AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರಿಸ್​ಗಳಿಗೂ ಅವಾರ್ಡ್​ ಕೊಡಲು ಮುಂದಾದ ಕೇಂದ್ರ ಸರ್ಕಾರ; ಪ್ರಶಸ್ತಿ ಹಣ ಎಷ್ಟು?

ಗೋವಾದಲ್ಲಿ ನಡೆಯಲಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವೆಬ್ ಸರಣಿ' ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ವೆಬ್​ ಸೀರಿಸ್​ಗಳಿಗೂ ಅವಾರ್ಡ್​ ಕೊಡಲು ಮುಂದಾದ ಕೇಂದ್ರ ಸರ್ಕಾರ; ಪ್ರಶಸ್ತಿ ಹಣ ಎಷ್ಟು?
ಅನುರಾಗ್ ಠಾಕೂರ್
ರಾಜೇಶ್ ದುಗ್ಗುಮನೆ
|

Updated on: Jul 19, 2023 | 7:11 AM

Share

ಒಟಿಟಿ ವ್ಯಾಪ್ತಿ ಹಿರಿದಾದಂತೆ ವೆಬ್​ ಸೀರಿಸ್​ಗಳ (Web Series) ನಿರ್ಮಾಣ ಕೂಡ ಹೆಚ್ಚಿದೆ. ಎಲ್ಲಾ ಒಟಿಟಿ ಪ್ಲಾಟ್​ಫಾರ್ಮ್​​ಗಳಲ್ಲಿ ವಿವಿಧ ರೀತಿಯ ವೆಬ್ ಸರಣಿಗಳು ನೋಡಲು ಲಭ್ಯವಿದೆ. ಇನ್ನುಮುಂದೆ ಕೇಂದ್ರ ಸರ್ಕಾರವು ಅತ್ಯುತ್ತಮ ವೆಬ್ ಸರಣಿ ಪ್ರಶಸ್ತಿಗಳನ್ನು ನೀಡಲಿದೆ. ಈ ವಿಷಯವನ್ನು ಸ್ವತಃ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಘೋಷಿಸಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​​ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಇದರಿಂದ ವೆಬ್ ಸರಣಿ ನಿರ್ಮಾಣ ಮಾಡುವವರಿಗೆ ಪ್ರೋತ್ಸಾಹ ಸಿಕ್ಕಂತಾಗಲಿದೆ.

ಗೋವಾದಲ್ಲಿ ನಡೆಯಲಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವೆಬ್ ಸರಣಿ’ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಇನ್ನು ಇದಕ್ಕೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಈ ವೆಬ್ ಸರಣಿಗಳನ್ನು ಒರಿಜಿನಲ್ ಆಗಿ ಶೂಟ್ ಮಾಡಿರಬೇಕು, ಭಾರತೀಯ ಭಾಷೆಗಳಲ್ಲಿ ಈ ಸರಣಿ ಲಭ್ಯವಿರಬೇಕು. ಹೀಗಿದ್ದರೆ ಅವು ಅತ್ಯುತ್ತಮ ವೆಬ್ ಸರಣಿ ಪ್ರಶಸ್ತಿ ಸ್ಪರ್ಧೆಗೆ ಅರ್ಹರು ಎಂದು ಸಚಿವರು ಉಲ್ಲೇಖಿಸಿದ್ದಾರೆ.

ಒಟಿಟಿಯಲ್ಲಿ ಹೂಡಿಕೆಯನ್ನು ಉತ್ತೇಜಿಸುವುದು, ಭಾರತೀಯ ಭಾಷೆಗಳಲ್ಲಿ ವಿಷಯವನ್ನು ಜಗತ್ತಿಗೆ ತಿಳಿಸುವುದು ಮತ್ತು ಪ್ರತಿಭೆ ಗುರುತಿಸುವುದು ಪ್ರಶಸ್ತಿ ಸಮಾರಂಭದ ಮುಖ್ಯ ಉದ್ದೇಶ. ಪ್ರಶಸ್ತಿ ಗೆದ್ದ ವೆಬ್ ಸೀರಿಸ್​ಗೆ 10 ಲಕ್ಷ ರೂಪಾಯಿ ನಗದು ಹಾಗೂ ಒಂದು ಟ್ರೋಫಿ ಸಿಗಲಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಕೊವಿಡ್ ಲಾಕ್​ಡೌನ್ ಸಂದರ್ಭದಲ್ಲಿ ಜನರು ಮನೆಯಲ್ಲೇ ಕೂರಬೇಕಾಯಿತು. ಈ ಕಾರಣದಿಂದ ಒಟಿಟಿಯತ್ತ ಜನರು ವಾಲಿದರು. ಅಲ್ಲಿಂದ ಈಚೆಗೆ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚುತ್ತಾ ಬಂದವು. ಇದನ್ನು ಗಮನಿಸಿ ಅನೇಕ ಕಡೆಗಳಲ್ಲಿ ಈಗಾಗಲೇ ವೆಬ್​ ಸೀರಿಸ್​ಗಳಿಗಾಗಿ ಅವಾರ್ಡ್ ನೀಡುವ ಕೆಲಸ ಆಗುತ್ತಿದೆ. ಈಗ ಕೇಂದ್ರ ಸರ್ಕಾರದ ಕಡೆಯಿಂದಲೂ ಪ್ರಶಸ್ತಿ ಸಿಗುತ್ತಿರುವುದು ಖುಷಿಯ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ