‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಸಖತ್ ಬೋಲ್ಡ್ ಅವತಾರ ತಾಳಿದ ಅನುಪಮಾ ಪರಮೇಶ್ವರನ್

‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಅನುಪಮಾ ಪರಮೇಶ್ವರನ್ ಹಾಗೂ ಸಿದ್ದು ಜೊನ್ನಲಗಡ್ಡ ನಟಿಸಿದ್ದಾರೆ. ಇದು 2022ರಲ್ಲಿ ಬಂದ ‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್ ಆಗಿದೆ. ‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಸಿದ್ದುಗೆ ಜೊತೆಯಾಗಿ ನೇಹಾ ಶೆಟ್ಟಿ ನಟಿಸಿದ್ದರು. ಈ ಬಾರಿ ಅನುಪಮಾ ಪರಮೇಶ್ವರನ್ ಅವರ ಆಗಮನ ಆಗಿದೆ.

‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಸಖತ್ ಬೋಲ್ಡ್ ಅವತಾರ ತಾಳಿದ ಅನುಪಮಾ ಪರಮೇಶ್ವರನ್
ಅನುಪಮಾ
Follow us
|

Updated on: Feb 15, 2024 | 7:27 AM

ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಪಕ್ಕದಮನೆ ಹುಡುಗಿ ರೀತಿಯ ಪಾತ್ರ ಮಾಡಿ ಗಮನ ಸೆಳೆದವರು. ಈ ರೀತಿ ಪಾತ್ರಗಳ ಮೂಲಕ ಅವರು ಸಾಕಷ್ಟು ಇಷ್ಟವಾಗಿದ್ದಾರೆ. ಇತ್ತೀಚೆಗೆ ಅವರು ಬೋಲ್ಡ್ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳೋಕೆ ಆರಂಭಿಸಿದ್ದಾರೆ. ‘ರೌಡಿ ಬಾಯ್ಸ್’ ಚಿತ್ರದಲ್ಲಿ ಲಿಪ್ ಲಾಕ್ ದೃಶ್ಯಗಳು ಇದ್ದವು. ಆದರೆ, ಈ ಸಿನಿಮಾ ಅಷ್ಟು ಗಮನ ಸೆಳೆಯಲಿಲ್ಲ. ಈಗ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಮತ್ತೆ ಹಾಟ್ ಅವತಾರ ತಾಳಿದ್ದಾರೆ. ಈ ಬಾರಿಯಾದರೂ ಅನುಪಮಾಗೆ ಯಶಸ್ಸು ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಸಿದ್ದು ಜೊನ್ನಲಗಡ್ಡ ಹಾಗೂ ಅನುಪಮಾ ಪರಮೇಶ್ವರನ್ ಅವರು ನಟಿಸಿದ್ದಾರೆ. ಇದು 2022ರಲ್ಲಿ ಬಂದ ‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್. ಮೊದಲ  ಭಾಗದಲ್ಲಿ ಸಿದ್ದುಗೆ ಜೊತೆಯಾಗಿ ನೇಹಾ ಶೆಟ್ಟಿ ನಟಿಸಿದ್ದರು. ಈ ಬಾರಿ ಅನುಪಮಾ ಪರಮೇಶ್ವರನ್ ಅವರ ಆಗಮನ ಆಗಿದೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ನಟಿ ಅನುಪಮಾ ಪರಮೇಶ್ವರನ್​ ಮನೆಯಲ್ಲಿ ಅದ್ದೂರಿಯಾಗಿದೆ ದೀಪಾವಳಿ ಹಬ್ಬ

ಮಾರ್ಚ್ 29ರಂದು ‘ಟಿಲ್ಲು ಸ್ಕ್ವೇರ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಅನುಪಮಾ ಅವರ ಲಿಪ್​ ಲಾಕ್ ದೃಶ್ಯಗಳ ಮೂಲಕ ಗಮನ ಸೆಳೆದಿದ್ದಾರೆ. ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇತ್ತೀಚೆಗಷ್ಟೇ ಅವರ ನಟನೆಯ ‘ಈಗಲ್’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ. ಈ ಬೆನ್ನಲ್ಲೇ ಅವರ ಮತ್ತೊಂದು ಸಿನಿಮಾ ರಿಲೀಸ್​ಗೆ ರೆಡಿ ಇದೆ. ‘ಟಿಲ್ಲು ಸ್ಕ್ವೇರ್’ ಚಿತ್ರವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ ವಂಶಿ ಅವರು ನಿರ್ಮಾಣ ಮಾಡಿದ್ದಾರೆ.

ಅನುಪಮಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2015ರಲ್ಲಿ. ಅವರ ನಟನೆಯ ಮೊದಲ ಸಿನಿಮಾ ‘ಪ್ರೇಮಂ’. ಈ ಚಿತ್ರ ಸೂಪರ್ ಹಿಟ್ ಆಯಿತು. ಅಲ್ಲಿಂದ ಅನುಪಮಾ ಖ್ಯಾತಿ ಹೆಚ್ಚಿತು. ಅವರಿಗೆ ಪಕ್ಕದ ಮನೆ ಹುಡುಗಿ ರೀತಿಯ ಪಾತ್ರಗಳೇ ಹೆಚ್ಚು ಹುಡುಕಿ ಬಂದವು. ಅವರು ಕನ್ನಡದಲ್ಲೂ ನಟಿಸಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಚಿತ್ರದಲ್ಲಿ ಅನುಪಮಾ ಬಣ್ಣ ಹಚ್ಚಿದ್ದಾರೆ. ಈ ಮೂಲಕ ಸ್ಯಾಂಡಲ್​ವುಡ್​ ಮಂದಿಗೂ ಪರಿಚಯ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು