AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಜನ್ಮದಿನ; ಆ ಒಂದು ಕಾರಣಕ್ಕೆ ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?

‘ಬಾಹುಬಲಿ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಸಂಬಂಧದ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಆ ಬಳಿಕ ಇವರು ಮದುವೆ ಆಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ, ಬ್ರೇಕಪ್​ನಲ್ಲಿ ಇವರ ಸಂಬಂಧ ಕೊನೆ ಆಯಿತು.

ಅನುಷ್ಕಾ ಜನ್ಮದಿನ; ಆ ಒಂದು ಕಾರಣಕ್ಕೆ ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?
ಅನುಷ್ಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 07, 2024 | 8:00 AM

Share

ನಟಿ ಅನುಷ್ಕಾ ಶೆಟ್ಟಿ ಈಗ 43ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಇಂದು (ನವೆಂಬರ್ 7) ಅವರ ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅನುಷ್ಕಾ ಶೆಟ್ಟಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವರ್ಷ ಕಳೆದಂತೆ ನಟನೆಯಿಂದ ದೂರ ಹೋಗುತ್ತಿದ್ದಾರೆ. ಅವರು ಈ ವರೆಗೆ ಮದುವೆ ಆಗಿಲ್ಲ. ಇನ್ನುಮುಂದೆ ಮದುವೆ ಆಗುತ್ತಾರೆ ಎನ್ನುವ ಯಾವುದೇ ಖಾತ್ರಿ ಇಲ್ಲ. ಅನುಷ್ಕಾ ಮದುವೆ ಆಗದೇ ಇರಲು ಆ ಒಂದು ಘಟನೆ ಕಾರಣ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಅನುಷ್ಕಾ ಶೆಟ್ಟಿ ಅವರು ಪ್ರಭಾಸ್ ಜೊತೆ ರಿಲೇಶನ್​ಶಿಪ್​ನಲ್ಲ ಇದ್ದರು ಎನ್ನಲಾಗಿದೆ. ಹಲವು ಸಿನಿಮಾಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ‘ಬಾಹುಬಲಿ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಇವರ ಸಂಬಂಧದ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಆ ಬಳಿಕ ಇವರು ಮದುವೆ ಆಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ, ಬ್ರೇಕಪ್​ನಲ್ಲಿ ಇವರ ಸಂಬಂಧ ಕೊನೆ ಆಯಿತು.

ಅನುಷ್ಕಾ ಶೆಟ್ಟಿ ಅವರು ಹಿರಿಯ ನಟನ ಜೊತೆ ಸಂಬಂಧ ಹೊಂದಿದ್ದರು ಎಂಬ ವದಂತಿ ಹಬ್ಬಿತ್ತು. ಈ ಕಾರಣದಿಂದಲೇ ಪ್ರಭಾಸ್ ಹಾಗೂ ಅನುಷ್ಕಾ ಬೇರೆ ಆದರು ಎನ್ನುವ ವದಂತಿ ಇದೆ. ಇದು ನಿಜ ಅಲ್ಲ ಎನ್ನುತ್ತವೆ ಕೆಲವು ವರದಿಗಳು. ಈ ರೀತಿಯ ವದಂತಿಗಳಿಂದ ಅನುಷ್ಕಾ ಸಾಕಷ್ಟು ಬೇಸರಗೊಂಡಿದ್ದು, ಮದುವೆ ಆಗದೇ ಇರುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.

ಅನುಷ್ಕಾ ಹಾಗೂ ಪ್ರಭಾಸ್ ಮದುವೆ ಆಗಲಿ ಎಂಬುದು ಅನೇಕರ ಕೋರಿಕೆ. ಈಗಲೂ ಸೋಶಿಯಲ್ ಮೀಡಿಯಾದಲ್ಲಿ ಈ ಜೋಡಿ ಹೆಸರಲ್ಲಿ ಹಲವು ಇನ್​ಸ್ಟಾಗ್ರಾಮ್ ಅಕೌಂಟ್​ಗಳು ಇವೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?

ಅನುಷ್ಕಾ ಶೆಟ್ಟಿ ಅವರು ಒಂದು ತೆಲುಗು ಹಾಗೂ ಒಂದು ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಬರ್ತ್​ಡೇ ಪ್ರಯುಕ್ತ ಆ ಬಗ್ಗೆ ಅಪ್​​ಡೇಟ್ ಸಿಗುತ್ತಿದೆ. ‘ಘಾಟಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕಟನಾರ್’ ಸಿನಿಮಾದಲ್ಲೂ ಅವರು ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ