ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?
ಆಲಿಯಾ ಕಶ್ಯಪ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 09, 2021 | 7:28 PM

ಬಾಲಿವುಡ್​ ಖ್ಯಾತ ನಿರ್ದೇಶಕ ಅನುರಾಗ್​ ಕಶ್ಯಪ್​ ಅವರ ಮಗಳು ಆಲಿಯಾ ಕಶ್ಯಪ್​ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇನ್​​ಸ್ಟಾಗ್ರಾಂನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿರುವ ಅವರು, ಫೋಟೋ ಹಾಗೂ ವಿಡಿಯೋ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ. ಅದಕ್ಕೆ ಕಾರಣ ಡೇಟಿಂಗ್​ ಆ್ಯಪ್.

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ. ಇದು ಆಲಿಯಾ ಅವರ ಗಮನಕ್ಕೂ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಈ ಬಗ್ಗೆ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಆಲಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. OkCupid ಡೇಟಿಂಗ್​ ಆ್ಯಪ್​ನಲ್ಲಿ ನನ್ನ ನಕಲಿ ಖಾತೆ ತೆರಯಲಾಗಿದೆ. ಇದರ ಬಗ್ಗೆ ಸಾಕಷ್ಟು ಜನರು ನನಗೆ ಮಾಹಿತಿ ನೀಡಿದ್ದರು. ಹೀಗಾಗಿ, ಎಲ್ಲರೂ ಈ ಅಕೌಂಟ್​ ರಿಪೋರ್ಟ್​ ಮಾಡಿ ಎಂದು ಮನವಿ ಮಾಡಿದ್ದಾರೆ.

ಶೇನ್ ಗ್ರೆಗೊಯಿರ್​ ಜತೆ ಆಲಿಯಾ ಕಶ್ಯಪ್​ ರಿಲೇಶನ್​ಶಿಪ್​ನಲ್ಲಿದ್ದಾರೆ. ಅಮೆರಿಕದಲ್ಲಿ ಆಲಿಯಾ ಉದ್ಯಮ ಹೊಂದಿದ್ದಾರೆ. ಯೂಟ್ಯೂಬ್​ನಲ್ಲಿ ಇತ್ತೀಚೆಗೆ ವಿಡಿಯೋ ಅಪ್​ಲೋಡ್​ ಮಾಡಿದ್ದ ಆಲಿಯಾ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮೊದಲ ಬಾರಿಗೆ ಶೇನ್ ಜತೆ ಕಿಸ್​ ಮಾಡುವಾಗ ತುಂಬಾನೇ ನರ್ವಸ್​ ಆಗಿದ್ದೆ ಎಂದಿದ್ದರು.

ಸ್ಟಾರ್​ ನಿರ್ದೇಶಕರು ಹಾಗೂ ನಟ-ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರೋದು ಹೊಸದಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸ್ಟಾರ್​ ಕಿಡ್​ಗಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅದೇ ರೀತಿ ಆಲಿಯಾ ಕೂಡ ಚಿತ್ರರಂಗಕ್ಕೆ ಬರಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾತನಾಡಿದ್ದ ಅನುರಾಗ್ ಕಶ್ಯಪ್​​, ಆಲಿಯಾ ಚಿತ್ರರಂಗಕ್ಕೆ ಬರುತ್ತಾರೆ ಎಂದರೆ ನನ್ನ ವಿರೋಧ ಇಲ್ಲ ಎಂದಿದ್ದರು.

ಇದನ್ನೂ ಓದಿ: ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ

Published On - 7:25 pm, Wed, 9 June 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ