೇರ್​ ಅವರು ಕೊವಿಡ್​ ವ್ಯಾಕ್ಸಿನ್​ ಪಡೆದುಕೊಂಡರು. ಅದಕ್ಕೂ ಮುನ್ನ ಕಿರಣ್​ ಖೇರ್​ ಆರೋಗ್ಯದ ಬಗ್ಗೆ ಗಾಸಿಪ್​ಗಳು ಹರಿದಾಡಿದ್ದವು. ಕಿರಣ್​ ಸಾವಿನ ಸುದ್ದಿಯನ್ನು ತಳ್ಳಿಹಾಕಿರುವ ಅವರು ಸ್ಪಷ್ಟನೆ ನೀಡಿದ್ದರು.

‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದರು.

ಇದನ್ನೂ ಓದಿ:

Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ