AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರ ಎದುರು ಕಿಸ್​ ಮಾಡೋದು ಬಲು ಕಷ್ಟ ಎಂದ ನಟಿ ಅನುಪಮಾ ಪರಮೇಶ್ವರನ್

Anupama Parameswaran: ಅನುಪಮಾ ಪರಮೇಶ್ವರನ್ ಈ ಮೊದಲು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಕಡಿಮೆ. ಇತ್ತೀಚೆಗೆ ಅವರು ಅಂಥ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರು ‘ಟಿಲ್ಲು ಸ್ಕ್ವೇರ್​’ ಚಿತ್ರದಲ್ಲಿ ಲಿಲ್ಲಿ ಪಾತ್ರ ಮಾಡಿದ್ದಾರೆ. ಈ ಚಿತ್ರದ ಒಂದು ಹಾಡಿನಲ್ಲಿ ಅವರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

ಎಲ್ಲರ ಎದುರು ಕಿಸ್​ ಮಾಡೋದು ಬಲು ಕಷ್ಟ ಎಂದ ನಟಿ ಅನುಪಮಾ ಪರಮೇಶ್ವರನ್
ಅನುಪಮಾ
ರಾಜೇಶ್ ದುಗ್ಗುಮನೆ
|

Updated on:Mar 27, 2024 | 8:37 AM

Share

ಸಿನಿಮಾಗಾಗಿ ಕೆಲವು ನಟ-ನಟಿಯರು ಬೋಲ್ಡ್ ದೃಶ್ಯಗಳನ್ನು ಮಾಡಲು ಒಪ್ಪಿಕೊಳ್ಳುತ್ತಾರೆ. ಸಿನಿಮಾದ ದೃಶ್ಯ ಅದನ್ನು ಕೇಳುತ್ತಿದೆ ಎಂದಾಗ ಅದನ್ನು ಅರಿತು ನಟಿಸಲು ನಟ-ನಟಿಯರು ಒಪ್ಪುತ್ತಾರೆ. ಈ ರೀತಿ ದೃಶ್ಯಗಳನ್ನು ಶೂಟ್ ಮಾಡುವಾಗ ಇಡೀ ತಾಂತ್ರಿಕ ವರ್ಗ ಅಲ್ಲಿರುತ್ತದೆ. ಈ ರೀತಿಯ ದೃಶ್ಯಗಳನ್ನು ಮಾಡೋದು ಬಲು ಕಷ್ಟ ಎಂದು ನಟಿ ಅನುಪಮಾ ಪರಮೇಶ್ವರನ್ ಅವರು ಹೇಳಿಕೊಂಡಿದ್ದಾರೆ. ಅವರ ನಟನೆಯ ‘ಟಿಲ್ಲು ಸ್ಕ್ವೇರ್’ ಸಿನಿಮಾ (Tillu Square Movie) ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಬರೋ ಇಂಟಿಮೇಟ್ ದೃಶ್ಯದ ಬಗ್ಗೆ ಅವರು ಮಾತನಾಡಿದ್ದಾರೆ.

ಅನುಪಮಾ ಪರಮೇಶ್ವರನ್ ಈ ಮೊದಲು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಕಡಿಮೆ. ಇತ್ತೀಚೆಗೆ ಅವರು ಅಂಥ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರು ‘ಟಿಲ್ಲು ಸ್ಕ್ವೇರ್​’ ಚಿತ್ರದಲ್ಲಿ ಲಿಲ್ಲಿ ಪಾತ್ರ ಮಾಡಿದ್ದಾರೆ. ಈ ಚಿತ್ರದ ಒಂದು ಹಾಡಿನಲ್ಲಿ ಅವರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಕಿಸ್ಸಿಂಗ್ ದೃಶ್ಯಗಳು ವೈರಲ್ ಆಗಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಅನುಪಮಾ ಮಾತು

‘ರೊಮ್ಯಾಂಟಿಕ್ ದೃಶ್ಯ ಮಾಡೋದು ಸುಲಭದ ಮಾತಲ್ಲ. ಇಬ್ಬರು ಇಂಟಿಮೇಟ್ ಆಗೋದು ಖಾಸಗಿ ಕ್ಷಣ. ಆದರೆ ಶೂಟ್​ಗಾಗಿ 100 ಜನರ ಎದುರು ಅದನ್ನು ಮಾಡಬೇಕು. ಕಾರ್​ನಲ್ಲಿ ಕಿಸ್ ಮಾಡೋ ದೃಶ್ಯ ಸಖತ್ ಕಷ್ಟ ಆಗಿತ್ತು. ಕಾಲಿಗೆ ಎರಡು ಕಡೆಗಳಲ್ಲಿ ಗಾಯ ಆಗಿತ್ತು. ಆದರೂ ಆ್ಯಕ್ಟ್ ಮಾಡಲೇಬೇಕು. ರೊಮ್ಯಾನ್ಸ್ ಮಾಡೋದು ಸುಲಭ ಎಂದು ಪ್ರೇಕ್ಷಕರು ಭಾವಿಸುತ್ತಾರೆ. ಆದರೆ, ಅದು ಅಷ್ಟು ಸುಲಭ ಅಲ್ಲ’ ಎಂದಿದ್ದಾರೆ ಅನುಪಮಾ.

ಇದನ್ನೂ ಓದಿ: ‘ಅಡಲ್ಟ್ ಕಂಟೆಂಟ್ ಇಲ್ಲ’; ಅನುಪಮಾ ಪರಮೇಶ್ವರನ್ ನಟನೆಯ ಚಿತ್ರಕ್ಕೆ ಸಿಕ್ತು ಸ್ಪಷ್ಟನೆ

ಅನುಪಮಾ ಪರಮೇಶ್ವರನ್ ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಚಿತ್ರದಲ್ಲೂ ಅವರು ನಟಿಸಿದರು. ಸಿದ್ದು ಜೊನ್ನಲಗಡ್ಡ ಹಾಗೂ ಅನುಪಮಾ ಜೊತೆಯಾಗಿ ‘ಟಿಲ್ಲು ಸ್ಕ್ವೇರ್​’ನಲ್ಲಿ ನಟಿಸಿದ್ದಾರೆ. ಮಾರ್ಚ್ 29ರಂದು ಈ ಚಿತ್ರ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:45 am, Wed, 27 March 24

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!