AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ

ರತದ ಮೂಲಕ ಕೂ ಆ್ಯಪ್​​ ಬಗ್ಗೆ ಜನರು ಹೆಚ್ಚು ಒಲವು ತೋರಿದ್ದರು. ಈಗ ಅನುಷ್ಕಾ ಕೂಡ ಕೂ ಕುಟುಂಬ​ ಸೇರಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ತಮ್ಮನ್ನು ಫಾಲೋ ಮಾಡುವಂತೆ ಕೋರಿದ್ದಾರೆ.  -nus

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ
ನಟಿ ಅನುಷ್ಕಾ ಶೆಟ್ಟಿ.
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 25, 2021 | 7:17 PM

Share

ಅನುಷ್ಕಾ ಶೆಟ್ಟಿ ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟಿವ್​ ಆಗಿಲ್ಲ. ಇತ್ತೀಚೆಗೆ ಅವರ ನಟನೆಯ ಚಿತ್ರಗಳು ತೆರೆಗೆ ಬಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅವರು ಆ್ಯಕ್ಟಿವ್​ ಆಗಿರೋದು ತುಂಬಾನೇ ಅಪರೂಪ. ಈಗ ಅವರು ಅಭಿಮಾನಿಗಳ ಬಳಿ ನನ್ನನ್ನು ಫಾಲೋ ಮಾಡಿ ಎಂದು ಕೇಳಿದ್ದಾರೆ. ಅಷ್ಟಕ್ಕೂ ಅನುಷ್ಕಾ ಈ ರೀತಿಯ ಬೇಡಿಕೆ ಇಡೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವೆ ಸಣ್ಣ ತಿಕ್ಕಾಟ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮ ಒಪ್ಪಿಕೊಳ್ಳದಿದ್ದರೆ, ಭಾರತದಲ್ಲಿ ಟ್ವಿಟರ್​ ಬ್ಯಾನ್​ ಆಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಹೀಗಾಗಿ, ಭಾರತದ ಮೂಲಕ ಕೂ ಆ್ಯಪ್​​ ಬಗ್ಗೆ ಜನರು ಹೆಚ್ಚು ಒಲವು ತೋರಿದ್ದರು. ಈಗ ಅನುಷ್ಕಾ ಕೂಡ ಕೂ ಕುಟುಂಬ​ ಸೇರಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ತಮ್ಮನ್ನು ಫಾಲೋ ಮಾಡುವಂತೆ ಕೋರಿದ್ದಾರೆ.

‘ಎಲ್ಲರೂ ಸುರಕ್ಷಿತವಾಗಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಆಸಕ್ತಿಕರ ಮಾಹಿತಿಗೆ ನನ್ನನ್ನು ಕೂ ಆ್ಯಪ್​ನಲ್ಲಿ ಫಾಲೋ ಮಾಡಿ. ಧನ್ಯವಾದಗಳು’ ಎಂದು ಅನುಷ್ಕಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ​. ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಮುಂದಿನ ದಿನಗಳಲ್ಲಿ ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಸರ್ಕಾರದಿಂದ ಈ ಆ್ಯಪ್​ಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಅನುಷ್ಕಾ ಶೆಟ್ಟಿ, ‘ಮಿಸ್​. ಶೆಟ್ಟಿ ಮಿಸ್ಟರ್​ ಪೊಲಿಶೆಟ್ಟಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಸಿನಿಮಾ ಶೂಟಿಂಗ್​ ಆರಂಭವಾಗುವ ಸಾಧ್ಯತೆ ಇದೆ.  ಪಿ. ಮಹೇಶ್​ ಹೆಸರಿನ ಹೊಸ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ:ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ