AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ

ರತದ ಮೂಲಕ ಕೂ ಆ್ಯಪ್​​ ಬಗ್ಗೆ ಜನರು ಹೆಚ್ಚು ಒಲವು ತೋರಿದ್ದರು. ಈಗ ಅನುಷ್ಕಾ ಕೂಡ ಕೂ ಕುಟುಂಬ​ ಸೇರಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ತಮ್ಮನ್ನು ಫಾಲೋ ಮಾಡುವಂತೆ ಕೋರಿದ್ದಾರೆ.  -nus

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ
ನಟಿ ಅನುಷ್ಕಾ ಶೆಟ್ಟಿ.
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 25, 2021 | 7:17 PM

ಅನುಷ್ಕಾ ಶೆಟ್ಟಿ ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟಿವ್​ ಆಗಿಲ್ಲ. ಇತ್ತೀಚೆಗೆ ಅವರ ನಟನೆಯ ಚಿತ್ರಗಳು ತೆರೆಗೆ ಬಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅವರು ಆ್ಯಕ್ಟಿವ್​ ಆಗಿರೋದು ತುಂಬಾನೇ ಅಪರೂಪ. ಈಗ ಅವರು ಅಭಿಮಾನಿಗಳ ಬಳಿ ನನ್ನನ್ನು ಫಾಲೋ ಮಾಡಿ ಎಂದು ಕೇಳಿದ್ದಾರೆ. ಅಷ್ಟಕ್ಕೂ ಅನುಷ್ಕಾ ಈ ರೀತಿಯ ಬೇಡಿಕೆ ಇಡೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವೆ ಸಣ್ಣ ತಿಕ್ಕಾಟ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮ ಒಪ್ಪಿಕೊಳ್ಳದಿದ್ದರೆ, ಭಾರತದಲ್ಲಿ ಟ್ವಿಟರ್​ ಬ್ಯಾನ್​ ಆಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಹೀಗಾಗಿ, ಭಾರತದ ಮೂಲಕ ಕೂ ಆ್ಯಪ್​​ ಬಗ್ಗೆ ಜನರು ಹೆಚ್ಚು ಒಲವು ತೋರಿದ್ದರು. ಈಗ ಅನುಷ್ಕಾ ಕೂಡ ಕೂ ಕುಟುಂಬ​ ಸೇರಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ತಮ್ಮನ್ನು ಫಾಲೋ ಮಾಡುವಂತೆ ಕೋರಿದ್ದಾರೆ.

‘ಎಲ್ಲರೂ ಸುರಕ್ಷಿತವಾಗಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಆಸಕ್ತಿಕರ ಮಾಹಿತಿಗೆ ನನ್ನನ್ನು ಕೂ ಆ್ಯಪ್​ನಲ್ಲಿ ಫಾಲೋ ಮಾಡಿ. ಧನ್ಯವಾದಗಳು’ ಎಂದು ಅನುಷ್ಕಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ​. ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಮುಂದಿನ ದಿನಗಳಲ್ಲಿ ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಸರ್ಕಾರದಿಂದ ಈ ಆ್ಯಪ್​ಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಅನುಷ್ಕಾ ಶೆಟ್ಟಿ, ‘ಮಿಸ್​. ಶೆಟ್ಟಿ ಮಿಸ್ಟರ್​ ಪೊಲಿಶೆಟ್ಟಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಸಿನಿಮಾ ಶೂಟಿಂಗ್​ ಆರಂಭವಾಗುವ ಸಾಧ್ಯತೆ ಇದೆ.  ಪಿ. ಮಹೇಶ್​ ಹೆಸರಿನ ಹೊಸ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ:ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್