AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟ ಸಾರ್ವಭೌಮ’ ಸಿನಿಮಾ ನಟಿಯ ಲಿಪ್​ ಕಿಸ್​ ಪುರಾಣ; ಸಖತ್ ಟ್ರೋಲ್​ ಆಗುತ್ತಿರುವ ಅನುಪಮಾ

Anupama Parameswaran: ವೃತ್ತಿ ಜೀವನದಲ್ಲಿ ಅನುಪಮಾ ಪರಮೇಶ್ವರನ್​ ಅವರು ಕಿಸ್ಸಿಂಗ್​ ದೃಶ್ಯದಲ್ಲಿ ನಟಿಸಿರುವುದು ಇದೇ ಮೊದಲು. ಆ ಕಾರಣದಿಂದಲೂ ‘ರೌಡಿ ಬಾಯ್ಸ್​’ ಸಿನಿಮಾ ಹೈಪ್​ ಪಡೆದುಕೊಂಡಿದೆ.

‘ನಟ ಸಾರ್ವಭೌಮ’ ಸಿನಿಮಾ ನಟಿಯ ಲಿಪ್​ ಕಿಸ್​ ಪುರಾಣ; ಸಖತ್ ಟ್ರೋಲ್​ ಆಗುತ್ತಿರುವ ಅನುಪಮಾ
ಅನುಪಮಾ ಪರಮೇಶ್ವರನ್​, ಆಶಿಶ್​ ರೆಡ್ಡಿ
TV9 Web
| Edited By: |

Updated on:Jan 10, 2022 | 11:09 AM

Share

ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran)​ ಅವರು ಇಡೀ ದಕ್ಷಿಣ ಭಾರತದಲ್ಲಿ ಫೇಮಸ್​ ಆಗಿದ್ದಾರೆ. ಮಲಯಾಳಂ ಚಿತ್ರರಂಗದವರಾದ ಅವರು ತೆಲುಗು ಮತ್ತು ತಮಿಳಿನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಜೊತೆ ‘ನಟ ಸಾರ್ವಭೌಮ’ (Nata Sarvabhouma) ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿಪ್ರಿಯರಿಗೂ ಅವರು ಪರಿಚಿತರಾದರು. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಈಗ ಅವರು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಒಂದು ಲಿಪ್​ ಕಿಸ್​! ಹೌದು, ತಾವು ನಟಿಸಿರುವ ‘ರೌಡಿ ಬಾಯ್ಸ್​’ (Rowdy Boys) ಸಿನಿಮಾದಲ್ಲಿ ಅನುಪಮಾ ಅವರು ಲಿಪ್​ ಕಿಸ್​ ಮಾಡಿ ಸುದ್ದಿ ಆಗುತ್ತಿದ್ದಾರೆ. ಆ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು, ಸಖತ್​ ಸದ್ದು ಮಡುತ್ತಿದೆ. 

ಅನುಪಮಾ ಪರಮೇಶ್ವರನ್​ ಅವರು ‘ರೌಡಿ ಬಾಯ್ಸ್​’ ಸಿನಿಮಾದಲ್ಲಿ ಹೊಸ ನಟ ಆಶಿಶ್​ ರೆಡ್ಡಿ ಜೊತೆ ತೆರೆಹಂಚಿಕೊಂಡಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ದಿಲ್​ ರಾಜ್​ ಅವರ ಸಹೋದರನ ಮಗನೇ ಆಶಿಶ್​ ರೆಡ್ಡಿ. ಸ್ಟಾರ್​ ನಿರ್ಮಾಪಕರ ಮನೆಮಗನ ಸಿನಿಮಾ ಎಂಬ ಕಾರಣಕ್ಕೆ ನಟಿಯರು ಲಿಪ್​ ಕಿಸ್​ ಮಾಡಲು ಸಿದ್ಧರಿರುತ್ತಾರೆ ಎಂದು ಕೆಲವು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ವೃತ್ತಿ ಜೀವನದಲ್ಲಿ ಅನುಪಮಾ ಪರಮೇಶ್ವರನ್​ ಅವರು ಕಿಸ್ಸಿಂಗ್​ ದೃಶ್ಯದಲ್ಲಿ ನಟಿಸಿರುವುದು ಇದೇ ಮೊದಲು. ಆ ಕಾರಣದಿಂದಲೂ ‘ರೌಡಿ ಬಾಯ್ಸ್​’ ಸಿನಿಮಾ ಹೈಪ್​ ಪಡೆದುಕೊಂಡಿದೆ. ಇದು ಟ್ರೇಲರ್​ನಲ್ಲಿ ಇರುವ ಝಲಕ್​ ಮಾತ್ರ. ಸಿನಿಮಾದಲ್ಲಿ ಇದೇ ರೀತಿ 3-4 ಕಿಸ್ಸಿಂಗ್​ ದೃಶ್ಯಗಳಿವೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಸಹ ನಟನಿಗೆ ದೀಪಿಕಾ ಪಡುಕೋಣೆ ಕಿಸ್​; ವೈರಲ್​ ಆಗುತ್ತಿದೆ ಹೊಸ ಸಿನಿಮಾದ ಟೀಸರ್​

ಆಲಿಯಾಗೆ ಲಿಪ್​ ಲಾಕ್​ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್​ ಮಾಡಿದ ರಣವೀರ್​ ಸಿಂಗ್? ಏನಿದು ಕಥೆ?

Published On - 10:16 am, Mon, 10 January 22

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ