AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ; ಇಲ್ಲಿದೆ ಉದಾಹರಣೆ

Anushka Shetty: ಇಂದು (ನವೆಂಬರ್ 7) ಅನುಷ್ಕಾ ಶೆಟ್ಟಿ ಅವರಿಗೆ ಜನ್ಮದಿನ. ಅನುಷ್ಕಾ ಶೆಟ್ಟಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ತೆಲುಗು ರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಉಳಿದ ಭಾಷೆಯವರಿಗೆ ಅವರ ಪರಿಚಯ ಇದೆ. ಅನುಷ್ಕಾ ಶೆಟ್ಟಿ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಅನುಷ್ಕಾ ಶೆಟ್ಟಿಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ; ಇಲ್ಲಿದೆ ಉದಾಹರಣೆ
Anushka Shetty
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 07, 2025 | 3:59 PM

Share

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ತೆಲುಗು ರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಉಳಿದ ಭಾಷೆಯವರಿಗೆ ಅವರ ಪರಿಚಯ ಇದೆ. ಇಂದು (ನವೆಂಬರ್ 7) ಅನುಷ್ಕಾ ಶೆಟ್ಟಿ ಅವರಿಗೆ ಜನ್ಮದಿನ. ಅನುಷ್ಕಾ ಶೆಟ್ಟಿ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಅನುಷ್ಕಾ ಶೆಟ್ಟಿ ಅವರು ಪ್ರಭಾಸ್ ಸೇರಿ ಹಲವು ಸೂಪರ್ ಸ್ಟಾರ್​ಗಳ ಜೊತೆ ನಟಿಸಿದ್ದಾರೆ. ಈಗ ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ ಈ ವರ್ಷ ರಿಲೀಸ್ ಆಯಿತು. ಆದರೆ, ಈ ಚಿತ್ರದ ಪ್ರಚಾರಕ್ಕೆ ಅವರು ತೆರಳಿಲ್ಲ. ಈ  ಸಿನಿಮಾ ಸೋಲಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಾ ಇದೆ.

ಮಂಗಳೂರು ಮೂಲದ ಅನುಷ್ಕಾ ಶೆಟ್ಟಿ ಓದಿದ್ದು ಬೆಂಗಳೂರಿನಲ್ಲಿ. ಅವರಿಗೆ ಕನ್ನಡ ಮಾತನಾಡಲು ಬರುತ್ತದೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಈ ಮೊದಲು ಅನುಷ್ಕಾ ಶೆಟ್ಟಿ ಅವರ ತಾಯಿಗೆ ಜನ್ಮದಿನದ ವಿಶ್ ತಿಳಿಸುವಾಗ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದರು ಅನ್ನೋದು ವಿಶೇಷ. ಇದು ಅವರ ಕನ್ನಡದ ಮೇಲಿನ ಪ್ರೀತಿಯನ್ನು ತೋರಿಸುತ್ತದೆ.

ಇದನ್ನೂ ಓದಿ:ಅನುಷ್ಕಾ ಶೆಟ್ಟಿ-ಪ್ರಭಾಸ್ ಕ್ಯೂಟ್ ವಿಡಿಯೋ ಇಲ್ಲಿದೆ ನೋಡಿ

ಅನುಷ್ಕಾ ಶೆಟ್ಟಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2005ರಲ್ಲಿ. ‘ಸೂಪರ್’ ಅವರ ನಟನೆಯ ಮೊದಲ ಸಿನಿಮಾ. ಅವರು ಟಾಲಿವುಡ್​ನಲ್ಲಿ ಭರ್ಜರಿ ಹೆಸರು ಮಾಡಿದರು. ಹಲವು ಸೂಪರ್ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಅನುಷ್ಕಾ ಚ್ಯೂಸಿ ಆಗಿದ್ದಾರೆ. ಅವರು ದೊಡ್ಡ ದೊಡ್ಡ ಗೆಲುವು ಕಂಡಿದ್ದಾರೆ. ಸಿನಿಮಾ ಹಿಟ್ ಆದರೆ, ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ಆದರೆ, ಇದಕ್ಕೆ ಇದಕ್ಕೆ ಅನುಷ್ಕಾ ಶೆಟ್ಟಿ ಅಪವಾದ ಎಂದರೂ ತಪ್ಪಾಗಲಿಕ್ಕಿಲ್ಲ. ‘ಬಾಹುಬಲಿ 2’ ಹಿಟ್ ಆದ ಬಳಿಕ ಅನುಷ್ಕಾ ನಟಿಸಿದ್ದು ಕೆಲವೇ ಸಿನಿಮಾಗಳಲ್ಲಿ ಮಾತ್ರ ಎಂದರೂ ತಪ್ಪಾಗಲಾರದು.

ಅನುಷ್ಕಾ ಶೆಟ್ಟಿ ಅವರ ನಟನೆಯ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಚಿತ್ರವನ್ನು ‘ಬಾಬಹುಬಲಿ: ದಿ ಎಪಿಕ್ ಆಗಿ ರಿಲೀಸ್ ಮಾಡಲಾಗಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿಲ್ಲ ಎಂಬ ಬೇಸರ ತಂಡದವರಿಗೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ