AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರಿಸ್​ಗಳಿಗೂ ಅವಾರ್ಡ್​ ಕೊಡಲು ಮುಂದಾದ ಕೇಂದ್ರ ಸರ್ಕಾರ; ಪ್ರಶಸ್ತಿ ಹಣ ಎಷ್ಟು?

ಗೋವಾದಲ್ಲಿ ನಡೆಯಲಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವೆಬ್ ಸರಣಿ' ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ವೆಬ್​ ಸೀರಿಸ್​ಗಳಿಗೂ ಅವಾರ್ಡ್​ ಕೊಡಲು ಮುಂದಾದ ಕೇಂದ್ರ ಸರ್ಕಾರ; ಪ್ರಶಸ್ತಿ ಹಣ ಎಷ್ಟು?
ಅನುರಾಗ್ ಠಾಕೂರ್
ರಾಜೇಶ್ ದುಗ್ಗುಮನೆ
|

Updated on: Jul 19, 2023 | 7:11 AM

Share

ಒಟಿಟಿ ವ್ಯಾಪ್ತಿ ಹಿರಿದಾದಂತೆ ವೆಬ್​ ಸೀರಿಸ್​ಗಳ (Web Series) ನಿರ್ಮಾಣ ಕೂಡ ಹೆಚ್ಚಿದೆ. ಎಲ್ಲಾ ಒಟಿಟಿ ಪ್ಲಾಟ್​ಫಾರ್ಮ್​​ಗಳಲ್ಲಿ ವಿವಿಧ ರೀತಿಯ ವೆಬ್ ಸರಣಿಗಳು ನೋಡಲು ಲಭ್ಯವಿದೆ. ಇನ್ನುಮುಂದೆ ಕೇಂದ್ರ ಸರ್ಕಾರವು ಅತ್ಯುತ್ತಮ ವೆಬ್ ಸರಣಿ ಪ್ರಶಸ್ತಿಗಳನ್ನು ನೀಡಲಿದೆ. ಈ ವಿಷಯವನ್ನು ಸ್ವತಃ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಘೋಷಿಸಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​​ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಇದರಿಂದ ವೆಬ್ ಸರಣಿ ನಿರ್ಮಾಣ ಮಾಡುವವರಿಗೆ ಪ್ರೋತ್ಸಾಹ ಸಿಕ್ಕಂತಾಗಲಿದೆ.

ಗೋವಾದಲ್ಲಿ ನಡೆಯಲಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವೆಬ್ ಸರಣಿ’ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಇನ್ನು ಇದಕ್ಕೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಈ ವೆಬ್ ಸರಣಿಗಳನ್ನು ಒರಿಜಿನಲ್ ಆಗಿ ಶೂಟ್ ಮಾಡಿರಬೇಕು, ಭಾರತೀಯ ಭಾಷೆಗಳಲ್ಲಿ ಈ ಸರಣಿ ಲಭ್ಯವಿರಬೇಕು. ಹೀಗಿದ್ದರೆ ಅವು ಅತ್ಯುತ್ತಮ ವೆಬ್ ಸರಣಿ ಪ್ರಶಸ್ತಿ ಸ್ಪರ್ಧೆಗೆ ಅರ್ಹರು ಎಂದು ಸಚಿವರು ಉಲ್ಲೇಖಿಸಿದ್ದಾರೆ.

ಒಟಿಟಿಯಲ್ಲಿ ಹೂಡಿಕೆಯನ್ನು ಉತ್ತೇಜಿಸುವುದು, ಭಾರತೀಯ ಭಾಷೆಗಳಲ್ಲಿ ವಿಷಯವನ್ನು ಜಗತ್ತಿಗೆ ತಿಳಿಸುವುದು ಮತ್ತು ಪ್ರತಿಭೆ ಗುರುತಿಸುವುದು ಪ್ರಶಸ್ತಿ ಸಮಾರಂಭದ ಮುಖ್ಯ ಉದ್ದೇಶ. ಪ್ರಶಸ್ತಿ ಗೆದ್ದ ವೆಬ್ ಸೀರಿಸ್​ಗೆ 10 ಲಕ್ಷ ರೂಪಾಯಿ ನಗದು ಹಾಗೂ ಒಂದು ಟ್ರೋಫಿ ಸಿಗಲಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಕೊವಿಡ್ ಲಾಕ್​ಡೌನ್ ಸಂದರ್ಭದಲ್ಲಿ ಜನರು ಮನೆಯಲ್ಲೇ ಕೂರಬೇಕಾಯಿತು. ಈ ಕಾರಣದಿಂದ ಒಟಿಟಿಯತ್ತ ಜನರು ವಾಲಿದರು. ಅಲ್ಲಿಂದ ಈಚೆಗೆ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚುತ್ತಾ ಬಂದವು. ಇದನ್ನು ಗಮನಿಸಿ ಅನೇಕ ಕಡೆಗಳಲ್ಲಿ ಈಗಾಗಲೇ ವೆಬ್​ ಸೀರಿಸ್​ಗಳಿಗಾಗಿ ಅವಾರ್ಡ್ ನೀಡುವ ಕೆಲಸ ಆಗುತ್ತಿದೆ. ಈಗ ಕೇಂದ್ರ ಸರ್ಕಾರದ ಕಡೆಯಿಂದಲೂ ಪ್ರಶಸ್ತಿ ಸಿಗುತ್ತಿರುವುದು ಖುಷಿಯ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು