ಗೋವಾದಲ್ಲಿ ಆರಂಭವಾಗಿದೆ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಶೇಷತೆಗಳೇನು?

ವಿಜಯ್ ಸೇತುಪತಿ, ಕರಣ್ ಜೋಹರ್, ಸಾರಾ ಅಲಿ ಖಾನ್, ಪಂಕಜ್ ತ್ರಿಪಾಠಿ, ಜಿಸು ಸೇನ್​ಗುಪ್ತಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ಓಪನಿಂಗ್ ಸೆರೆಮನಿಯಲ್ಲಿ ಭಾಗಿ ಆಗಿದ್ದರು.

ಗೋವಾದಲ್ಲಿ ಆರಂಭವಾಗಿದೆ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಶೇಷತೆಗಳೇನು?
ಅನುರಾಗ್ ಠಾಕೂರ್
Follow us
|

Updated on: Nov 21, 2023 | 6:08 PM

ಪ್ರತಿ ಬಾರಿ ಸಿನಿಮೋತ್ಸವ ಆರಂಭ ಆದಾಗಲೂ ಸಿನಿಪ್ರಿಯರಿಗೆ ಖುಷಿ ಆಗುತ್ತದೆ. ಈಗ 54ನೇ ಸಾಲಿನ ಅಂತಾರಾಷ್ಟ್ರೀಯ ಫಿಲ್ಮ್​ ಫೆಸ್ಟಿವಲ್ (International Film Festival) ಗೋವಾದಲ್ಲಿ ಆರಂಭ ಆಗಿದೆ. ಸೋಮವಾರ (ನವೆಂಬರ್ 20) ಪಣಜಿಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಚಾಲನೆ ನೀಡಿದರು. ಈ ವರ್ಷದ ಸಿನಿಮೋತ್ಸವ ಹಲವು ವಿಶೇಷತೆಗಳನ್ನು ಹೊಂದಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು 9 ದಿನಗಳ ಸಿನಿಮೋತ್ಸವಕ್ಕೆ ಚಾಲನೆ ನೀಡಿದರು. ಗೋವಾ ಮುಖ್ಯಮಂತ್ರಿ ಡಾಕ್ಟರ್ ಪ್ರಮೋದ್ ಸಾವಂತ್, ಸಹಾಯಕ ಸಚಿವ ಡಾಕ್ಟರ್ ಎಲ್​. ಮುರುಗನ್, ನಟ ಹಾಗೂ ಸಂಸದ ಸನ್ನಿ ಡಿಯೋಲ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

‘54ನೇ ಫಿಲ್ಮ್​ ಫೆಸ್ಟಿವಲ್ ವೈವಿಧ್ಯ ಧ್ವನಿ, ಹಲವು ಸಂಸ್ಕೃತಿ, ವೈವಿಧ್ಯತೆ ಮತ್ತು ಸಂಪೂರ್ಣ ಸಿನಿಮೀಯ ಶ್ರೇಷ್ಠತೆಯ ಸಮ್ಮಿಳನವಾಗಿದೆ. ಈ ವರ್ಷ 270 ಸಿನಿಮಾಗಳು ಪ್ರದರ್ಶನ ಆಗಲಿವೆ. ಕಳೆದ ವರ್ಷಕ್ಕಿಂತ ಈ ವರ್ಷ ಸಿನಿಮಾ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದು ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. ಇದರಿಂದ ಸಿನಿಮಾ ಪ್ರಿಯರಿಗೆ ಖುಷಿ ಆಗಿದೆ.

ಭಾರತದಲ್ಲಿ ನಿರ್ಮಾಣ ಆಗುವ ವಿದೇಶಿ ಸಿನಿಮಾಗಳಿಗೆ ಭರ್ಜರಿ ಆಫರ್ ನೀಡಿದ್ದಾರೆ ಅನುರಾಗ್ ಸಿಂಗ್ ಠಾಕೂರ್. ‘ಭಾರತದಲ್ಲಿ ವಿದೇಶಿ ಭಾಷೆಯ ಸಿನಿಮಾ ನಿರ್ಮಾಣ ಮಾಡಿದರೆ ಒಟ್ಟೂ ಬಜೆಟ್​ನ ಶೇ.40 ಹಣವನ್ನು ಸರ್ಕಾರ ಮರುಪಾವತಿ ಮಾಡಲಿದೆ. ಇದರ ಗರಿಷ್ಟ ಮಿತಿ 30 ಕೋಟಿ ರೂಪಾಯಿ ಆಗಿದೆ. ಈ ಮೊದಲು ಇದರ ಮಿತಿ 2.5 ಕೋಟಿ ರೂಪಾಯಿ ಇತ್ತು’ ಎಂದು ಅನುರಾಗ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Koli Esru Movie: ಕನ್ನಡದ ‘ಕೋಳಿ ಎಸ್ರು’ ಚಿತ್ರಕ್ಕೆ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ 2 ಪ್ರಮುಖ ಪ್ರಶಸ್ತಿ

ವಿಜಯ್ ಸೇತುಪತಿ, ಕರಣ್ ಜೋಹರ್, ಸಾರಾ ಅಲಿ ಖಾನ್, ಪಂಕಜ್ ತ್ರಿಪಾಠಿ, ಜಿಸು ಸೇನ್​ಗುಪ್ತಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ಓಪನಿಂಗ್ ಸೆರೆಮನಿಯಲ್ಲಿ ಭಾಗಿ ಆಗಿದ್ದರು. ಹಾಲಿವುಡ್ ನಟ, ನಿರ್ಮಾಪಕ ಮೈಕಲ್ ಡಗ್ಲೆಸ್ ಅವರಿಗೆ ಐಎಫ್​ಎಫ್​ಐ ಲೈಫ್​ಟೈಮ್ ಅಚಿವ್​ಮೆಂಟ್ ಅವಾರ್ಡ್​ ನೀಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್