AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿ-ವಿಜಯ್​ ಸೇತುಪತಿ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ; ನಿರ್ದೇಶನ ಯಾರದ್ದು?

ವಿಜಯ್​ ಸೇತುಪತಿಗೆ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ತುಂಬಾನೇ ನ್ಯಾಚುರಲ್​ಆಗಿ ಅವರು ನಟಿಸುತ್ತಾರೆ. ಇನ್ನು, ಅವರ ಅದ್ಭುತ ನಟನೆ ಎಲ್ಲರಿಗೂ ಇಷ್ಟವಾಗುತ್ತದೆ.

ಅನುಷ್ಕಾ ಶೆಟ್ಟಿ-ವಿಜಯ್​ ಸೇತುಪತಿ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ; ನಿರ್ದೇಶನ ಯಾರದ್ದು?
TV9 Web
| Edited By: |

Updated on: Dec 05, 2021 | 9:11 PM

Share

‘ಬಾಹುಬಲಿ’ ಅಂತಹ ಹಿಟ್​ ಚಿತ್ರಗಳಲ್ಲಿ ನಟಿಸಿದ ಹೊರತಾಗಿಯೂ ಅನುಷ್ಕಾ ಶೆಟ್ಟಿಗೆ ಹೇಳಿಕೊಳ್ಳುವಂತಹ ಸಿನಿಮಾ ಆಫರ್​ಗಳು ಬಂದಿಲ್ಲ. ಇತ್ತೀಚೆಗೆ ಅವರಿಗೆ ಚಿತ್ರರಂಗದಲ್ಲಿ ಅಷ್ಟಾಗಿ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಚ್ಯೂಸಿ ಆಗಿದ್ದಾರೆ. ತುಂಬಾನೇ ಲೆಕ್ಕಾಚಾರ ಹಾಕಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರ ಮುಂದಿನ ಚಿತ್ರದ ಬಗ್ಗೆ ಹೊಸ ಅಪ್​​ಡೇಟ್​ ಒಂದು ಕೇಳಿ ಬಂದಿದೆ. ತಮಿಳಿನ ಖ್ಯಾತ ನಟ ವಿಜಯ್​ ಸೇತುಪತಿ ಜತೆ ಅನುಷ್ಕಾ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ವಿಜಯ್​ ಸೇತುಪತಿಗೆ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ತುಂಬಾನೇ ನ್ಯಾಚುರಲ್​ಆಗಿ ಅವರು ನಟಿಸುತ್ತಾರೆ. ಇನ್ನು, ಅವರ ಅದ್ಭುತ ನಟನೆ ಎಲ್ಲರಿಗೂ ಇಷ್ಟವಾಗುತ್ತದೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈಗ ಅನುಷ್ಕಾ ಮತ್ತು ವಿಜಯ್​ ಒಂದಾಗುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್​​ ಆಗಿದ್ದಾರೆ.

2020ರ ಆರಂಭದಲ್ಲೇ ಅನುಷ್ಕಾ ಮತ್ತು ವಿಜಯ್​ ಒಟ್ಟಾಗಿ ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಳಿಕ ಕೊವಿಡ್ ಕಾಣಿಸಿಕೊಂಡಿತ್ತು. ನಂತರದಲ್ಲಿ ಈ ವಿಚಾರವನ್ನು ಇಬ್ಬರೂ ಅಲ್ಲಗಳೆದಿದ್ದರು. ಇದೊಂದು ವದಂತಿ ಎಂದು ಸ್ಪಷ್ಟನೆ ನೀಡಿದ್ದರು. ಈಗ ಟಾಲಿವುಡ್​ನಲ್ಲಿ ಮತ್ತೆ ಈ ಸುದ್ದಿ ಹುಟ್ಟಿಕೊಂಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಯೋಪಿಕ್​ ಸಿದ್ಧಪಡಿಸಿದ್ದ ಎ.ಎಲ್​. ವಿಜಯ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ.

ಜನವರಿಯಲ್ಲಿ ಈ ಹೊಸ ಸಿನಿಮಾದ ಶೂಟಿಂಗ್​ ಆರಂಭಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು ಅನುಷ್ಕಾ ಮತ್ತು  ನಿರ್ದೇಶಕ ಎ.ಎಲ್​​. ವಿಜಯ್​ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.  ಈಗ ಅವರು ಮೂರನೇ ಬಾರಿಗೆ ಅನುಷ್ಕಾ ಜತೆ ಸಿನಿಮಾ ಮಾಡುತ್ತಿದ್ದಾರೆ. ಅನುಷ್ಕಾ ಹಾಗೂ ನಟ ವಿಜಯ್​ ಈವರೆಗೆ ಒಟ್ಟಾಗಿ ನಟಿಸಿಲ್ಲ. ಅವರನ್ನು ಈಗ ಒಂದೇ ಸಿನಿಮಾದಲ್ಲಿ ತರುತ್ತಿರುವುದಕ್ಕೆ ಅಭಿಮಾನಿಗಳು ಖುಷಿಯಾಗಿದ್ದಾರೆ. ಇಬ್ಬರೂ ಈಗಾಗಲೇ ಕಥೆ ಕೇಳಿದ್ದು, ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಜನ್ಮದಿನಕ್ಕೆ ಸರ್​​ಪ್ರೈಸ್ ಗಿಫ್ಟ್

Anushka Shetty Birthday: ಹ್ಯಾಟ್ರಿಕ್​ ಬಾರಿಸೋಕೆ ರೆಡಿ ಆದ ಅನುಷ್ಕಾ ಶೆಟ್ಟಿ​; ಅಭಿಮಾನಿಗಳಿಗೆ ಸರ್​ಪ್ರೈಸ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?