AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟು ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಪ್ರಭಾಸ್-ಅನುಷ್ಕಾ

Prabhas-Anushka Shetty: ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆಲುಗು ಚಿತ್ರರಂಗದ ಹಿಟ್ ಜೋಡಿ. ಇಬ್ಬರು ಪ್ರೀತಿಯಲ್ಲಿದ್ದಾರೆ, ಮದುವೆ ಸಹ ಆಗಿಬಿಟ್ಟಿದ್ದಾರೆ ಎಂದು ಹಲವಾರು ಬಾರಿ ಸುದ್ದಿಗಳು ಹರಿದಾಡಿವೆ. ಇಬ್ಬರು ಒಳ್ಳೆಯ ನಟರಾಗಿರುವ ಜೊತೆಗೆ ಒಳ್ಳೆಯ ಸ್ನೇಹಿತರೂ ಸಹ. ಇದೀಗ ಸುಮಾರು ಎಂಟು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಪ್ರೇಕ್ಷಕರ ಎದುರು ಬರಲಿದ್ದಾರೆ.

ಎಂಟು ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಪ್ರಭಾಸ್-ಅನುಷ್ಕಾ
Prabhas Anushka
ಮಂಜುನಾಥ ಸಿ.
|

Updated on:Aug 20, 2025 | 1:19 PM

Share

ಪ್ರಭಾಸ್ (Prabhas) ಮತ್ತು ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಚಿತ್ರರಂಗದ ಬಲು ಮೆಚ್ಚಿನ ತಾರಾ ಜೋಡಿ. ಈ ಇಬ್ಬರೂ ಒಟ್ಟಿಗೆ ನಟಿಸಿರುವ ಎಲ್ಲ ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿವೆ. ‘ಬಿಲ್ಲ’, ‘ಮಿರ್ಚಿ’, ‘ಬಾಹುಬಲಿ’, ‘ಬಾಹುಬಲಿ 2’ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆದರೆ ‘ಬಾಹುಬಲಿ 2’ ಸಿನಿಮಾದ ಬಳಿಕ ಈ ಜೋಡಿ ಒಟ್ಟಿಗೆ ನಟಿಸಿಲ್ಲ. ಈ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರೂ ಮದುವೆ ಸಹ ಆಗಿಬಿಟ್ಟಿದ್ದಾರೆ ಎಂದೆಲ್ಲ ಹಲವು ಬಾರಿ ಸುದ್ದಿಗಳು ಹರಿದಾಡಿದ್ದವು. ಆದರೆ ಇಬ್ಬರೂ ಸಹ ಅದನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಆದರೆ ಇದೀಗ 8 ವರ್ಷಗಳ ಬಳಿಕ ಈ ಜೋಡಿ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಆದರೆ ದೊಡ್ಡ ಪರದೆಯ ಮೇಲಲ್ಲ.

ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಹಾಗೆಂದು ಇವರು ಒಟ್ಟಿಗೆ ಸಿನಿಮಾನಲ್ಲಿ ನಟಿಸುತ್ತಿಲ್ಲ ಬದಲಿಗೆ ಒಟ್ಟಿಗೆ ಸಂದರ್ಶನವೊಂದಕ್ಕೆ ಹಾಜರಾಗಲಿದ್ದಾರೆ. ಇದು ಸಾಮಾನ್ಯ ಸಂದರ್ಶನದಂತೆ ಇರದೆ ಫನ್ನಿ ಪಾಡ್​ಕಾಸ್ಟ್ ರೀತಿ ಇರಲಿದೆ. ‘ಬಾಹುಬಲಿ’ ಸಿನಿಮಾ ಎಂಟು ವರ್ಷಗಳ ಬಳಿಕ ಮರು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಈ ಜೋಡಿ ಒಟ್ಟಿಗೆ ಸಂದರ್ಶನದಲ್ಲಿ ಭಾಗಿಯಾಗಿ ಸಿನಿಮಾದ ಪ್ರಚಾರ ಮಾಡಲಿದ್ದಾರೆ.

ಪ್ರಭಾಸ್, ಅನುಷ್ಕಾ ಮಾತ್ರವೇ ಅಲ್ಲದೆ ಇದೇ ಫನ್ನಿ ಸಂದರ್ಶನದಲ್ಲಿ ರಾಣಾ ದಗ್ಗುಬಾಟಿ, ತಮನ್ನಾ ಭಾಟಿಯಾ ಮತ್ತು ರಾಜಮೌಳಿ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ‘ಬಾಹುಬಲಿ’ ಸಿನಿಮಾದ ಇನ್ನಷ್ಟು ಕಲಾವಿದರು, ತಂತ್ರಜ್ಞರು ಸಹ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕಾರ್ಯಕ್ರಮದ ಶೂಟಿಂಗ್ ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅಕ್ಟೋಬರ್ ತಿಂಗಳಲ್ಲಿ ಈ ಕಾರ್ಯಕ್ರಮ ಯೂಟ್ಯೂಬ್ ಹಾಗೂ ಟಿವಿ ಚಾನೆಲ್​​ನಲ್ಲಿ ಬಿಡುಗಡೆ ಆಗಲಿದೆಯಂತೆ.

ಇದನ್ನೂ ಓದಿ:ಪ್ರಭಾಸ್ ಮದುವೆ ಯಾವಾಗ? ನಟನ ದೊಡ್ಡಮ್ಮ ಹೇಳಿದ್ದೇನು?

ಕೆಲವು ದಿನಗಳ ಹಿಂದಷ್ಟೆ ‘ಬಾಹುಬಲಿ’ ಸಿನಿಮಾದ ಬಿಡುಗಡೆ ವಾರ್ಷಿಕೋತ್ಸಕ್ಕೆ ಚಿತ್ರತಂಡ ಒಟ್ಟಾಗಿ ಸೇರಿ ಪಾರ್ಟಿ ಮಾಡಿತ್ತು. ಆ ಕಾರ್ಯಕ್ರಮದ ಚಿತ್ರಗಳನ್ನು ರಾಜಮೌಳಿ ಹಾಗೂ ಇತರರು ಹಂಚಿಕೊಂಡಿದ್ದರು. ಆದರೆ ಆ ಚಿತ್ರಗಳಲ್ಲಿ ಅನುಷ್ಕಾ ಶೆಟ್ಟಿ, ತಮ್ನನಾ ಭಾಟಿಯಾ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಈ ಇಬ್ಬರೂ ಸಹ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ.

ಅಸಲಿಗೆ ‘ಬಾಹುಬಲಿ’ ಸಿನಿಮಾದ ಶೂಟಿಂಗ್ ವೇಳೆಯೂ ಸಹ ಇಂಥಹುದೇ ಒಂದು ಫನ್ನಿ ಸ್ಕಿಟ್ ಒಂದನ್ನು ಚಿತ್ರತಂಡ ಮಾಡಿತ್ತು. ತೆಲುಗು ಚಿತ್ರರಂಗವೆಲ್ಲ ಸೇರಿ ಪ್ರವಾಹ ಸಂತ್ರಸ್ತರಿಗೆ ಹಣ ಒಟ್ಟುಗೂಡಿಸಲು ಕಾರ್ಯಕ್ರಮ ಮಾಡಿತ್ತು, ಆ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸಲು ಆಗದ ‘ಬಾಹುಬಲಿ’ ತಂಡ ತಾವು ಇದ್ದಲ್ಲಿಯೇ ಎಲ್ಲರೂ ಒಟ್ಟಾಗಿ ಅಡುಗೆ ಸವಾಲು ಮಾಡಿ ತಮಾಷೆಯ ವಿಡಿಯೋ ಅನ್ನು ಅಪ್​ಲೋಡ್ ಮಾಡಿದ್ದರು. ಈಗ ಮತ್ತೆ ಅಂಥಹುದೇ ಕಾರ್ಯಕ್ರಮವನ್ನು ಮಾಡುತ್ತಿದೆ ಚಿತ್ರತಂಡ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Wed, 20 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!