AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?
ಆಲಿಯಾ ಕಶ್ಯಪ್
TV9 Web
| Edited By: |

Updated on:Jun 09, 2021 | 7:28 PM

Share

ಬಾಲಿವುಡ್​ ಖ್ಯಾತ ನಿರ್ದೇಶಕ ಅನುರಾಗ್​ ಕಶ್ಯಪ್​ ಅವರ ಮಗಳು ಆಲಿಯಾ ಕಶ್ಯಪ್​ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇನ್​​ಸ್ಟಾಗ್ರಾಂನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿರುವ ಅವರು, ಫೋಟೋ ಹಾಗೂ ವಿಡಿಯೋ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ. ಅದಕ್ಕೆ ಕಾರಣ ಡೇಟಿಂಗ್​ ಆ್ಯಪ್.

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ. ಇದು ಆಲಿಯಾ ಅವರ ಗಮನಕ್ಕೂ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಈ ಬಗ್ಗೆ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಆಲಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. OkCupid ಡೇಟಿಂಗ್​ ಆ್ಯಪ್​ನಲ್ಲಿ ನನ್ನ ನಕಲಿ ಖಾತೆ ತೆರಯಲಾಗಿದೆ. ಇದರ ಬಗ್ಗೆ ಸಾಕಷ್ಟು ಜನರು ನನಗೆ ಮಾಹಿತಿ ನೀಡಿದ್ದರು. ಹೀಗಾಗಿ, ಎಲ್ಲರೂ ಈ ಅಕೌಂಟ್​ ರಿಪೋರ್ಟ್​ ಮಾಡಿ ಎಂದು ಮನವಿ ಮಾಡಿದ್ದಾರೆ.

ಶೇನ್ ಗ್ರೆಗೊಯಿರ್​ ಜತೆ ಆಲಿಯಾ ಕಶ್ಯಪ್​ ರಿಲೇಶನ್​ಶಿಪ್​ನಲ್ಲಿದ್ದಾರೆ. ಅಮೆರಿಕದಲ್ಲಿ ಆಲಿಯಾ ಉದ್ಯಮ ಹೊಂದಿದ್ದಾರೆ. ಯೂಟ್ಯೂಬ್​ನಲ್ಲಿ ಇತ್ತೀಚೆಗೆ ವಿಡಿಯೋ ಅಪ್​ಲೋಡ್​ ಮಾಡಿದ್ದ ಆಲಿಯಾ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮೊದಲ ಬಾರಿಗೆ ಶೇನ್ ಜತೆ ಕಿಸ್​ ಮಾಡುವಾಗ ತುಂಬಾನೇ ನರ್ವಸ್​ ಆಗಿದ್ದೆ ಎಂದಿದ್ದರು.

ಸ್ಟಾರ್​ ನಿರ್ದೇಶಕರು ಹಾಗೂ ನಟ-ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರೋದು ಹೊಸದಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸ್ಟಾರ್​ ಕಿಡ್​ಗಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅದೇ ರೀತಿ ಆಲಿಯಾ ಕೂಡ ಚಿತ್ರರಂಗಕ್ಕೆ ಬರಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾತನಾಡಿದ್ದ ಅನುರಾಗ್ ಕಶ್ಯಪ್​​, ಆಲಿಯಾ ಚಿತ್ರರಂಗಕ್ಕೆ ಬರುತ್ತಾರೆ ಎಂದರೆ ನನ್ನ ವಿರೋಧ ಇಲ್ಲ ಎಂದಿದ್ದರು.

ಇದನ್ನೂ ಓದಿ: ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ

Published On - 7:25 pm, Wed, 9 June 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ