AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ

ರತದ ಮೂಲಕ ಕೂ ಆ್ಯಪ್​​ ಬಗ್ಗೆ ಜನರು ಹೆಚ್ಚು ಒಲವು ತೋರಿದ್ದರು. ಈಗ ಅನುಷ್ಕಾ ಕೂಡ ಕೂ ಕುಟುಂಬ​ ಸೇರಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ತಮ್ಮನ್ನು ಫಾಲೋ ಮಾಡುವಂತೆ ಕೋರಿದ್ದಾರೆ.  -nus

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ
ನಟಿ ಅನುಷ್ಕಾ ಶೆಟ್ಟಿ.
TV9 Web
| Edited By: |

Updated on: Jun 25, 2021 | 7:17 PM

Share

ಅನುಷ್ಕಾ ಶೆಟ್ಟಿ ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟಿವ್​ ಆಗಿಲ್ಲ. ಇತ್ತೀಚೆಗೆ ಅವರ ನಟನೆಯ ಚಿತ್ರಗಳು ತೆರೆಗೆ ಬಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅವರು ಆ್ಯಕ್ಟಿವ್​ ಆಗಿರೋದು ತುಂಬಾನೇ ಅಪರೂಪ. ಈಗ ಅವರು ಅಭಿಮಾನಿಗಳ ಬಳಿ ನನ್ನನ್ನು ಫಾಲೋ ಮಾಡಿ ಎಂದು ಕೇಳಿದ್ದಾರೆ. ಅಷ್ಟಕ್ಕೂ ಅನುಷ್ಕಾ ಈ ರೀತಿಯ ಬೇಡಿಕೆ ಇಡೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವೆ ಸಣ್ಣ ತಿಕ್ಕಾಟ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮ ಒಪ್ಪಿಕೊಳ್ಳದಿದ್ದರೆ, ಭಾರತದಲ್ಲಿ ಟ್ವಿಟರ್​ ಬ್ಯಾನ್​ ಆಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಹೀಗಾಗಿ, ಭಾರತದ ಮೂಲಕ ಕೂ ಆ್ಯಪ್​​ ಬಗ್ಗೆ ಜನರು ಹೆಚ್ಚು ಒಲವು ತೋರಿದ್ದರು. ಈಗ ಅನುಷ್ಕಾ ಕೂಡ ಕೂ ಕುಟುಂಬ​ ಸೇರಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ತಮ್ಮನ್ನು ಫಾಲೋ ಮಾಡುವಂತೆ ಕೋರಿದ್ದಾರೆ.

‘ಎಲ್ಲರೂ ಸುರಕ್ಷಿತವಾಗಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಆಸಕ್ತಿಕರ ಮಾಹಿತಿಗೆ ನನ್ನನ್ನು ಕೂ ಆ್ಯಪ್​ನಲ್ಲಿ ಫಾಲೋ ಮಾಡಿ. ಧನ್ಯವಾದಗಳು’ ಎಂದು ಅನುಷ್ಕಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ​. ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಮುಂದಿನ ದಿನಗಳಲ್ಲಿ ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಸರ್ಕಾರದಿಂದ ಈ ಆ್ಯಪ್​ಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಅನುಷ್ಕಾ ಶೆಟ್ಟಿ, ‘ಮಿಸ್​. ಶೆಟ್ಟಿ ಮಿಸ್ಟರ್​ ಪೊಲಿಶೆಟ್ಟಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಸಿನಿಮಾ ಶೂಟಿಂಗ್​ ಆರಂಭವಾಗುವ ಸಾಧ್ಯತೆ ಇದೆ.  ಪಿ. ಮಹೇಶ್​ ಹೆಸರಿನ ಹೊಸ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ:ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ