AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗ್ನ​ ಫೋಟೋ ಹಂಚಿಕೊಂಡ ಅನುಪಮಾ ಪರಮೇಶ್ವರನ್​; ಇದರ ಹಿಂದಿದೆ ಒಂದೊಳ್ಳೇ ಉದ್ದೇಶ

Anupama Parameswaran: ಪೇಜ್​ ಒಂದರಲ್ಲಿ ಹಾಕಲಾದ ಪೋಸ್ಟ್​ಅನ್ನು ಅನುಪಮಾ ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ನ್ಯೂಡ್​ ಫೋಟೋ ಇದಾಗಿದ್ದು, ಈ ಬಗ್ಗೆ ಅವರು ಒಂದಷ್ಟು ವಿಚಾರಗಳನ್ನು ಬರೆದುಕೊಂಡಿದ್ದಾರೆ.

ನಗ್ನ​ ಫೋಟೋ ಹಂಚಿಕೊಂಡ ಅನುಪಮಾ ಪರಮೇಶ್ವರನ್​; ಇದರ ಹಿಂದಿದೆ ಒಂದೊಳ್ಳೇ ಉದ್ದೇಶ
ನ್ಯೂಡ್​ ಫೋಟೋ ಹಂಚಿಕೊಂಡ ಅನುಪಮಾ ಪರಮೇಶ್ವರನ್​; ಇದರ ಹಿಂದಿದೆ ಒಂದೊಳ್ಳೇ ಉದ್ದೇಶ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 23, 2021 | 6:27 PM

Share

ನಟಿ ಅನುಪಮಾ ಪರಮೇಶ್ವರನ್​ ಅವರು ಯಾವಾಗಲೂ ತಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳೋಕೆ ಹಿಂಜರಿಯುವುದಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್​ ಆಗಿರುವ ಅವರು ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನುಪಮಾ ಬಗ್ಗೆ ಬರುವ ಕಮೆಂಟ್​ಗಳಿಗೆ ಅವರೇ ಉತ್ತರ ನೀಡುತ್ತಾರೆ. ಈಗ ಅನುಪಮಾ ಅವರು ಒಂದು ಮಹತ್ವದ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಪೇಜ್​ ಒಂದರಲ್ಲಿ ಹಾಕಲಾದ ಪೋಸ್ಟ್​ಅನ್ನು ಅನುಪಮಾ ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ನ್ಯೂಡ್​ ಫೋಟೋ ಇದಾಗಿದ್ದು, ಈ ಬಗ್ಗೆ ಅವರು ಒಂದಷ್ಟು ವಿಚಾರಗಳನ್ನು ಬರೆದುಕೊಂಡಿದ್ದಾರೆ. ‘ಮಹಿಳೆಯ ಬಣ್ಣ ಮತ್ತು ಅವರ ಗಾತ್ರದ ಆಧಾರದ ಮೇಲೆ ತಾರತಮ್ಯ ಮಾಡುವುದು ಸರಿಯಲ್ಲ. ಮಹಿಳೆಯರು ತೆಳ್ಳಗೆ ಹಾಗೂ ದಪ್ಪ ಇದ್ದಾರೆ ಅಥವಾ ಬಿಳಿ ಹಾಗೂ ಕಪ್ಪಗಿದ್ದಾರೆ ಎಂದು ಟೀಕಸಲಾಗುತ್ತಿದೆ ಎಂದು ಈ ಪೋಸ್ಟ್​ ಹೇಳುತ್ತಿದೆ. ಕೆಲವರು ಮಹಿಳೆಯರ ನೋಟವನ್ನು ನೋಡಿ ಅವರು ಹೇಗೆ ಎಂದು ನಿರ್ಧರಿಸುತ್ತಾರೆ. ಇದು ಸರಿಯಲ್ಲ’ ಎಂದಿದ್ದಾರೆ ಅನುಪಮಾ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದಾರೆ. ನಂತರ ಸ್ಟೋರಿಯಿಂದ ಈ ಫೋಟೋ ತೆಗೆದು ಹಾಕಲಾಗಿದೆ.

ಇತ್ತೀಚೆಗೆ ಅನುಪಮಾ ಇನ್​ಸ್ಟಾಗ್ರಾಮ್​ನಲ್ಲಿ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ನಡೆಸಿದ್ದರು. ಈ ವೇಳೆ ಅಭಿಮಾನಿಗಳು ನಾನಾ ಪ್ರಶ್ನೆಗಳು ಕೇಳಿದ್ದರು. ಅದರಲ್ಲಿ ಓರ್ವ ಅಭಿಮಾನಿ ನೀವು ನಿಜವಾದ ಪ್ರೀತಿಯನ್ನು ನೋಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದ. ಇದಕ್ಕೆ ಉತ್ತರಿಸಿದ್ದ ಅನುಪಮಾ, ‘ನನಗೆ ನಿಜವಾದ ಪ್ರೀತಿಯೂ ಆಗಿದೆ ಮತ್ತು ನಿಜವಾದ ಬ್ರೇಕಪ್​ ಕೂಡ ಆಗಿದೆ’ ಎಂದಿದ್ದರು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡಿದ್ದಾರೆ.  ಪುನೀತ್ ರಾಜ್​ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?

ಬ್ರೇಕಪ್​ ನೋವಿನಲ್ಲಿ ನಟಸಾರ್ವಭೌಮ ನಟಿ; ಅಭಿಮಾನಿಗಳ ಎದುರು ಮೌನ ಮುರಿದ ಅನುಪಮಾ ಪರಮೇಶ್ವರನ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ