AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ-ವಿರಾಟ್ ಲಂಡನ್​ನಲ್ಲಿ ಸೆಟಲ್ ಆಗಿದ್ದೇಕೆ? ಮಾಧುರಿ ದೀಕ್ಷಿತ್ ಪತಿಯಿಂದ ಮಾಹಿತಿ ರಿವೀಲ್

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಲಂಡನ್​ನಲ್ಲಿ ನೆಲೆಸಿರುವುದಕ್ಕೆ ಕಾರಣಗಳನ್ನು ಮಾಧುರಿ ದೀಕ್ಷಿತ್ ಅವರ ಪತಿ ಡಾ. ಶ್ರೀರಾಮ್ ನೆನೆ ವಿವರಿಸಿದ್ದಾರೆ. ಭಾರತದಲ್ಲಿ ಸಾರ್ವಜನಿಕರ ಗಮನದಿಂದಾಗಿ ಅವರು ಖಾಸಗಿತನವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಲಂಡನ್‌ನಲ್ಲಿ ಅವರು ತಮ್ಮ ಮಕ್ಕಳಿಗೆ ಸಾಮಾನ್ಯ ಜೀವನ ನೀಡಲು ಬಯಸುತ್ತಾರೆ.

ಅನುಷ್ಕಾ-ವಿರಾಟ್ ಲಂಡನ್​ನಲ್ಲಿ ಸೆಟಲ್ ಆಗಿದ್ದೇಕೆ? ಮಾಧುರಿ ದೀಕ್ಷಿತ್ ಪತಿಯಿಂದ ಮಾಹಿತಿ ರಿವೀಲ್
ಅನುಷ್ಕಾ-ವಿರಾಟ್
ರಾಜೇಶ್ ದುಗ್ಗುಮನೆ
|

Updated on: Apr 26, 2025 | 10:49 PM

Share

ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಸದ್ಯ ಲಂಡನ್​ನಲ್ಲಿ ಸೆಟಲ್ ಆಗಿದ್ದಾರೆ. ಈ ಮೊದಲು ಅವರು ಕ್ರಿಕೆಟ್ ಸರಣಿಗಳನ್ನು ಪೂರ್ಣಗೊಳಿಸಿ ಲಂಡನ್ ವಿಮಾನ ಏರುತ್ತಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು. ಕಳೆದ ವರ್ಷ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು. ಇದರ ಹಿಂದಿನ ಕಾರಣ ಏನು ಎಂಬುದನ್ನು ಮಾಧುರಿ ದೀಕ್ಷಿತ್ ಪತಿ ಡಾ. ಶ್ರೀರಾಮ್ ನೆನೆ ಅವರು ವಿವರಿಸಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಯೂಟ್ಯೂಬ್ ಚಾನೆಲ್​ನ ಶ್ರೀರಾಮ್ ಅವರು ನಡೆಸುತ್ತಾರೆ. ಇದಕ್ಕೆ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಅವರನ್ನು ಕರೆದಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ ಡಾಕ್ಟರ್ ಶ್ರೀರಾಮ್. ಅನುಷ್ಕಾ ಶರ್ಮಾ ಜೊತೆಗೆ ತಾವು ಆಡಿದ ಮಾತುಗಳನ್ನು ಶ್ರೀರಾಮ್ ಅವರು ನೆನಪಿಸಿಕೊಂಡಿದ್ದಾರೆ.

‘ನಾನು ನಿಮಗೆ ಒಂದು ವಿಚಾರ ಹೇಳಬೇಕು. ಅನುಷ್ಕಾ ಶರ್ಮಾ ಜೊತೆ ನಾನು ಚರ್ಚೆ ಮಾಡಿದ್ದೆ. ಅವರು ಲಂಡನ್​ಗೆ ಹೋದರು. ಅವರ ಯಶಸ್ಸನ್ನು ಎಂಜಾಯ್ ಮಾಡಲು ಇಲ್ಲಿ ಸಾಧ್ಯವಿಲ್ಲ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ’ ಎಂದಿದ್ದಾರೆ ಶ್ರೀರಾಮ್.

ಈ ನಿರ್ಧಾರ ತೆಗೆದುಕೊಳ್ಳುವುದರ ಹಿಂದೆ ಮಕ್ಕಳು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಅನುಷ್ಕಾ ಶರ್ಮಾ ಮಕ್ಕಳಾದ ವಮಿಕಾ ಹಾಗೂ ಅಕಾಯ್ ಬೆಳೆದು ದೊಡ್ಡವರಾಗುತ್ತಿದ್ದಾರೆ. ಅವರನ್ನು ಶಾಲೆಗೆ ಸೇರಿಸುವ ವರ್ಷಗಳು ಹತ್ತಿರ ಬರುತ್ತಿವೆ. ಭಾರತದಲ್ಲಿ ಅವರನ್ನು ಶಾಲೆಗೆ ಸೇರಿಸಿದರೆ ಅವುಗಳ ಮೇಲೆ ಇದರ ಪ್ರಭಾವ ಇರುತ್ತದೆ. ಈ ಭಯ ಅವರನ್ನು ಕಾಡಿದೆ.

‘ನಾನು ಎಲ್ಲರ ಜೊತೆ ಬೆರೆಯುತ್ತೇನೆ. ಹಾಗಿದ್ದರೂ ಕೆಲವೊಮ್ಮೆ ಪರಿಸ್ಥಿತಿ ಚಾಲೆಂಜಿಂಗ್ ಆಗಿ ಇರುತ್ತದೆ. ಎಲ್ಲರಿಗೂ ಅವರದ್ದೇ ಆದ ಸಮಯ ಬೇಕು. ಅನುಷ್ಕಾ ಹಾಗೂ ಕೊಹ್ಲಿ ತಮ್ಮ ಮಕ್ಕಳನ್ನು ಸಾಮಾನ್ಯರಂತೆ ಬೆಳೆಸಲು ಪ್ರಯತ್ನಿಸುತ್ತಾರೆ’ ಎಂದಿದ್ದಾರೆ ಶ್ರೀರಾಮ್.

ಇದನ್ನೂ ಓದಿ: ಮಾಧುರಿ ದೀಕ್ಷಿತ್​ನ ಮದುವೆ ಆದ ಡಾಕ್ಟರ್​ಗೆ ಎದುರಾದ ಸಮಸ್ಯೆ ಒಂದೆರಡಲ್ಲ

ಅನುಷ್ಕಾ ಹಾಗೂ ವಿರಾಟ್ ಮೊದಲ ಬಾರಿಗೆ ಭೇಟಿ ಆಗಿದ್ದು 2013ರಲ್ಲಿ. ಇವರ ಮಧ್ಯೆ ಪ್ರೀತಿ ಮೂಡಿತು. 2017ರಲ್ಲಿ ಇವರು ಮದುವೆ ಆದರು. ಈಗ ಇವರಿಗೆ ಇಬ್ಬರು ಮಕ್ಕಳು. ಆದರೆ, ಭಾರತದಲ್ಲಿ ಖಾಸಗಿತನಕ್ಕೆ ಸಾಕಷ್ಟು ತೊಂದರೆ ಆಗಬಹುದು ಎನ್ನುವ ಭಯ ಕಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ