AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಆರಂಭವಾಗಿದೆ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಶೇಷತೆಗಳೇನು?

ವಿಜಯ್ ಸೇತುಪತಿ, ಕರಣ್ ಜೋಹರ್, ಸಾರಾ ಅಲಿ ಖಾನ್, ಪಂಕಜ್ ತ್ರಿಪಾಠಿ, ಜಿಸು ಸೇನ್​ಗುಪ್ತಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ಓಪನಿಂಗ್ ಸೆರೆಮನಿಯಲ್ಲಿ ಭಾಗಿ ಆಗಿದ್ದರು.

ಗೋವಾದಲ್ಲಿ ಆರಂಭವಾಗಿದೆ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಶೇಷತೆಗಳೇನು?
ಅನುರಾಗ್ ಠಾಕೂರ್
ರಾಜೇಶ್ ದುಗ್ಗುಮನೆ
|

Updated on: Nov 21, 2023 | 6:08 PM

Share

ಪ್ರತಿ ಬಾರಿ ಸಿನಿಮೋತ್ಸವ ಆರಂಭ ಆದಾಗಲೂ ಸಿನಿಪ್ರಿಯರಿಗೆ ಖುಷಿ ಆಗುತ್ತದೆ. ಈಗ 54ನೇ ಸಾಲಿನ ಅಂತಾರಾಷ್ಟ್ರೀಯ ಫಿಲ್ಮ್​ ಫೆಸ್ಟಿವಲ್ (International Film Festival) ಗೋವಾದಲ್ಲಿ ಆರಂಭ ಆಗಿದೆ. ಸೋಮವಾರ (ನವೆಂಬರ್ 20) ಪಣಜಿಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಚಾಲನೆ ನೀಡಿದರು. ಈ ವರ್ಷದ ಸಿನಿಮೋತ್ಸವ ಹಲವು ವಿಶೇಷತೆಗಳನ್ನು ಹೊಂದಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು 9 ದಿನಗಳ ಸಿನಿಮೋತ್ಸವಕ್ಕೆ ಚಾಲನೆ ನೀಡಿದರು. ಗೋವಾ ಮುಖ್ಯಮಂತ್ರಿ ಡಾಕ್ಟರ್ ಪ್ರಮೋದ್ ಸಾವಂತ್, ಸಹಾಯಕ ಸಚಿವ ಡಾಕ್ಟರ್ ಎಲ್​. ಮುರುಗನ್, ನಟ ಹಾಗೂ ಸಂಸದ ಸನ್ನಿ ಡಿಯೋಲ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

‘54ನೇ ಫಿಲ್ಮ್​ ಫೆಸ್ಟಿವಲ್ ವೈವಿಧ್ಯ ಧ್ವನಿ, ಹಲವು ಸಂಸ್ಕೃತಿ, ವೈವಿಧ್ಯತೆ ಮತ್ತು ಸಂಪೂರ್ಣ ಸಿನಿಮೀಯ ಶ್ರೇಷ್ಠತೆಯ ಸಮ್ಮಿಳನವಾಗಿದೆ. ಈ ವರ್ಷ 270 ಸಿನಿಮಾಗಳು ಪ್ರದರ್ಶನ ಆಗಲಿವೆ. ಕಳೆದ ವರ್ಷಕ್ಕಿಂತ ಈ ವರ್ಷ ಸಿನಿಮಾ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದು ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. ಇದರಿಂದ ಸಿನಿಮಾ ಪ್ರಿಯರಿಗೆ ಖುಷಿ ಆಗಿದೆ.

ಭಾರತದಲ್ಲಿ ನಿರ್ಮಾಣ ಆಗುವ ವಿದೇಶಿ ಸಿನಿಮಾಗಳಿಗೆ ಭರ್ಜರಿ ಆಫರ್ ನೀಡಿದ್ದಾರೆ ಅನುರಾಗ್ ಸಿಂಗ್ ಠಾಕೂರ್. ‘ಭಾರತದಲ್ಲಿ ವಿದೇಶಿ ಭಾಷೆಯ ಸಿನಿಮಾ ನಿರ್ಮಾಣ ಮಾಡಿದರೆ ಒಟ್ಟೂ ಬಜೆಟ್​ನ ಶೇ.40 ಹಣವನ್ನು ಸರ್ಕಾರ ಮರುಪಾವತಿ ಮಾಡಲಿದೆ. ಇದರ ಗರಿಷ್ಟ ಮಿತಿ 30 ಕೋಟಿ ರೂಪಾಯಿ ಆಗಿದೆ. ಈ ಮೊದಲು ಇದರ ಮಿತಿ 2.5 ಕೋಟಿ ರೂಪಾಯಿ ಇತ್ತು’ ಎಂದು ಅನುರಾಗ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Koli Esru Movie: ಕನ್ನಡದ ‘ಕೋಳಿ ಎಸ್ರು’ ಚಿತ್ರಕ್ಕೆ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ 2 ಪ್ರಮುಖ ಪ್ರಶಸ್ತಿ

ವಿಜಯ್ ಸೇತುಪತಿ, ಕರಣ್ ಜೋಹರ್, ಸಾರಾ ಅಲಿ ಖಾನ್, ಪಂಕಜ್ ತ್ರಿಪಾಠಿ, ಜಿಸು ಸೇನ್​ಗುಪ್ತಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ಓಪನಿಂಗ್ ಸೆರೆಮನಿಯಲ್ಲಿ ಭಾಗಿ ಆಗಿದ್ದರು. ಹಾಲಿವುಡ್ ನಟ, ನಿರ್ಮಾಪಕ ಮೈಕಲ್ ಡಗ್ಲೆಸ್ ಅವರಿಗೆ ಐಎಫ್​ಎಫ್​ಐ ಲೈಫ್​ಟೈಮ್ ಅಚಿವ್​ಮೆಂಟ್ ಅವಾರ್ಡ್​ ನೀಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ