AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿ-ವಿಜಯ್​ ಸೇತುಪತಿ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ; ನಿರ್ದೇಶನ ಯಾರದ್ದು?

ವಿಜಯ್​ ಸೇತುಪತಿಗೆ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ತುಂಬಾನೇ ನ್ಯಾಚುರಲ್​ಆಗಿ ಅವರು ನಟಿಸುತ್ತಾರೆ. ಇನ್ನು, ಅವರ ಅದ್ಭುತ ನಟನೆ ಎಲ್ಲರಿಗೂ ಇಷ್ಟವಾಗುತ್ತದೆ.

ಅನುಷ್ಕಾ ಶೆಟ್ಟಿ-ವಿಜಯ್​ ಸೇತುಪತಿ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ; ನಿರ್ದೇಶನ ಯಾರದ್ದು?
TV9 Web
| Edited By: |

Updated on: Dec 05, 2021 | 9:11 PM

Share

‘ಬಾಹುಬಲಿ’ ಅಂತಹ ಹಿಟ್​ ಚಿತ್ರಗಳಲ್ಲಿ ನಟಿಸಿದ ಹೊರತಾಗಿಯೂ ಅನುಷ್ಕಾ ಶೆಟ್ಟಿಗೆ ಹೇಳಿಕೊಳ್ಳುವಂತಹ ಸಿನಿಮಾ ಆಫರ್​ಗಳು ಬಂದಿಲ್ಲ. ಇತ್ತೀಚೆಗೆ ಅವರಿಗೆ ಚಿತ್ರರಂಗದಲ್ಲಿ ಅಷ್ಟಾಗಿ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಚ್ಯೂಸಿ ಆಗಿದ್ದಾರೆ. ತುಂಬಾನೇ ಲೆಕ್ಕಾಚಾರ ಹಾಕಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರ ಮುಂದಿನ ಚಿತ್ರದ ಬಗ್ಗೆ ಹೊಸ ಅಪ್​​ಡೇಟ್​ ಒಂದು ಕೇಳಿ ಬಂದಿದೆ. ತಮಿಳಿನ ಖ್ಯಾತ ನಟ ವಿಜಯ್​ ಸೇತುಪತಿ ಜತೆ ಅನುಷ್ಕಾ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ವಿಜಯ್​ ಸೇತುಪತಿಗೆ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ತುಂಬಾನೇ ನ್ಯಾಚುರಲ್​ಆಗಿ ಅವರು ನಟಿಸುತ್ತಾರೆ. ಇನ್ನು, ಅವರ ಅದ್ಭುತ ನಟನೆ ಎಲ್ಲರಿಗೂ ಇಷ್ಟವಾಗುತ್ತದೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈಗ ಅನುಷ್ಕಾ ಮತ್ತು ವಿಜಯ್​ ಒಂದಾಗುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್​​ ಆಗಿದ್ದಾರೆ.

2020ರ ಆರಂಭದಲ್ಲೇ ಅನುಷ್ಕಾ ಮತ್ತು ವಿಜಯ್​ ಒಟ್ಟಾಗಿ ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಳಿಕ ಕೊವಿಡ್ ಕಾಣಿಸಿಕೊಂಡಿತ್ತು. ನಂತರದಲ್ಲಿ ಈ ವಿಚಾರವನ್ನು ಇಬ್ಬರೂ ಅಲ್ಲಗಳೆದಿದ್ದರು. ಇದೊಂದು ವದಂತಿ ಎಂದು ಸ್ಪಷ್ಟನೆ ನೀಡಿದ್ದರು. ಈಗ ಟಾಲಿವುಡ್​ನಲ್ಲಿ ಮತ್ತೆ ಈ ಸುದ್ದಿ ಹುಟ್ಟಿಕೊಂಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಯೋಪಿಕ್​ ಸಿದ್ಧಪಡಿಸಿದ್ದ ಎ.ಎಲ್​. ವಿಜಯ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ.

ಜನವರಿಯಲ್ಲಿ ಈ ಹೊಸ ಸಿನಿಮಾದ ಶೂಟಿಂಗ್​ ಆರಂಭಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು ಅನುಷ್ಕಾ ಮತ್ತು  ನಿರ್ದೇಶಕ ಎ.ಎಲ್​​. ವಿಜಯ್​ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.  ಈಗ ಅವರು ಮೂರನೇ ಬಾರಿಗೆ ಅನುಷ್ಕಾ ಜತೆ ಸಿನಿಮಾ ಮಾಡುತ್ತಿದ್ದಾರೆ. ಅನುಷ್ಕಾ ಹಾಗೂ ನಟ ವಿಜಯ್​ ಈವರೆಗೆ ಒಟ್ಟಾಗಿ ನಟಿಸಿಲ್ಲ. ಅವರನ್ನು ಈಗ ಒಂದೇ ಸಿನಿಮಾದಲ್ಲಿ ತರುತ್ತಿರುವುದಕ್ಕೆ ಅಭಿಮಾನಿಗಳು ಖುಷಿಯಾಗಿದ್ದಾರೆ. ಇಬ್ಬರೂ ಈಗಾಗಲೇ ಕಥೆ ಕೇಳಿದ್ದು, ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಜನ್ಮದಿನಕ್ಕೆ ಸರ್​​ಪ್ರೈಸ್ ಗಿಫ್ಟ್

Anushka Shetty Birthday: ಹ್ಯಾಟ್ರಿಕ್​ ಬಾರಿಸೋಕೆ ರೆಡಿ ಆದ ಅನುಷ್ಕಾ ಶೆಟ್ಟಿ​; ಅಭಿಮಾನಿಗಳಿಗೆ ಸರ್​ಪ್ರೈಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್