AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupam Kher: ಮೋದಿ ಸರ್ಕಾರವನ್ನು ಟೀಕಿಸಿದ ಬಳಿಕ ಮಾರ್ಮಿಕವಾಗಿ ಟ್ವೀಟ್​ ಮಾಡಿ ಉಲ್ಟಾ ಹೊಡೆದ ಅನುಪಮ್​ ಖೇರ್​

Narendra Modi: ಮೋದಿ ಸರ್ಕಾರವನ್ನು ಟೀಕಿಸಿದ ನಂತರ ಅನುಪಮ್​ ಖೇರ್​ಗೆ ಸೋಶಿಯಲ್​ ಮೀಡಿಯಾದಲ್ಲಿ ಬಿಜೆಪಿ ಬೆಂಬಲಿಗರಿಂದ ವಿರೋಧ ವ್ಯಕ್ತವಾಯಿತು. ಅದನ್ನು ಸರಿಪಡಿಸುವ ಸಲುವಾಗಿಯೇ ಅವರು ಈ ರೀತಿ ಮಾರ್ಮಿಕವಾಗಿ ಟ್ವೀಟ್​ ಮಾಡಿದ್ದಾರೆ ಎಂಬ ಅಭಿಪ್ರಾಯ ನೆಟ್ಟಿಗರಿಂದ ಕೇಳಿಬರುತ್ತಿದೆ.

Anupam Kher: ಮೋದಿ ಸರ್ಕಾರವನ್ನು ಟೀಕಿಸಿದ ಬಳಿಕ ಮಾರ್ಮಿಕವಾಗಿ ಟ್ವೀಟ್​ ಮಾಡಿ ಉಲ್ಟಾ ಹೊಡೆದ ಅನುಪಮ್​ ಖೇರ್​
ಅನುಪಮ್ ಖೇರ್
ಮದನ್​ ಕುಮಾರ್​
| Edited By: |

Updated on: May 14, 2021 | 5:22 PM

Share

ಬಾಲಿವುಡ್ ನಟ ಅನುಪಮ್​ ಖೇರ್​ ಅವರು ಯಾವಾಗಲೂ ನರೇಂದ್ರ ಮೋದಿ ಪರ ವಹಿಸಿಕೊಂಡು ಬರುತ್ತಾರೆ ಎಂಬುದು ಗೊತ್ತಿರುವ ವಿಚಾರ. ಮೋದಿ ಸರ್ಕಾರದ ಎಲ್ಲ ಕೆಲಸಗಳನ್ನು ಬಾಯಿ ತುಂಬ ಹೊಗಳುವ ಅನುಪಮ್​ ಖೇರ್​ ಅವರು ಟೀಕೆ ಮಾಡಿದ್ದು ತುಂಬ ಕಡಿಮೆ. ಆದರೆ ಇದೇ ಮೊದಲ ಬಾರಿಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಮಾತುಗಳನ್ನು ಆಡಿದ್ದರು. ಪ್ರಸ್ತುತ ಕೊವಿಡ್ ಬಿಕ್ಕಟ್ಟಿನ ಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ಎಲ್ಲೋ ಎಡವಿದೆ ಎಂದು ಅವರು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು.

ಅನುಪಮ್​ ಖೇರ್​​ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿತ್ತು. ‘ಅನಾರೋಗ್ಯದ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿದೆ. ಈ ಪರಿಸ್ಥಿತಿಯನ್ನು ಇನ್ನೊಂದು ಪಕ್ಷದವರು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಕೂಡ ಸರಿಯಲ್ಲ. ಸದ್ಯ ಆಗುತ್ತಿರುವುದಕ್ಕೆಲ್ಲ ಸರ್ಕಾರವೇ ಕಾರಣ. ಬರೀ ಇಮೇಜ್​ ಸೃಷ್ಟಿಸಿಕೊಳ್ಳುವುದಕ್ಕಿಂತ ಜನರ ಪ್ರಾಣ ಕೂಡ ಮುಖ್ಯ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು’ ಎಂದು ಅನುಪಮ್​ ಖೇರ್​ ಹೇಳಿದ್ದರು.

ಅನುಪಮ್​ ಖೇರ್​ ಅವರ ಈ ಹೇಳಿಕೆ ಕುರಿತಂತೆ ಸಾಕಷ್ಟು ಚರ್ಚೆ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪರ-ವಿರೋಧದ ಮಾತುಗಳು ಕೇಳಿಬಂದಿವೆ. ಅದರ ಬೆನ್ನಲ್ಲೇ ಅನುಪಮ್​ ಖೇರ್​ ಹೊಸದೊಂದು ಟ್ವೀಟ್​ ಮಾಡಿದ್ದಾರೆ. ಅದರಲ್ಲಿ ಮಾರ್ಮಿಕವಾಗಿ ನುಡಿದಿದ್ದಾರೆ. ‘ಕೆಲಸ ಮಾಡುವವರಿಂದ ಮಾತ್ರ ತಪ್ಪುಗಳು ಆಗಲು ಸಾಧ್ಯ. ಏನೂ ಮಾಡದೇ ಇರುವವರು ಬೇರೆಯವರ ತಪ್ಪು ಕಂಡುಹಿಡಿಯುವುದರಲ್ಲೇ ತಮ್ಮ ಜೀವನ ಕಳೆಯುತ್ತಾರೆ’ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಮೋದಿ ಸರ್ಕಾರವನ್ನು ಟೀಕಿಸಿದ ಬಳಿಕ ಅನುಪಮ್​ ಖೇರ್​ಗೆ ಸೋಶಿಯಲ್​ ಮೀಡಿಯಾದಲ್ಲಿ ಬಿಜೆಪಿ ಬೆಂಬಲಿಗರಿಂದ ವಿರೋಧ ವ್ಯಕ್ತವಾಯಿತು. ಅದನ್ನು ಸರಿಪಡಿಸುವ ಸಲುವಾಗಿಯೇ ಅವರು ಈ ರೀತಿ ಮಾರ್ಮಿಕವಾಗಿ ಟ್ವೀಟ್​ ಮಾಡಿದ್ದಾರೆ ಎಂಬ ಅಭಿಪ್ರಾಯ ನೆಟ್ಟಿಗರಿಂದ ಕೇಳಿಬರುತ್ತಿದೆ. ಆದರೆ ಆ ಬಗ್ಗೆ ಅನುಪಮ್​ ಖೇರ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ಅವರು ಕೊವಿಡ್ ವ್ಯಾಕ್ಸಿನ್​ ಹಾಕಿಸಿಕೊಂಡಿದ್ದಾರೆ. ಅವರ ಪತ್ನಿ ಕಿರಣ್​ ಖೇರ್​ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಕಿರಣ್​ ಆರೋಗ್ಯದ ಬಗ್ಗೆ ಅನೇಕ ವದಂತಿಗಳು ಹಬ್ಬಿದ್ದವು. ಆದರೆ ಅದನ್ನೆಲ್ಲ ಅನುಪಮ್​ ಖೇರ್​ ತಳ್ಳಿ ಹಾಕಿದರು.

ಇದನ್ನೂ ಓದಿ:

ನಿಮ್ಮ ಇಮೇಜ್​ಗಿಂತ ಜನರ ಪ್ರಾಣ ಮುಖ್ಯ; ಮೋದಿ ಸರ್ಕಾರವನ್ನು ಟೀಕಿಸಿ ಅಚ್ಚರಿ ಮೂಡಿಸಿದ ಅನುಪಮ್​ ಖೇರ್​

Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್