AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ ಚಿತ್ರರಂಗ ತೊರೆಯುತ್ತಾರಾ? ಅವರು ಒಪ್ಪಿಕೊಂಡ ಸಿನಿಮಾ ಬಗ್ಗೆ ಕೇಳಿ ಬರ್ತಿದೆ ಹೊಸ ಅಪ್​ಡೇಟ್​

ಒಂದೂವರೆ ವರ್ಷ ಕಳೆದರೂ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್​ ಸಿಕ್ಕಿಲ್ಲ. ಈಇನ್ನು, ಅನುಷ್ಕಾ, ಚಿತ್ರರಂಗದಿಂದ ದೂರ ಉಳಿಯಲಿದ್ದಾರೆ ಎಂದು ಕೂಡ ಹೇಳಲಾಗಿತ್ತು.

ಅನುಷ್ಕಾ ಶರ್ಮಾ ಚಿತ್ರರಂಗ ತೊರೆಯುತ್ತಾರಾ? ಅವರು ಒಪ್ಪಿಕೊಂಡ ಸಿನಿಮಾ ಬಗ್ಗೆ ಕೇಳಿ ಬರ್ತಿದೆ ಹೊಸ ಅಪ್​ಡೇಟ್​
ಅನುಷ್ಕಾ ಶರ್ಮಾ
TV9 Web
| Edited By: |

Updated on: Jul 03, 2021 | 5:47 PM

Share

2018ರಲ್ಲಿ ತೆರೆಗೆ ಬಂದ ‘ಜೀರೋ’ ಸಿನಿಮಾವೇ ಕೊನೆ. ಅದಾದ ನಂತರದಲ್ಲಿ ಅನುಷ್ಕಾ ಶರ್ಮಾ ಯಾವುದೇ ಚಿತ್ರಗಳಲ್ಲೂ ನಟಿಸಿಲ್ಲ. ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿದ್ದು ಒಂದು ಕಾರಣವಾದರೆ, ಅನುಷ್ಕಾ ಗರ್ಭ ಧರಿಸಿ, ಮಗುವಿಗೆ ಜನ್ಮ ನೀಡಿದ್ದು ಮತ್ತೊಂದು ಕಾರಣ. ಹೀಗಿರುವಾಗಲೇ ಅನುಷ್ಕಾ ಚಿತ್ರರಂಗ ತೊರೆಯಲಿದ್ದಾರೆ ಎನ್ನುವ ಗುಸುಗುಸು ಕೇಳಿ ಬಂದಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ.

ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ಜೂಲನ್​ ಗೋಸ್ವಾಮಿ ಬಗ್ಗೆ ಬಯೋಪಿಕ್​ ಸಿದ್ಧಗೊಳ್ಳುತ್ತಿದ್ದು, ಇದರಲ್ಲಿ ಅನುಷ್ಕಾ ನಟಿಸಲಿದ್ದಾರೆ ಎಂದು 2020ರಲ್ಲಿ ಸೋನಿ ಪಿಕ್ಚರ್ಸ್​ ಘೋಷಣೆ ಮಾಡಿತ್ತು. ಇದಾದ ಕೆಲವೇ ತಿಂಗಳಲ್ಲಿ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಿರುವಾಗಲೇ ಅನುಷ್ಕಾ ಗರ್ಭ ಧರಿಸಿದ್ದರು. ಸದ್ಯ ಅವರು ಸಂಪೂರ್ಣವಾಗಿ ಮಗುವಿನ ಆರೈಕೆಯಲ್ಲಿ ತೊಡಗಿದ್ದಾರೆ.

ಒಂದೂವರೆ ವರ್ಷ ಕಳೆದರೂ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್​ ಸಿಕ್ಕಿಲ್ಲ. ಈ ಕಾರಣಕ್ಕೆ ಸಿನಿಮಾ ಸೆಟ್ಟೇರುವುದು ಅನುಮಾನ ಎನ್ನುವ ಮಾತು ಕೇಳಿ ಬಂದಿತ್ತು. ಇನ್ನು, ಅನುಷ್ಕಾ, ಚಿತ್ರರಂಗದಿಂದ ದೂರ ಉಳಿಯಲಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದರೆ, ಮೂಲಗಳ ಪ್ರಕಾರ, ಅನುಷ್ಕಾ ಚಿತ್ರರಂಗ ತೊರೆಯುತ್ತಿಲ್ಲ. ಶೀಘ್ರವೇ ಅವರು ಈ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಬಯೋಪಿಕ್​ ಎಂದಾಗ ಪಾತ್ರಕ್ಕೆ ಒಂದಷ್ಟು ಸಿದ್ಧತೆಗಳು ಅತ್ಯವಶ್ಯಕ. ಶೀಘ್ರವೇ ಈ ಎಲ್ಲಾ ಕಾರ್ಯಗಳಿಗೆ ಅನುಷ್ಕಾ ಚಾಲನೆ ನೀಡಲಿದ್ದಾರಂತೆ. ವರ್ಷಾಂತ್ಯಕ್ಕೆ ಈ ಬಯೋಪಿಕ್ ಸೆಟ್ಟೇರಲಿದೆ. ಒಟ್ಟಿನಲ್ಲಿ ಅನುಷ್ಕಾ ಚಿತ್ರರಂಗ ತೊರೆಯುವುದಿಲ್ಲ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ದಂಪತಿ ಈ ವರ್ಷದ ಆರಂಭದಲ್ಲಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದರು. ಈ ಮಗುವಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಸದ್ಯ, ವಿರಾಟ್​ ಇಂಗ್ಲೆಂಡ್ ಟೂರ್​ಗಾಗಿ ಆಂಗ್ಲರ ನಾಡಿನಲ್ಲಿದ್ದಾರೆ. ಅನುಷ್ಕಾ ಕೂಡ ವಿರಾಟ್​ಗೆ ಜತೆಯಾಗಿದ್ದಾರೆ.

ಜೂಲನ್​ ಗೋಸ್ವಾಮಿ ಟೀಂ ಇಂಡಿಯಾ ಮಹಿಳಾ ತಂಡದ ಆಲ್​ರೌಂಡರ್​ ಆಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್​ ಪಡೆದ ಮಹಿಳಾ ಕ್ರಿಕೆಟ್​ ಇವರಾಗಿದ್ದಾರೆ.

ಇದನ್ನೂ ಓದಿ: ‘ಆ ಮಗುವಿಗೆ ಉಸಿರು ಕಟ್ಟುತ್ತಿದೆ’; ಅನುಷ್ಕಾ-ವಿರಾಟ್​ ಪುತ್ರಿ ವಮಿಕಾ ವಿಚಾರದಲ್ಲಿ ನೆಟ್ಟಿಗರ ಆಕ್ರೋಶ

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ