AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಸೋಶಿಯಲ್ ಮೀಡಿಯಾ, ನಾನು ಏನು ಬೇಕಾದ್ರೂ ಪೋಸ್ಟ್ ಮಾಡ್ತೀನಿ’; ಅನುಪಮಾ ಪರಮೇಶ್ವರನ್

ನಟಿ ಅನುಪಮಾ ಪರಮೇಶ್ವರನ್ ಹಾಗೂ ಧ್ರುವ್ ವಿಕ್ರಮ್ ನಡುವಿನ ಬ್ರೇಕಪ್ ವದಂತಿಗಳಿಗೆ ನಟಿ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಯಾರಿಗೂ ಏನೂ ತಿಳಿಯದು. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮಗೆ ಇಷ್ಟ ಬಂದಿದ್ದನ್ನು ಪೋಸ್ಟ್ ಮಾಡುವುದಾಗಿ ಖಡಕ್ ಆಗಿ ಹೇಳಿದ್ದಾರೆ.

‘ನನ್ನ ಸೋಶಿಯಲ್ ಮೀಡಿಯಾ, ನಾನು ಏನು ಬೇಕಾದ್ರೂ ಪೋಸ್ಟ್ ಮಾಡ್ತೀನಿ’; ಅನುಪಮಾ ಪರಮೇಶ್ವರನ್
ಅನುಪಮಾ
ರಾಜೇಶ್ ದುಗ್ಗುಮನೆ
|

Updated on: Aug 03, 2026 | 11:54 AM

Share

ಮಲಯಾಳಂ ಮೂಲದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಹಾಗೂ ಅವರ ಸಹನಟ ಧ್ರುವ್ ವಿಕ್ರಮ್ ನಡುವೆ ಬ್ರೇಕಪ್ ಆಗಿದೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದವು. ಅನುಪಮಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾಕಷ್ಟು ಕ್ರಿಪ್ಟಿಕ್ ಪೋಸ್ಟ್‌ಗಳನ್ನು ಹಂಚಿಕೊಂಡ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈ ಪೋಸ್ಟ್​​ಗಳ ಬಗ್ಗೆ ನಟಿ ಅನುಪಮಾ ಕಾರ್ಯಕ್ರಮವೊಂದರಲ್ಲಿ ಖಡಕ್ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ನಡೆದ ಅವರ ಮುಂಬರುವ ಚಿತ್ರದ ಇವೆಂಟ್‌ನಲ್ಲಿ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ನೀವು ಹಂಚಿಕೊಳ್ಳುತ್ತಿರುವ ಪೋಸ್ಟ್‌ಗಳ ಮೂಲಕ ನಿಮ್ಮ ಒಳಗಿನ ನೋವನ್ನು ಹೊರಹಾಕುತ್ತಿದ್ದೀರಾ? ಇದು ನಿಜಕ್ಕೂ ಅಗತ್ಯವಿತ್ತಾ?’ ಎಂದು ಪ್ರಶ್ನಿಸಲಾಗಿದೆ.

ಇದಕ್ಕೆ ಉತ್ತರಿಸಿದ ನಟಿ, ’ಇದು ನನ್ನ ಸೋಶಿಯಲ್ ಮೀಡಿಯಾ ಖಾತೆ. ಅದರಲ್ಲಿ ಏನನ್ನು ಪೋಸ್ಟ್ ಮಾಡಬೇಕು ಎಂಬುದನ್ನು ನಾನೇ ನಿರ್ಧರಿಸುತ್ತೇನೆ. ನಾನು ನನ್ನ ಒಳಗಿನ ಬೇಸರವನ್ನೇನೂ ಹೊರಹಾಕುತ್ತಿರಲಿಲ್ಲ. ಬದಲಿಗೆ, ಮಹಿಳೆಯೊಬ್ಬಳ ಜೀವನದ ಬದಲಾವಣೆಗಳ ಬಗ್ಗೆ ಮಾತನಾಡುತ್ತಿದ್ದೆ. ಹಾಗೆ ಮಾಡಿದ್ದಕ್ಕೆ ನನಗೆ ಹೆಮ್ಮೆ ಇದೆ’ ಎಂದಿದ್ದಾರೆ.

ಇದನ್ನೂ ಓದಿ: ಧ್ರುವ್ ವಿಕ್ರಮ್ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ಅನುಪಮಾ ಪರಮೇಶ್ವರನ್

‘ಇದು ನಿಮ್ಮ ಎದುರಾಳಿಯನ್ನು ದೂಷಿಸುವ ತಂತ್ರ ಅಲ್ಲವೇ’ ಎಂದು ಮರು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ನಟಿ ಮತ್ತಷ್ಟು ಗರಂ ಆಗಿದ್ದಾರೆ. ‘ನಿಮಗೆ ನನ್ನ ಬಗ್ಗೆ ಏನು ಗೊತ್ತು? ನನ್ನ ವೈಯಕ್ತಿಕ ಜೀವನದ ಬಗ್ಗೆ ನಿಮಗೆ ಏನು ತಿಳಿದಿದೆ? ಯಾರಿಗೂ ಏನೂ ಗೊತ್ತಿಲ್ಲ. ಆದ್ದರಿಂದ ಇದು ಸರಿ ಅಲ್ಲ. ನನ್ನ ಇನ್‌ಸ್ಟಾಗ್ರಾಮ್‌ನಲ್ಲಿ ನನಗೆ ಇಷ್ಟ ಬಂದಿದ್ದನ್ನು ನಾನು ಪೋಸ್ಟ್ ಮಾಡುತ್ತೇನೆ’ ಎಂದು ಹೇಳುವ ಮೂಲಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ವದಂತಿ ಹಬ್ಬಿಸುವವರಿಗೆ ನೇರವಾಗಿಯೇ ತಪರಾಕಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್