AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?
ಆಲಿಯಾ ಕಶ್ಯಪ್
TV9 Web
| Edited By: |

Updated on:Jun 09, 2021 | 7:28 PM

Share

ಬಾಲಿವುಡ್​ ಖ್ಯಾತ ನಿರ್ದೇಶಕ ಅನುರಾಗ್​ ಕಶ್ಯಪ್​ ಅವರ ಮಗಳು ಆಲಿಯಾ ಕಶ್ಯಪ್​ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇನ್​​ಸ್ಟಾಗ್ರಾಂನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿರುವ ಅವರು, ಫೋಟೋ ಹಾಗೂ ವಿಡಿಯೋ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ. ಅದಕ್ಕೆ ಕಾರಣ ಡೇಟಿಂಗ್​ ಆ್ಯಪ್.

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ. ಇದು ಆಲಿಯಾ ಅವರ ಗಮನಕ್ಕೂ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಈ ಬಗ್ಗೆ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಆಲಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. OkCupid ಡೇಟಿಂಗ್​ ಆ್ಯಪ್​ನಲ್ಲಿ ನನ್ನ ನಕಲಿ ಖಾತೆ ತೆರಯಲಾಗಿದೆ. ಇದರ ಬಗ್ಗೆ ಸಾಕಷ್ಟು ಜನರು ನನಗೆ ಮಾಹಿತಿ ನೀಡಿದ್ದರು. ಹೀಗಾಗಿ, ಎಲ್ಲರೂ ಈ ಅಕೌಂಟ್​ ರಿಪೋರ್ಟ್​ ಮಾಡಿ ಎಂದು ಮನವಿ ಮಾಡಿದ್ದಾರೆ.

ಶೇನ್ ಗ್ರೆಗೊಯಿರ್​ ಜತೆ ಆಲಿಯಾ ಕಶ್ಯಪ್​ ರಿಲೇಶನ್​ಶಿಪ್​ನಲ್ಲಿದ್ದಾರೆ. ಅಮೆರಿಕದಲ್ಲಿ ಆಲಿಯಾ ಉದ್ಯಮ ಹೊಂದಿದ್ದಾರೆ. ಯೂಟ್ಯೂಬ್​ನಲ್ಲಿ ಇತ್ತೀಚೆಗೆ ವಿಡಿಯೋ ಅಪ್​ಲೋಡ್​ ಮಾಡಿದ್ದ ಆಲಿಯಾ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮೊದಲ ಬಾರಿಗೆ ಶೇನ್ ಜತೆ ಕಿಸ್​ ಮಾಡುವಾಗ ತುಂಬಾನೇ ನರ್ವಸ್​ ಆಗಿದ್ದೆ ಎಂದಿದ್ದರು.

ಸ್ಟಾರ್​ ನಿರ್ದೇಶಕರು ಹಾಗೂ ನಟ-ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರೋದು ಹೊಸದಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸ್ಟಾರ್​ ಕಿಡ್​ಗಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅದೇ ರೀತಿ ಆಲಿಯಾ ಕೂಡ ಚಿತ್ರರಂಗಕ್ಕೆ ಬರಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾತನಾಡಿದ್ದ ಅನುರಾಗ್ ಕಶ್ಯಪ್​​, ಆಲಿಯಾ ಚಿತ್ರರಂಗಕ್ಕೆ ಬರುತ್ತಾರೆ ಎಂದರೆ ನನ್ನ ವಿರೋಧ ಇಲ್ಲ ಎಂದಿದ್ದರು.

ಇದನ್ನೂ ಓದಿ: ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ

Published On - 7:25 pm, Wed, 9 June 21

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?