AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಮೇಲೆ ಅನುಷ್ಕಾಗೆ ಕಡಿಮೆ ಆಗಿಲ್ಲ ಕೋಪ; ಬೆಂಗಳೂರು ರಸ್ತೆ ಮಧ್ಯೆ ಮುನಿಸು

ವಿರಾಟ್ ಕೊಹ್ಲಿ ಅವರು ಅವನೀತ್ ಕೌರ್ ಅವರ ಫೋಟೋ ಲೈಕ್ ಮಾಡಿದ್ದರು.ಈ ಘಟನೆ ವಿರಾಟ್ ಮತ್ತು ಅನುಷ್ಕಾ ಶರ್ಮಾ ಅವರ ಮಧ್ಯೆ ಮನಸ್ತಾಪ ತಂದಿದೆ ಎನ್ನಲಾಗಿದೆ. ಇತ್ತೀಚಿನ ವೈರಲ್ ವಿಡಿಯೋದಲ್ಲಿ ಅನುಷ್ಕಾ ಅವರು ಕೊಹ್ಲಿ ಅವರ ಕೈ ಹಿಡಿಯಲು ನಿರಾಕರಿಸಿದ್ದಾರೆ. ಇದರಿಂದ ಸಂಬಂಧದಲ್ಲಿ ಬಿರುಕು ಎಂದು ಕೆಲವರು ಅಭಿಪ್ರಾಯಪಟ್ಟರೆ, ಇತರರು ಅದನ್ನು ಸಾಮಾನ್ಯವೆಂದು ಪರಿಗಣಿಸಿದ್ದಾರೆ.

ವಿರಾಟ್ ಮೇಲೆ ಅನುಷ್ಕಾಗೆ ಕಡಿಮೆ ಆಗಿಲ್ಲ ಕೋಪ; ಬೆಂಗಳೂರು ರಸ್ತೆ ಮಧ್ಯೆ ಮುನಿಸು
ಅನುಷ್ಕಾ-ವಿರಾಟ್
Follow us
ರಾಜೇಶ್ ದುಗ್ಗುಮನೆ
|

Updated on: May 08, 2025 | 12:29 PM

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಯಾವುದೇ ವೈಮನಸ್ಸು ಬಂದರೂ ಅದನ್ನು ಬಗೆ ಹರಿಸಿಕೊಂಡು ಮುಂದೆ ಸಾಗುತ್ತಿದ್ದಾರೆ. ಇತ್ತೀಚೆಗೆ ವಿರಾಟ್ ಕೊಹ್ಲಿ (Virat Kohli) ಅವರು ಅವನೀತ್ ಕೌರ್ ಅವರ ಬೋಲ್ಡ್ ಫೋಟೋ ಲೈಕ್ ಮಾಡಿ ಸುದ್ದಿ ಆಗಿದ್ದರು. ಈ ವಿಚಾರವಾಗಿ ಅವರು ಸ್ಪಷ್ಟನೆ ಕೂಡ ನೀಡಿದ್ದರು. ಇಷ್ಟೇ ಅಲ್ಲ, ಇನ್​ಸ್ಟಾಗ್ರಾಮ್ ಗ್ಲಿಚ್ ಎಂದು ಹೇಳಿದ್ದರು. ಈ ಬಗ್ಗೆ ಟ್ರೋಲ್ ಕೂಡ ಆದರು. ಈಗ ವಿರಾಟ್ ಹಾಗೂ ಅನುಷ್ಕಾ ಮಧ್ಯೆ ಈ ವಿಚಾರಕ್ಕೆ ಮುನಿಸಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಈಗ ವೈರಲ್ ಆಗಿರೋ ವಿಡಿಯೋ ಇದಕ್ಕೆ ಸಾಕ್ಷಿ ಒದಗಿಸುವಂತಿದೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಇತ್ತೀಚೆಗೆ ಬೆಂಗಳೂರಿನ ಎಂಜಿ ರೋಡ್​ನಲ್ಲಿರೋ ರೆಸ್ಟೋರೆಂಟ್ ಒಂದಕ್ಕೆ ತೆರಳಿದ್ದರು. ಈ ಸಂದರ್ಭದ ವಿಡಿಯೋನ ಈಗ ವೈರಲ್ ಮಾಡಲಾಗುತ್ತಿದೆ. ಕಾರಿನಿಂದ ಇಳಿಯುವಾಗ ಕೊಹ್ಲಿ ಬಂದು ಅನುಷಾ ಅವರ ಕೈ ಹಿಡಿಯಲು ಹೋದರು. ಆದರೆ, ಇದಕ್ಕೆ ಅನುಷ್ಕಾ ಕೇರೇ ಮಾಡಲಿಲ್ಲ. ಅವರು ಇಳಿದು ನೇರವಾಗಿ ರೆಸ್ಟೋರೆಂಟ್ ಒಳಗೆ ಹೋದರು. ಇದು ಕೆಲವರಿಗೆ ದೊಡ್ಡದಾಗಿ ಕಾಣಿಸಿದೆ.

ಇದನ್ನೂ ಓದಿ
Image
ಶಾರುಖ್ ಮೋಸ ಮಾಡಿದರೆ...; ಗೌರಿ ಖಾನ್ ಬೋಲ್ಡ್ ಉತ್ತರ ಮೆಚ್ಚಲೇಬೇಕು
Image
ಈ ವಿಲನ್ ನಿಜ ಜೀವನದಲ್ಲಿ ನಾಲ್ಕು ಮದುವೆ ಆದರು, ನಂತರ ಬೀದಿಗೆ ಬಂದರು
Image
‘ನಿನ್ನ ದೇಹ ನೀನೇ ನಿರ್ಧರಿಸು’; ದೀಪಿಕಾಗೆ ನೇರವಾಗಿ ಹೇಳಿದ್ದ ರಣವೀರ್ ಸಿಂಗ್
Image
ಅನುಷ್ಕಾ ಕೈಗೆ ಮುತ್ತು; ಕೊಹ್ಲಿನ ಜೋಕರ್ ಎಂದಿದ್ದ ರಾಹುಲ್​​ನ ವಿಡಿಯೋ ವೈರಲ್

ಈ ವಿಡಿಯೋ ನೋಡಿದ ಬಳಿಕ ಅನುಷ್ಕಾ ಹಾಗೂ ವಿರಾಟ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳನ್ನು ಕೆಲವರು ಆಡಿದ್ದಾರೆ. ಅನುಷ್ಕಾ ಹಾಗೂ ವಿರಾಟ್ ಯಾವಾಗಲೂ ಕೈ ಕೈ ಹಿಡಿದು ಸಾಗುತ್ತಾರೆ. ಆದರೆ, ಈ ಸಂದರ್ಭದಲ್ಲಿ ಅವರು ಆ ರೀತಿ ಮಾಡಿಲ್ಲ ಅನ್ನೋದು ವಿಶೇಷ. ಇನ್ನೂ ಕೆಲವರು, ಇಬ್ಬರ ಮಧ್ಯೆ ಎಲ್ಲವೂ ಸರಿ ಇದೆ ಎಂಬ ಮಾತನ್ನು ಹೇಳಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಕೈಗೆ ಮುತ್ತು; ಕೊಹ್ಲಿನ ಜೋಕರ್ ಎಂದಿದ್ದ ರಾಹುಲ್​​ ವಿಡಿಯೋ ವೈರಲ್

ಅನುಷ್ಕಾ ಚಿತ್ರರಂಗದವರು. ಅವರು ಸಾಕಷ್ಟು ವಿಶಾಲವಾಗಿ ಯೋಚಿಸುತ್ತಾರೆ. ಪತಿ ಯಾವುದೋ ನಟಿಯ ಫೋಟೋ ಲೈಕ್ ಮಾಡಿದರು ಎಂಬ ಕಾರಣಕ್ಕೆ ಸಿಟ್ಟು ಮಾಡಿಕೊಂಡರು ಎಂಬುದರಲ್ಲಿ ಅರ್ಥವಿಲ್ಲ ಎಂಬುದು ಅನೇಕರ ಅಭಿಪ್ರಾಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ