AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ

ಡೇಟಿಂಗ್​ ಆ್ಯಪ್​ನಲ್ಲಿ ಖ್ಯಾತ ನಿರ್ದೇಶಕನ ಮಗಳ ಫೇಕ್​ ಖಾತೆ; ತಪ್ಪಾಗಿ ತಿಳಿದ ಅಭಿಮಾನಿಗಳು ಮಾಡಿದ್ದೇನು?
ಆಲಿಯಾ ಕಶ್ಯಪ್
TV9 Web
| Edited By: |

Updated on:Jun 09, 2021 | 7:28 PM

Share

ಬಾಲಿವುಡ್​ ಖ್ಯಾತ ನಿರ್ದೇಶಕ ಅನುರಾಗ್​ ಕಶ್ಯಪ್​ ಅವರ ಮಗಳು ಆಲಿಯಾ ಕಶ್ಯಪ್​ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇನ್​​ಸ್ಟಾಗ್ರಾಂನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿರುವ ಅವರು, ಫೋಟೋ ಹಾಗೂ ವಿಡಿಯೋ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ. ಅದಕ್ಕೆ ಕಾರಣ ಡೇಟಿಂಗ್​ ಆ್ಯಪ್.

ಡೇಟಿಂಗ್​ ಆ್ಯಪ್​ ಒಂದರಲ್ಲಿ ಆಲಿಯಾ ಕಶ್ಯಪ್​ ಅವರ ಫೇಕ್​ ಖಾತೆಯನ್ನು ತೆರೆಯಲಾಗಿದೆ. ಇದನ್ನು ನೋಡಿದ ಅನೇಕರು ಇದು ಆಲಿಯಾ ಅವರದ್ದೇ ಖಾತೆ ಎಂದು ತಪ್ಪಾಗಿ ಭಾವಿಸಿ ರಿಕ್ವೆಸ್ಟ್​ ಹಾಕಿದ್ದಾರೆ. ಇದು ಆಲಿಯಾ ಅವರ ಗಮನಕ್ಕೂ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಈ ಬಗ್ಗೆ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಆಲಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. OkCupid ಡೇಟಿಂಗ್​ ಆ್ಯಪ್​ನಲ್ಲಿ ನನ್ನ ನಕಲಿ ಖಾತೆ ತೆರಯಲಾಗಿದೆ. ಇದರ ಬಗ್ಗೆ ಸಾಕಷ್ಟು ಜನರು ನನಗೆ ಮಾಹಿತಿ ನೀಡಿದ್ದರು. ಹೀಗಾಗಿ, ಎಲ್ಲರೂ ಈ ಅಕೌಂಟ್​ ರಿಪೋರ್ಟ್​ ಮಾಡಿ ಎಂದು ಮನವಿ ಮಾಡಿದ್ದಾರೆ.

ಶೇನ್ ಗ್ರೆಗೊಯಿರ್​ ಜತೆ ಆಲಿಯಾ ಕಶ್ಯಪ್​ ರಿಲೇಶನ್​ಶಿಪ್​ನಲ್ಲಿದ್ದಾರೆ. ಅಮೆರಿಕದಲ್ಲಿ ಆಲಿಯಾ ಉದ್ಯಮ ಹೊಂದಿದ್ದಾರೆ. ಯೂಟ್ಯೂಬ್​ನಲ್ಲಿ ಇತ್ತೀಚೆಗೆ ವಿಡಿಯೋ ಅಪ್​ಲೋಡ್​ ಮಾಡಿದ್ದ ಆಲಿಯಾ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮೊದಲ ಬಾರಿಗೆ ಶೇನ್ ಜತೆ ಕಿಸ್​ ಮಾಡುವಾಗ ತುಂಬಾನೇ ನರ್ವಸ್​ ಆಗಿದ್ದೆ ಎಂದಿದ್ದರು.

ಸ್ಟಾರ್​ ನಿರ್ದೇಶಕರು ಹಾಗೂ ನಟ-ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರೋದು ಹೊಸದಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸ್ಟಾರ್​ ಕಿಡ್​ಗಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅದೇ ರೀತಿ ಆಲಿಯಾ ಕೂಡ ಚಿತ್ರರಂಗಕ್ಕೆ ಬರಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾತನಾಡಿದ್ದ ಅನುರಾಗ್ ಕಶ್ಯಪ್​​, ಆಲಿಯಾ ಚಿತ್ರರಂಗಕ್ಕೆ ಬರುತ್ತಾರೆ ಎಂದರೆ ನನ್ನ ವಿರೋಧ ಇಲ್ಲ ಎಂದಿದ್ದರು.

ಇದನ್ನೂ ಓದಿ: ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ

Published On - 7:25 pm, Wed, 9 June 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ