AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟ ಸಾರ್ವಭೌಮ’ ಸಿನಿಮಾ ನಟಿಯ ಲಿಪ್​ ಕಿಸ್​ ಪುರಾಣ; ಸಖತ್ ಟ್ರೋಲ್​ ಆಗುತ್ತಿರುವ ಅನುಪಮಾ

Anupama Parameswaran: ವೃತ್ತಿ ಜೀವನದಲ್ಲಿ ಅನುಪಮಾ ಪರಮೇಶ್ವರನ್​ ಅವರು ಕಿಸ್ಸಿಂಗ್​ ದೃಶ್ಯದಲ್ಲಿ ನಟಿಸಿರುವುದು ಇದೇ ಮೊದಲು. ಆ ಕಾರಣದಿಂದಲೂ ‘ರೌಡಿ ಬಾಯ್ಸ್​’ ಸಿನಿಮಾ ಹೈಪ್​ ಪಡೆದುಕೊಂಡಿದೆ.

‘ನಟ ಸಾರ್ವಭೌಮ’ ಸಿನಿಮಾ ನಟಿಯ ಲಿಪ್​ ಕಿಸ್​ ಪುರಾಣ; ಸಖತ್ ಟ್ರೋಲ್​ ಆಗುತ್ತಿರುವ ಅನುಪಮಾ
ಅನುಪಮಾ ಪರಮೇಶ್ವರನ್​, ಆಶಿಶ್​ ರೆಡ್ಡಿ
TV9 Web
| Edited By: |

Updated on:Jan 10, 2022 | 11:09 AM

Share

ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran)​ ಅವರು ಇಡೀ ದಕ್ಷಿಣ ಭಾರತದಲ್ಲಿ ಫೇಮಸ್​ ಆಗಿದ್ದಾರೆ. ಮಲಯಾಳಂ ಚಿತ್ರರಂಗದವರಾದ ಅವರು ತೆಲುಗು ಮತ್ತು ತಮಿಳಿನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಜೊತೆ ‘ನಟ ಸಾರ್ವಭೌಮ’ (Nata Sarvabhouma) ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿಪ್ರಿಯರಿಗೂ ಅವರು ಪರಿಚಿತರಾದರು. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಈಗ ಅವರು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಒಂದು ಲಿಪ್​ ಕಿಸ್​! ಹೌದು, ತಾವು ನಟಿಸಿರುವ ‘ರೌಡಿ ಬಾಯ್ಸ್​’ (Rowdy Boys) ಸಿನಿಮಾದಲ್ಲಿ ಅನುಪಮಾ ಅವರು ಲಿಪ್​ ಕಿಸ್​ ಮಾಡಿ ಸುದ್ದಿ ಆಗುತ್ತಿದ್ದಾರೆ. ಆ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು, ಸಖತ್​ ಸದ್ದು ಮಡುತ್ತಿದೆ. 

ಅನುಪಮಾ ಪರಮೇಶ್ವರನ್​ ಅವರು ‘ರೌಡಿ ಬಾಯ್ಸ್​’ ಸಿನಿಮಾದಲ್ಲಿ ಹೊಸ ನಟ ಆಶಿಶ್​ ರೆಡ್ಡಿ ಜೊತೆ ತೆರೆಹಂಚಿಕೊಂಡಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ದಿಲ್​ ರಾಜ್​ ಅವರ ಸಹೋದರನ ಮಗನೇ ಆಶಿಶ್​ ರೆಡ್ಡಿ. ಸ್ಟಾರ್​ ನಿರ್ಮಾಪಕರ ಮನೆಮಗನ ಸಿನಿಮಾ ಎಂಬ ಕಾರಣಕ್ಕೆ ನಟಿಯರು ಲಿಪ್​ ಕಿಸ್​ ಮಾಡಲು ಸಿದ್ಧರಿರುತ್ತಾರೆ ಎಂದು ಕೆಲವು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ವೃತ್ತಿ ಜೀವನದಲ್ಲಿ ಅನುಪಮಾ ಪರಮೇಶ್ವರನ್​ ಅವರು ಕಿಸ್ಸಿಂಗ್​ ದೃಶ್ಯದಲ್ಲಿ ನಟಿಸಿರುವುದು ಇದೇ ಮೊದಲು. ಆ ಕಾರಣದಿಂದಲೂ ‘ರೌಡಿ ಬಾಯ್ಸ್​’ ಸಿನಿಮಾ ಹೈಪ್​ ಪಡೆದುಕೊಂಡಿದೆ. ಇದು ಟ್ರೇಲರ್​ನಲ್ಲಿ ಇರುವ ಝಲಕ್​ ಮಾತ್ರ. ಸಿನಿಮಾದಲ್ಲಿ ಇದೇ ರೀತಿ 3-4 ಕಿಸ್ಸಿಂಗ್​ ದೃಶ್ಯಗಳಿವೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಸಹ ನಟನಿಗೆ ದೀಪಿಕಾ ಪಡುಕೋಣೆ ಕಿಸ್​; ವೈರಲ್​ ಆಗುತ್ತಿದೆ ಹೊಸ ಸಿನಿಮಾದ ಟೀಸರ್​

ಆಲಿಯಾಗೆ ಲಿಪ್​ ಲಾಕ್​ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್​ ಮಾಡಿದ ರಣವೀರ್​ ಸಿಂಗ್? ಏನಿದು ಕಥೆ?

Published On - 10:16 am, Mon, 10 January 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ