AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ ಚಿತ್ರರಂಗ ತೊರೆಯುತ್ತಾರಾ? ಅವರು ಒಪ್ಪಿಕೊಂಡ ಸಿನಿಮಾ ಬಗ್ಗೆ ಕೇಳಿ ಬರ್ತಿದೆ ಹೊಸ ಅಪ್​ಡೇಟ್​

ಒಂದೂವರೆ ವರ್ಷ ಕಳೆದರೂ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್​ ಸಿಕ್ಕಿಲ್ಲ. ಈಇನ್ನು, ಅನುಷ್ಕಾ, ಚಿತ್ರರಂಗದಿಂದ ದೂರ ಉಳಿಯಲಿದ್ದಾರೆ ಎಂದು ಕೂಡ ಹೇಳಲಾಗಿತ್ತು.

ಅನುಷ್ಕಾ ಶರ್ಮಾ ಚಿತ್ರರಂಗ ತೊರೆಯುತ್ತಾರಾ? ಅವರು ಒಪ್ಪಿಕೊಂಡ ಸಿನಿಮಾ ಬಗ್ಗೆ ಕೇಳಿ ಬರ್ತಿದೆ ಹೊಸ ಅಪ್​ಡೇಟ್​
ಅನುಷ್ಕಾ ಶರ್ಮಾ
TV9 Web
| Edited By: |

Updated on: Jul 03, 2021 | 5:47 PM

Share

2018ರಲ್ಲಿ ತೆರೆಗೆ ಬಂದ ‘ಜೀರೋ’ ಸಿನಿಮಾವೇ ಕೊನೆ. ಅದಾದ ನಂತರದಲ್ಲಿ ಅನುಷ್ಕಾ ಶರ್ಮಾ ಯಾವುದೇ ಚಿತ್ರಗಳಲ್ಲೂ ನಟಿಸಿಲ್ಲ. ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿದ್ದು ಒಂದು ಕಾರಣವಾದರೆ, ಅನುಷ್ಕಾ ಗರ್ಭ ಧರಿಸಿ, ಮಗುವಿಗೆ ಜನ್ಮ ನೀಡಿದ್ದು ಮತ್ತೊಂದು ಕಾರಣ. ಹೀಗಿರುವಾಗಲೇ ಅನುಷ್ಕಾ ಚಿತ್ರರಂಗ ತೊರೆಯಲಿದ್ದಾರೆ ಎನ್ನುವ ಗುಸುಗುಸು ಕೇಳಿ ಬಂದಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ.

ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ಜೂಲನ್​ ಗೋಸ್ವಾಮಿ ಬಗ್ಗೆ ಬಯೋಪಿಕ್​ ಸಿದ್ಧಗೊಳ್ಳುತ್ತಿದ್ದು, ಇದರಲ್ಲಿ ಅನುಷ್ಕಾ ನಟಿಸಲಿದ್ದಾರೆ ಎಂದು 2020ರಲ್ಲಿ ಸೋನಿ ಪಿಕ್ಚರ್ಸ್​ ಘೋಷಣೆ ಮಾಡಿತ್ತು. ಇದಾದ ಕೆಲವೇ ತಿಂಗಳಲ್ಲಿ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಿರುವಾಗಲೇ ಅನುಷ್ಕಾ ಗರ್ಭ ಧರಿಸಿದ್ದರು. ಸದ್ಯ ಅವರು ಸಂಪೂರ್ಣವಾಗಿ ಮಗುವಿನ ಆರೈಕೆಯಲ್ಲಿ ತೊಡಗಿದ್ದಾರೆ.

ಒಂದೂವರೆ ವರ್ಷ ಕಳೆದರೂ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್​ ಸಿಕ್ಕಿಲ್ಲ. ಈ ಕಾರಣಕ್ಕೆ ಸಿನಿಮಾ ಸೆಟ್ಟೇರುವುದು ಅನುಮಾನ ಎನ್ನುವ ಮಾತು ಕೇಳಿ ಬಂದಿತ್ತು. ಇನ್ನು, ಅನುಷ್ಕಾ, ಚಿತ್ರರಂಗದಿಂದ ದೂರ ಉಳಿಯಲಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದರೆ, ಮೂಲಗಳ ಪ್ರಕಾರ, ಅನುಷ್ಕಾ ಚಿತ್ರರಂಗ ತೊರೆಯುತ್ತಿಲ್ಲ. ಶೀಘ್ರವೇ ಅವರು ಈ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಬಯೋಪಿಕ್​ ಎಂದಾಗ ಪಾತ್ರಕ್ಕೆ ಒಂದಷ್ಟು ಸಿದ್ಧತೆಗಳು ಅತ್ಯವಶ್ಯಕ. ಶೀಘ್ರವೇ ಈ ಎಲ್ಲಾ ಕಾರ್ಯಗಳಿಗೆ ಅನುಷ್ಕಾ ಚಾಲನೆ ನೀಡಲಿದ್ದಾರಂತೆ. ವರ್ಷಾಂತ್ಯಕ್ಕೆ ಈ ಬಯೋಪಿಕ್ ಸೆಟ್ಟೇರಲಿದೆ. ಒಟ್ಟಿನಲ್ಲಿ ಅನುಷ್ಕಾ ಚಿತ್ರರಂಗ ತೊರೆಯುವುದಿಲ್ಲ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ದಂಪತಿ ಈ ವರ್ಷದ ಆರಂಭದಲ್ಲಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದರು. ಈ ಮಗುವಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಸದ್ಯ, ವಿರಾಟ್​ ಇಂಗ್ಲೆಂಡ್ ಟೂರ್​ಗಾಗಿ ಆಂಗ್ಲರ ನಾಡಿನಲ್ಲಿದ್ದಾರೆ. ಅನುಷ್ಕಾ ಕೂಡ ವಿರಾಟ್​ಗೆ ಜತೆಯಾಗಿದ್ದಾರೆ.

ಜೂಲನ್​ ಗೋಸ್ವಾಮಿ ಟೀಂ ಇಂಡಿಯಾ ಮಹಿಳಾ ತಂಡದ ಆಲ್​ರೌಂಡರ್​ ಆಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್​ ಪಡೆದ ಮಹಿಳಾ ಕ್ರಿಕೆಟ್​ ಇವರಾಗಿದ್ದಾರೆ.

ಇದನ್ನೂ ಓದಿ: ‘ಆ ಮಗುವಿಗೆ ಉಸಿರು ಕಟ್ಟುತ್ತಿದೆ’; ಅನುಷ್ಕಾ-ವಿರಾಟ್​ ಪುತ್ರಿ ವಮಿಕಾ ವಿಚಾರದಲ್ಲಿ ನೆಟ್ಟಿಗರ ಆಕ್ರೋಶ

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್