AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್, ಶಾರುಖ್ ಜೊತೆ ಸಿನಿಮಾ ಮಾಡಲ್ಲ ಅನುರಾಗ್ ಕಶ್ಯಪ್; ಕಾರಣ ತಿಳಿಸಿದ ನಿರ್ದೇಶಕ

ಅನುರಾಗ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆರಂಭದಲ್ಲಿ ಅವರು ಚಿತ್ರಕಥೆ ಬರೆಯುತ್ತಿದ್ದರು. ಆ ಬಳಿಕ 2003ರಲ್ಲಿ ನಿರ್ದೇಶನಕ್ಕೆ ಕಾಲಿಟ್ಟರು. ‘ಗ್ಯಾಂಗ್ ಆಫ್ ವಸ್ಸೇಪುರ್’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿ ಅವರು ಜನಪ್ರಿಯತೆ ಪಡೆದರು.

ಸಲ್ಮಾನ್, ಶಾರುಖ್ ಜೊತೆ ಸಿನಿಮಾ ಮಾಡಲ್ಲ ಅನುರಾಗ್ ಕಶ್ಯಪ್; ಕಾರಣ ತಿಳಿಸಿದ ನಿರ್ದೇಶಕ
ಸಲ್ಮಾನ್-ಅನುರಾಗ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on:Sep 13, 2023 | 11:13 AM

Share

ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ನಿರ್ದೇಶನ ಮಾಡುವ ಸಿನಿಮಾಗಳಲ್ಲಿ ಕೆಟ್ಟ ಬೈಗುಳಗಳು ಹೇರಳವಾಗಿರುತ್ತವೆ. ಒಂದು ವರ್ಗದ ಜನರಿಗೆ ಅವರ ಸಿನಿಮಾ ಇಷ್ಟವಾಗುತ್ತದೆ. ಅನುರಾಗ್ ಕಶ್ಯಪ್ ಅವರು ಬಹುತೇಕ ಹೊಸಬರ ಜೊತೆ ಸಿನಿಮಾ ಮಾಡಲು ಇಷ್ಟಪಡುತ್ತಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅನುರಾಗ್ ಕಶ್ಯಪ್ ಅವರು ವಿವರಿಸಿದ್ದಾರೆ. ಅವರ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ.

ಅನುರಾಗ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆರಂಭದಲ್ಲಿ ಅವರು ಚಿತ್ರಕಥೆ ಬರೆಯುತ್ತಿದ್ದರು. ಆ ಬಳಿಕ 2003ರಲ್ಲಿ ನಿರ್ದೇಶನಕ್ಕೆ ಕಾಲಿಟ್ಟರು. ‘ಗ್ಯಾಂಗ್ ಆಫ್ ವಸ್ಸೇಪುರ್’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿ ಅವರು ಜನಪ್ರಿಯತೆ ಪಡೆದರು. ನಿರ್ಮಾಪಕನಾಗಿ, ನಟನಾಗಿಯೂ ಚಿತ್ರರಂಗದಲ್ಲಿ ಅನುರಾಗ್ ಕಶ್ಯಪ್ ಗುರುತಿಸಿಕೊಂಡಿದ್ದಾರೆ. ಈಗ ಅವರು ಸ್ಟಾರ್ಸ್ ಜೊತೆ ಕೆಲಸ ಮಾಡುವ ವಿಚಾರದ ಕುರಿತು ಮಾತನಾಡಿದ್ದಾರೆ.

‘ನಾನು ಇಲ್ಲಿಗೆ ಬಂದಿದ್ದು ಸಿನಿಮಾ ಮಾಡಲು. ಆರಂಭದಲ್ಲಿ ಸ್ಟಾರ್‌ಗಳ ಜೊತೆ ಸಿನಿಮಾ ಮಾಡಬೇಕು ಎಂಬ ಆಸೆಗೆ ಬಲಿಯಾಗಿದ್ದೆ. ಸ್ಟಾರ್ಸ್​ ಇಲ್ಲದೆ ನೀವು ಈ ಚಿತ್ರವನ್ನು ಹೇಗೆ ಮಾಡುತ್ತೀರಿ ಎಂದು ಎಲ್ಲರೂ ನನಗೆ ಕೇಳುತ್ತಿದ್ದರು. ನೀವು ಸ್ಟಾರ್ ಜೊತೆ ಕೆಲಸ ಮಾಡುವಾಗ ಅವರ ಅಭಿಮಾನಿಗಳನ್ನು ಸಂತೋಷ ಪಡಿಸದೇ ಇದ್ದರೆ ಅವರು ನಿಮ್ಮನ್ನು ದೂರ ಇಡುತ್ತಾರೆ. ನನ್ನ ಸಿನಿಮಾ ಕೂಡ ಇದೇ ರೀತಿ ಕ್ಯಾನ್ಸಲ್ ಆಗಿತ್ತು. ನಾನು ಯಾರನ್ನೂ ಖುಷಿಪಡಿಸಲು ಸಿನಿಮಾ ಮಾಡುತ್ತಿರಲಿಲ್ಲ’ ಎಂದಿದ್ದಾರೆ ಅನುರಾಗ್.

ಇದನ್ನೂ ಓದಿ: ‘ರಾಜಮೌಳಿ ನಮ್ಮಿಂದ ಕಳೆದು ಹೋಗಬಹುದು’; ಆತಂಕ ವ್ಯಕ್ತಪಡಿಸಿದ ಅನುರಾಗ್ ಕಶ್ಯಪ್

ಅನುರಾಗ್ ಕಶ್ಯಪ್ ಮಾಡಿರುವ ಬಹುತೇಕ ಸಿನಿಮಾಗಳು ಪ್ರಯೋಗಾತ್ಮಕವಾಗಿವೆ. ಈ ರೀತಿಯ ಸಿನಿಮಾಗಳನ್ನು ಸ್ಟಾರ್ಸ್ ಜೊತೆ ಮಾಡೋಕೆ ಸಾಧ್ಯವಿಲ್ಲ. ಒಂದೊಮ್ಮೆ ಮಾಡಿದರೂ ಅದನ್ನು ಅಭಿಮಾನಿಗಳು ಒಪ್ಪಿಕೊಳ್ಳುತ್ತಾರೆ ಎನ್ನುವ ನಂಬಿಕೆ ಇಲ್ಲ. ಈ ಕಾರಣದಿಂದಲೇ ಅನುರಾಗ್ ಕಶ್ಯಪ್ ಸ್ಟಾರ್ಸ್ ಸಹವಾಸಕ್ಕೆ ತೆರಳುತ್ತಿಲ್ಲ. ಅವರಿಷ್ಟದವರ ಜೊತೆ ಚಿತ್ರಗಳನ್ನು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:13 am, Wed, 13 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು