AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಆರಂಭವಾಗಿದೆ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಶೇಷತೆಗಳೇನು?

ವಿಜಯ್ ಸೇತುಪತಿ, ಕರಣ್ ಜೋಹರ್, ಸಾರಾ ಅಲಿ ಖಾನ್, ಪಂಕಜ್ ತ್ರಿಪಾಠಿ, ಜಿಸು ಸೇನ್​ಗುಪ್ತಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ಓಪನಿಂಗ್ ಸೆರೆಮನಿಯಲ್ಲಿ ಭಾಗಿ ಆಗಿದ್ದರು.

ಗೋವಾದಲ್ಲಿ ಆರಂಭವಾಗಿದೆ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಶೇಷತೆಗಳೇನು?
ಅನುರಾಗ್ ಠಾಕೂರ್
ರಾಜೇಶ್ ದುಗ್ಗುಮನೆ
|

Updated on: Nov 21, 2023 | 6:08 PM

Share

ಪ್ರತಿ ಬಾರಿ ಸಿನಿಮೋತ್ಸವ ಆರಂಭ ಆದಾಗಲೂ ಸಿನಿಪ್ರಿಯರಿಗೆ ಖುಷಿ ಆಗುತ್ತದೆ. ಈಗ 54ನೇ ಸಾಲಿನ ಅಂತಾರಾಷ್ಟ್ರೀಯ ಫಿಲ್ಮ್​ ಫೆಸ್ಟಿವಲ್ (International Film Festival) ಗೋವಾದಲ್ಲಿ ಆರಂಭ ಆಗಿದೆ. ಸೋಮವಾರ (ನವೆಂಬರ್ 20) ಪಣಜಿಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಚಾಲನೆ ನೀಡಿದರು. ಈ ವರ್ಷದ ಸಿನಿಮೋತ್ಸವ ಹಲವು ವಿಶೇಷತೆಗಳನ್ನು ಹೊಂದಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು 9 ದಿನಗಳ ಸಿನಿಮೋತ್ಸವಕ್ಕೆ ಚಾಲನೆ ನೀಡಿದರು. ಗೋವಾ ಮುಖ್ಯಮಂತ್ರಿ ಡಾಕ್ಟರ್ ಪ್ರಮೋದ್ ಸಾವಂತ್, ಸಹಾಯಕ ಸಚಿವ ಡಾಕ್ಟರ್ ಎಲ್​. ಮುರುಗನ್, ನಟ ಹಾಗೂ ಸಂಸದ ಸನ್ನಿ ಡಿಯೋಲ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

‘54ನೇ ಫಿಲ್ಮ್​ ಫೆಸ್ಟಿವಲ್ ವೈವಿಧ್ಯ ಧ್ವನಿ, ಹಲವು ಸಂಸ್ಕೃತಿ, ವೈವಿಧ್ಯತೆ ಮತ್ತು ಸಂಪೂರ್ಣ ಸಿನಿಮೀಯ ಶ್ರೇಷ್ಠತೆಯ ಸಮ್ಮಿಳನವಾಗಿದೆ. ಈ ವರ್ಷ 270 ಸಿನಿಮಾಗಳು ಪ್ರದರ್ಶನ ಆಗಲಿವೆ. ಕಳೆದ ವರ್ಷಕ್ಕಿಂತ ಈ ವರ್ಷ ಸಿನಿಮಾ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದು ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. ಇದರಿಂದ ಸಿನಿಮಾ ಪ್ರಿಯರಿಗೆ ಖುಷಿ ಆಗಿದೆ.

ಭಾರತದಲ್ಲಿ ನಿರ್ಮಾಣ ಆಗುವ ವಿದೇಶಿ ಸಿನಿಮಾಗಳಿಗೆ ಭರ್ಜರಿ ಆಫರ್ ನೀಡಿದ್ದಾರೆ ಅನುರಾಗ್ ಸಿಂಗ್ ಠಾಕೂರ್. ‘ಭಾರತದಲ್ಲಿ ವಿದೇಶಿ ಭಾಷೆಯ ಸಿನಿಮಾ ನಿರ್ಮಾಣ ಮಾಡಿದರೆ ಒಟ್ಟೂ ಬಜೆಟ್​ನ ಶೇ.40 ಹಣವನ್ನು ಸರ್ಕಾರ ಮರುಪಾವತಿ ಮಾಡಲಿದೆ. ಇದರ ಗರಿಷ್ಟ ಮಿತಿ 30 ಕೋಟಿ ರೂಪಾಯಿ ಆಗಿದೆ. ಈ ಮೊದಲು ಇದರ ಮಿತಿ 2.5 ಕೋಟಿ ರೂಪಾಯಿ ಇತ್ತು’ ಎಂದು ಅನುರಾಗ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Koli Esru Movie: ಕನ್ನಡದ ‘ಕೋಳಿ ಎಸ್ರು’ ಚಿತ್ರಕ್ಕೆ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ 2 ಪ್ರಮುಖ ಪ್ರಶಸ್ತಿ

ವಿಜಯ್ ಸೇತುಪತಿ, ಕರಣ್ ಜೋಹರ್, ಸಾರಾ ಅಲಿ ಖಾನ್, ಪಂಕಜ್ ತ್ರಿಪಾಠಿ, ಜಿಸು ಸೇನ್​ಗುಪ್ತಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ಓಪನಿಂಗ್ ಸೆರೆಮನಿಯಲ್ಲಿ ಭಾಗಿ ಆಗಿದ್ದರು. ಹಾಲಿವುಡ್ ನಟ, ನಿರ್ಮಾಪಕ ಮೈಕಲ್ ಡಗ್ಲೆಸ್ ಅವರಿಗೆ ಐಎಫ್​ಎಫ್​ಐ ಲೈಫ್​ಟೈಮ್ ಅಚಿವ್​ಮೆಂಟ್ ಅವಾರ್ಡ್​ ನೀಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್