AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ-ವಿರಾಟ್ ಲಂಡನ್​ನಲ್ಲಿ ಸೆಟಲ್ ಆಗಿದ್ದೇಕೆ? ಮಾಧುರಿ ದೀಕ್ಷಿತ್ ಪತಿಯಿಂದ ಮಾಹಿತಿ ರಿವೀಲ್

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಲಂಡನ್​ನಲ್ಲಿ ನೆಲೆಸಿರುವುದಕ್ಕೆ ಕಾರಣಗಳನ್ನು ಮಾಧುರಿ ದೀಕ್ಷಿತ್ ಅವರ ಪತಿ ಡಾ. ಶ್ರೀರಾಮ್ ನೆನೆ ವಿವರಿಸಿದ್ದಾರೆ. ಭಾರತದಲ್ಲಿ ಸಾರ್ವಜನಿಕರ ಗಮನದಿಂದಾಗಿ ಅವರು ಖಾಸಗಿತನವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಲಂಡನ್‌ನಲ್ಲಿ ಅವರು ತಮ್ಮ ಮಕ್ಕಳಿಗೆ ಸಾಮಾನ್ಯ ಜೀವನ ನೀಡಲು ಬಯಸುತ್ತಾರೆ.

ಅನುಷ್ಕಾ-ವಿರಾಟ್ ಲಂಡನ್​ನಲ್ಲಿ ಸೆಟಲ್ ಆಗಿದ್ದೇಕೆ? ಮಾಧುರಿ ದೀಕ್ಷಿತ್ ಪತಿಯಿಂದ ಮಾಹಿತಿ ರಿವೀಲ್
ಅನುಷ್ಕಾ-ವಿರಾಟ್
ರಾಜೇಶ್ ದುಗ್ಗುಮನೆ
|

Updated on: Apr 26, 2025 | 10:49 PM

Share

ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಸದ್ಯ ಲಂಡನ್​ನಲ್ಲಿ ಸೆಟಲ್ ಆಗಿದ್ದಾರೆ. ಈ ಮೊದಲು ಅವರು ಕ್ರಿಕೆಟ್ ಸರಣಿಗಳನ್ನು ಪೂರ್ಣಗೊಳಿಸಿ ಲಂಡನ್ ವಿಮಾನ ಏರುತ್ತಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು. ಕಳೆದ ವರ್ಷ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು. ಇದರ ಹಿಂದಿನ ಕಾರಣ ಏನು ಎಂಬುದನ್ನು ಮಾಧುರಿ ದೀಕ್ಷಿತ್ ಪತಿ ಡಾ. ಶ್ರೀರಾಮ್ ನೆನೆ ಅವರು ವಿವರಿಸಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಯೂಟ್ಯೂಬ್ ಚಾನೆಲ್​ನ ಶ್ರೀರಾಮ್ ಅವರು ನಡೆಸುತ್ತಾರೆ. ಇದಕ್ಕೆ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಅವರನ್ನು ಕರೆದಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ ಡಾಕ್ಟರ್ ಶ್ರೀರಾಮ್. ಅನುಷ್ಕಾ ಶರ್ಮಾ ಜೊತೆಗೆ ತಾವು ಆಡಿದ ಮಾತುಗಳನ್ನು ಶ್ರೀರಾಮ್ ಅವರು ನೆನಪಿಸಿಕೊಂಡಿದ್ದಾರೆ.

‘ನಾನು ನಿಮಗೆ ಒಂದು ವಿಚಾರ ಹೇಳಬೇಕು. ಅನುಷ್ಕಾ ಶರ್ಮಾ ಜೊತೆ ನಾನು ಚರ್ಚೆ ಮಾಡಿದ್ದೆ. ಅವರು ಲಂಡನ್​ಗೆ ಹೋದರು. ಅವರ ಯಶಸ್ಸನ್ನು ಎಂಜಾಯ್ ಮಾಡಲು ಇಲ್ಲಿ ಸಾಧ್ಯವಿಲ್ಲ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ’ ಎಂದಿದ್ದಾರೆ ಶ್ರೀರಾಮ್.

ಈ ನಿರ್ಧಾರ ತೆಗೆದುಕೊಳ್ಳುವುದರ ಹಿಂದೆ ಮಕ್ಕಳು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಅನುಷ್ಕಾ ಶರ್ಮಾ ಮಕ್ಕಳಾದ ವಮಿಕಾ ಹಾಗೂ ಅಕಾಯ್ ಬೆಳೆದು ದೊಡ್ಡವರಾಗುತ್ತಿದ್ದಾರೆ. ಅವರನ್ನು ಶಾಲೆಗೆ ಸೇರಿಸುವ ವರ್ಷಗಳು ಹತ್ತಿರ ಬರುತ್ತಿವೆ. ಭಾರತದಲ್ಲಿ ಅವರನ್ನು ಶಾಲೆಗೆ ಸೇರಿಸಿದರೆ ಅವುಗಳ ಮೇಲೆ ಇದರ ಪ್ರಭಾವ ಇರುತ್ತದೆ. ಈ ಭಯ ಅವರನ್ನು ಕಾಡಿದೆ.

‘ನಾನು ಎಲ್ಲರ ಜೊತೆ ಬೆರೆಯುತ್ತೇನೆ. ಹಾಗಿದ್ದರೂ ಕೆಲವೊಮ್ಮೆ ಪರಿಸ್ಥಿತಿ ಚಾಲೆಂಜಿಂಗ್ ಆಗಿ ಇರುತ್ತದೆ. ಎಲ್ಲರಿಗೂ ಅವರದ್ದೇ ಆದ ಸಮಯ ಬೇಕು. ಅನುಷ್ಕಾ ಹಾಗೂ ಕೊಹ್ಲಿ ತಮ್ಮ ಮಕ್ಕಳನ್ನು ಸಾಮಾನ್ಯರಂತೆ ಬೆಳೆಸಲು ಪ್ರಯತ್ನಿಸುತ್ತಾರೆ’ ಎಂದಿದ್ದಾರೆ ಶ್ರೀರಾಮ್.

ಇದನ್ನೂ ಓದಿ: ಮಾಧುರಿ ದೀಕ್ಷಿತ್​ನ ಮದುವೆ ಆದ ಡಾಕ್ಟರ್​ಗೆ ಎದುರಾದ ಸಮಸ್ಯೆ ಒಂದೆರಡಲ್ಲ

ಅನುಷ್ಕಾ ಹಾಗೂ ವಿರಾಟ್ ಮೊದಲ ಬಾರಿಗೆ ಭೇಟಿ ಆಗಿದ್ದು 2013ರಲ್ಲಿ. ಇವರ ಮಧ್ಯೆ ಪ್ರೀತಿ ಮೂಡಿತು. 2017ರಲ್ಲಿ ಇವರು ಮದುವೆ ಆದರು. ಈಗ ಇವರಿಗೆ ಇಬ್ಬರು ಮಕ್ಕಳು. ಆದರೆ, ಭಾರತದಲ್ಲಿ ಖಾಸಗಿತನಕ್ಕೆ ಸಾಕಷ್ಟು ತೊಂದರೆ ಆಗಬಹುದು ಎನ್ನುವ ಭಯ ಕಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ