AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?

ಇಂಟರ್​ನೆಟ್​ನಲ್ಲಿ ಅನುಪಮಾ ಪರಮೇಶ್ವರ್​ ಫೋಟೋ ಇರುವ ಒಂದು ಮಾರ್ಕ್ಸ್​ ಕಾರ್ಡ್​ ವೈರಲ್​ ಆಗುತ್ತಿದೆ. ಈ ಹಿಂದೆ ನಟಿ ಸನ್ನಿ ಲಿಯೋನ್​ ಅವರ ವಿಚಾರದಲ್ಲಿಯೂ ಹಾಗೇ ಆಗಿತ್ತು.

ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?
ಅನುಪಮಾ ಪರಮೇಶ್ವರನ್​
ಮದನ್​ ಕುಮಾರ್​
|

Updated on: Jun 25, 2021 | 9:58 AM

Share

ನಟಿ ಅನುಪಮಾ ಪರಮೇಶ್ವರನ್​ ಅವರು ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡಿದ್ದಾರೆ. ‘ನಟ ಸಾರ್ವಭೌಮ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸುವ ಮೂಲಕ ಅವರು ಕನ್ನಡ ಸಿನಿಪ್ರಿಯರಿಗೂ ಪರಿಚಯ ಆಗಿದ್ದಾರೆ. ಸಿನಿಮಾಗಳ ಕಾರಣದಿಂದ ಅನುಪಮಾ ಆಗಾಗ ಸುದ್ದಿ ಆಗುತ್ತಾರೆ. ಆದರೆ ಅವರೀಗ ನಕಲಿ ಮಾರ್ಕ್ಸ್​ ಕಾರ್ಡ್​ ಕಾರಣದಿಂದ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದ್ದಾರೆ. ಆ ನಕಲಿ ಅಂಕಪಟ್ಟಿ ಯಾರದ್ದು? ಅದನ್ನೂ ಅನುಪಮಾಗೂ ಏನು ಸಂಬಂಧ? ಇಲ್ಲಿದೆ ಮಾಹಿತಿ.

ಇಂಟರ್​ನೆಟ್​ನಲ್ಲಿ ಅನುಪಮಾ ಪರಮೇಶ್ವರ್​ ಫೋಟೋ ಇರುವ ಒಂದು ಮಾರ್ಕ್ಸ್​ ಕಾರ್ಡ್​ ವೈರಲ್​ ಆಗುತ್ತಿದೆ. ಬಿಹಾರದ ಟೀಚರ್ಸ್​​ ಎಲಿಜಿಬಲಿಟಿ ಟೆಸ್ಟ್​ನಲ್ಲಿ (STET) ರಿಷಿಕೇಶ್​ ಕುಮಾರ್​ ಎಂಬುದವವರು ಪಾಸ್​ ಆಗಿದ್ದಾರೆ. ತಮ್ಮ ರಿಸಲ್ಟ್​ ನೋಡಲು ಅವರು ಆನ್​ಲೈನ್​ನಲ್ಲಿ ಲಾಗಿನ್​ ಆದಾಗ ಅವರಿಗೆ ತಮ್ಮ ಮಾರ್ಕ್ಸ್​ ಕಾರ್ಡ್​ ನೋಡಿ ಶಾಕ್​ ಆಗಿದೆ. ಅದಕ್ಕೆ ಕಾರಣ ಅನುಪಮಾ ಪರಮೇಶ್ವರನ್​ ಫೋಟೋ.

ಹೌದು, ರಿಷಿಕೇಶ್​ ಕುಮಾರ್​ ಅವರ ಹಾಲ್​ಟಿಕೆಟ್​ ಮತ್ತು ಮಾರ್ಕ್ಸ್​ ಕಾರ್ಡ್​ನಲ್ಲಿ ಅನುಪಮಾ ಪರಮೇಶ್ವರನ್​ ಫೋಟೋ ಕಾಣಿಸಿಕೊಂಡಿದೆ. ಹಾಗಾಗಿ ಇದರಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಅನುಪಮಾ ಪರಮೇಶ್ವರನ್​ ಫೋಟೋ ಇಲ್ಲಿ ಬರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ನಟಿ ಸನ್ನಿ ಲಿಯೋನ್​ ಅವರ ವಿಚಾರದಲ್ಲಿಯೂ ಹಾಗೇ ಆಗಿತ್ತು. ಕಾಲೇಜಿನ ಪರೀಕ್ಷೆಯೊಂದರ ಫಲಿತಾಂಶದ ಪಟ್ಟಿಯಲ್ಲಿ ಸನ್ನಿ ಲಿಯೋನ್​ ಹೆಸರು ಕಾಣಿಸಿಕೊಂಡು ವೈರಲ್​ ಆಗಿತ್ತು. ಯಾವುದೋ ವಿದ್ಯಾರ್ಥಿ ಮಾಡಿದ ಕಿತಾಪತಿಯಿಂದ ಆ ರೀತಿ ಆಗಿದೆ ಎಂದು ಊಹಿಸಲಾಗಿತ್ತು. ಆದರೆ ಈಗ ಅನುಪಮಾ ಪರಮೇಶ್ವರನ್​ ವಿಚಾರದಲ್ಲಿ ಏನಾಗಿದೆ ಎಂಬುದು ಗೊತ್ತಾಗಬೇಕಿದೆ.

ಇದನ್ನೂ ಓದಿ:

ಪರೀಕ್ಷೆಯ ಮೇಲ್ವಿಚಾರಕರಿಂದ ಅನುಚಿತ ವರ್ತನೆ: ಕ್ರೈಸ್ಟ್ ಯೂನಿವರ್ಸಿಟಿ ವಿದ್ಯಾರ್ಥಿಗಳಿಂದ ಆರೋಪ

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದ ಮಹತ್ವದ ಮಾರ್ಗಸೂಚಿ ಬಿಡುಗಡೆ: ವಿವರ ಇಲ್ಲಿದೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್