AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಬಳಿಕ ತಮಿಳು ಸಿನಿಮಾರಂಗದ ಬಗ್ಗೆ ಅನುರಾಗ್ ಟೀಕೆ

Anurag Kashyap: ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಬಾಲಿವುಡ್ ಬಿಟ್ಟು ದಕ್ಷಿಣ ಭಾರತ ಚಿತ್ರರಂಗಕ್ಕೆ ಬಂದಿದ್ದಾರೆ. ಇಲ್ಲಿಯೇ ನೆಲೆಗೊಳ್ಳುವುದಾಗಿ ಹೇಳಿದ್ದಾರೆ. ದಕ್ಷಿಣ ಚಿತ್ರರಂಗಕ್ಕೆ ಬಂದ ಕೆಲವೇ ದಿನಗಳಲ್ಲಿ ಅನುರಾಗ್ ಕಶ್ಯಪ್, ತಮಿಳು ಚಿತ್ರರಂಗದ ಹಾಡು ಮತ್ತು ಸಂಗೀತದ ಬಗ್ಗೆ ಟೀಕೆ ಮಾಡಿದ್ದಾರೆ. ತಮಿಳು ಸಿನಿಮಾ ಹಾಡುಗಳಿಗೆ ಅರ್ಥವೇ ಇಲ್ಲದಂತಾಗಿದೆ ಎಂದಿದ್ದಾರೆ.

ಬಾಲಿವುಡ್​ ಬಳಿಕ ತಮಿಳು ಸಿನಿಮಾರಂಗದ ಬಗ್ಗೆ ಅನುರಾಗ್ ಟೀಕೆ
Anurag Kashyap
ಮಂಜುನಾಥ ಸಿ.
|

Updated on: May 14, 2025 | 12:57 PM

Share

ಅನುರಾಗ್ ಕಶ್ಯಪ್ (Anurag Kashyap), ಬಾಲಿವುಡ್​ನ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು. ‘ನೋ ಸ್ಮೋಕಿಂಗ್’, ‘ಗ್ಯಾಂಗ್ಸ್ ಆಫ್ ವಾಸೇಪುರ್’ ಇನ್ನೂ ಕೆಲವು ಅದ್ಭುತ ಸಿನಿಮಾಗಳನ್ನು ಬಾಲಿವುಡ್​ಗೆ ನೀಡಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ನಿರ್ಭೀತಿಯಿಂದ ಹೇಳುತ್ತಾ ಬಂದಿರುವ ಅನುರಾಗ್ ಕಶ್ಯಪ್, ಕಳೆದ ಹಲವು ವರ್ಷಗಳಿಂದ ಬಾಲಿವುಡ್​ನ ಕೆಟ್ಟ ಸಂಪ್ರದಾಯಗಳ ಬಗ್ಗೆ ಟೀಕೆ ಮಾಡುತ್ತಲೇ ಬರುತ್ತಿದ್ದರು. ಕೊನೆಗೆ ಇತ್ತೀಚೆಗಷ್ಟೆ ಬಾಲಿವುಡ್ ಅನ್ನು ತ್ಯಜಿಸಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬಂದಿದ್ದಾರೆ. ಆದರೆ ಬರುತ್ತಿದ್ದಂತೆ ತಮಿಳು ಚಿತ್ರರಂಗದ ಸಂಗೀತದ ಬಗ್ಗೆ ಟೀಕೆ ಮಾಡಿದ್ದಾರೆ.

ತಮಿಳು ಚಿತ್ರರಂಗದ ಬಗ್ಗೆ ಸಾಕಷ್ಟು ಗೌರವದಿಂದ ಮಾತನಾಡುತ್ತಿದ್ದ ಅನುರಾಗ್ ಕಶ್ಯಪ್ ಇದೀಗ ತಮಿಳು ಸಿನಿಮಾ ಸಂಗೀತವನ್ನು ಟೀಕೆ ಮಾಡಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ದೇಶಕ ಅನುರಾಗ್ ಕಶ್ಯಪ್, ‘ತಮಿಳು ಸಿನಿಮಾ ಸಂಗೀತ, ತಮಿಳು ಸಂಗೀತದಂತೆ ಇಲ್ಲ ಅದು ಇಂಗ್ಲೀಷ್ ಮಯವಾಗಿದೆ. ಯಾವುದೋ ಇಂಗ್ಲೀಷ್ ಬ್ಯಾಂಡ್​ನ ಹಾಡುಗಳನ್ನು ಕೇಳುತ್ತಿರುವಂತೆ ಅನಿಸುತ್ತದೆ. ತಮಿಳು ಸಿನಿಮಾ ಸಂಗೀತ ಕಳೆದುಹೋಗಿದೆ’ ಎಂದಿದ್ದಾರೆ.

‘ತಮಿಳು ಸಿನಿಮಾಗಳು, ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾಗಳೊಟ್ಟಿಗೆ ಸ್ಪರ್ಧೆಗೆ ಬಿದ್ದಿವೆ. ಇದರಿಂದ ತಮಿಳು ಸಿನಿಮಾಗಳ ಸ್ವಂತತೆ ಕಳೆದುಕೊಳ್ಳುತ್ತಿವೆ. ತಮಿಳು ಹಾಡುಗಳು ಈಗ ಇಂಗ್ಲೀಷ್ ಹಾಡುಗಳಾಗಿವೆ. ಅವಕ್ಕೆ ಅರ್ಥವೇ ಇಲ್ಲ. ರಾಕ್ ಬ್ಯಾಂಡ್ ಹಾಡುಗಳಂತೆ ಅನಿಸುತ್ತವೆ. ತಮಿಳು ಹಾಡುಗಳು ಅದ್ಭುತವಾಗಿ ಇರುತ್ತಿದ್ದವು, ಬಾಲಿವುಡ್​ ನವರು ಸಹ ಅದರಿಂದ ಸ್ಪೂರ್ತಿ ಪಡೆದು, ಹಾಡುಗಳನ್ನು ತಮ್ಮ ಸಿನಿಮಾಗಳಿಗೆ ಬಳಸಿಕೊಳ್ಳುತ್ತಿದ್ದರು. ಆದರೆ ಈಗ ಪರಿಸ್ಥಿತಿ ಹಾಗೆ ಇಲ್ಲ’ ಎಂದಿದ್ದಾರೆ.

ಇದನ್ನೂ ಓದಿ:ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ

ತಮಿಳು ಸಿನಿಮಾ ಹಾಡುಗಳ ಬಗ್ಗೆ ಬೇಸರ ವ್ಯಕ್ತಪಡಿಸಿರುವುದು ಅನುರಾಗ್ ಕಶ್ಯಪ್ ಮಾತ್ರವೇ ಅಲ್ಲ. ವಿಶೇಷವಾಗಿ ಅನಿರುದ್ಧ್ ರವಿಚಂದ್ರನ್ ಅವರ ಸಂಗೀತದ ಬಗ್ಗೆ ಕೆಲವು ಹಿರಿಯ ಸಿನಿಮಾ ನಿರ್ದೇಶಕರು, ಗಾಯಕರು ಸಹ ಬೇಸರ ಹೊರಹಾಕಿದ್ದಾರೆ. ಅನಿರುದ್ಧ್ ರವಿಚಂದ್ರನ್ ಇಂಗ್ಲೀಷ್ ಹಾಡುಗಳನ್ನು ಮಾಡುತ್ತಿದ್ದಾರೆ. ಯಾವುದೇ ಅರ್ಥವಿಲ್ಲದ ಪದಗಳನ್ನು ಹಾಡುಗಳಲ್ಲಿ ಬಳಸುತ್ತಾರೆ. ಅವರ ಉದ್ದೇಶ ಒಳ್ಳೆಯ ಸಂಗೀತ ನೀಡುವುದಲ್ಲ’ ಎಂದು ಆರೋಪಿಸಿದ್ದಾರೆ. ಸ್ವತಃ ಎಆರ್ ರೆಹಮಾನ್ ಸಹ, ಅನಿರುದ್ಧ್​​ಗೆ ಸಿನಿಮಾ ಸಂಗೀತದ ಬಗ್ಗೆ ಕೆಲ ಸಲಹೆಗಳನ್ನು ನಿಡಿದ್ದರು. ಆದರೂ ಸಹ ಅನಿರುದ್ಧ್ ತಮ್ಮ ಜನಪ್ರಿಯ ಹಾದಿಯಲ್ಲೇ ನಡೆದಿದ್ದಾರೆ. ಇಂಗ್ಲೀಷ್ ಮಾದರಿಯ ಹಾಡುಗಳನ್ನೇ ಮಾಡುತ್ತಿದ್ದಾರೆ.

ಅನುರಾಗ್ ಕಶ್ಯಪ್​ಗೆ ತಮಿಳು ಚಿತ್ರರಂಗದೊಟ್ಟಿಗೆ ಆಪ್ತವಾದ ನಂಟು ಇದೆ. ಈ ಹಿಂದೆ ಅವರು ‘ಲಿಯೋ’, ‘ವಿಡುದಲೈ ಪಾರ್ಟ್ 2’, ‘ಮಹಾರಾಜ’ ಇನ್ನೂ ಕೆಲ ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಅಡವಿಶೇಷ್ ನಟನೆಯ ತೆಲುಗು ಸಿನಿಮಾ ‘ಡಕೈಟ್’ನ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ಸಿನಿಮಾ ಸಹ ನಿರ್ದೇಶನ ಮಾಡಲಿದ್ದಾರೆ ಅನುರಾಗ್ ಕಶ್ಯಪ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ