AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty: ನಟಿ ಅನುಷ್ಕಾ ಶೆಟ್ಟಿ ಹೀಗಾಗಿದ್ದೇಕೆ? ಫೋಟೋ ನೋಡಿ ಫ್ಯಾನ್ಸ್​ ಶಾಕ್​

ಅನುಷ್ಕಾ ಶೆಟ್ಟಿ ‘ಬಾಹುಬಲಿ’ ಸಿನಿಮಾದಲ್ಲಿ ದೇವಸೇನಾ ಆಗಿ ಕಾಣಿಸಿಕೊಂಡಿದ್ದರು. ಅದರಲ್ಲಿ ಅವರು ನಿಭಾಯಿಸಿದ ಎರಡು ಶೇಡ್​ನ ಪಾತ್ರ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು.

Anushka Shetty: ನಟಿ ಅನುಷ್ಕಾ ಶೆಟ್ಟಿ ಹೀಗಾಗಿದ್ದೇಕೆ? ಫೋಟೋ ನೋಡಿ ಫ್ಯಾನ್ಸ್​ ಶಾಕ್​
ಅನುಷ್ಕಾ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: May 13, 2021 | 5:16 PM

Share

ನಟಿ ಅನುಷ್ಕಾ ಶೆಟ್ಟಿ ಮದುವೆ ಆಗಲಿದ್ದಾರೆ ಎನ್ನುವ ವಿಚಾರ ಇತ್ತೀಚೆಗೆ ಹರಿದಾಡಿತ್ತು. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದರು. ಈ ವಿಚಾರ ಹರಿದಾಡುತ್ತಿರುವಾಗಲೇ ಅನುಷ್ಕಾ ಹೊಸ ಫೋಟೋ ಒಂದು ವೈರಲ್ ಆಗಿದ್ದು, ಅವರ ಲುಕ್ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

ಅನುಷ್ಕಾ ಶೆಟ್ಟಿ ‘ಬಾಹುಬಲಿ’ ಸಿನಿಮಾದಲ್ಲಿ ದೇವಸೇನಾ ಆಗಿ ಕಾಣಿಸಿಕೊಂಡಿದ್ದರು. ಆ ಚಿತ್ರದಲ್ಲಿ ಅವರ ಎರಡು ಶೇಡ್​ ಪಾತ್ರ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ‘ಬಾಹುಬಲಿ’ ತೆರೆಕಂಡ ನಂತರದಲ್ಲಿ ಅನುಷ್ಕಾ ‘ಭಾಗಮತಿ’, ‘ಸೈರಾ ನರಸಿಂಹ ರೆಡ್ಡಿ’, ‘ನಿಶಬ್ದಂ’ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಅವರು ಸಿನಿಮಾದಲ್ಲಾಗಲೀ, ಸಾರ್ವಜನಿಕವಾಗಿ ಆಗಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಈಗ ಅನುಷ್ಕಾ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಸಾಕಷ್ಟು ದಪ್ಪವಾಗಿ ಕಾಣಿಸಿಕೊಂಡಿದ್ದಾರೆ.

2015ರಲ್ಲಿ ತೆರೆಗೆ ಬಂದ ‘ಸೈಜ್ ಜೀರೋ’ ಚಿತ್ರಕ್ಕಾಗಿ ಅನುಷ್ಕಾ ಸಾಕಷ್ಟು ದಪ್ಪ ಆಗಿದ್ದರು. ನಂತರ ಅವರು ಸ್ವಲ್ಪ ತೂಕ ಇಳಿಸಿಕೊಂಡಿದ್ದರು. ಆದರೆ, ಈಗ ಹರಿದಾಡುತ್ತಿರುವ ಹೊಸ ಫೋಟೋದಲ್ಲಿ ಅನುಷ್ಕಾ ಶೆಟ್ಟಿ ಮತ್ತೆ ದಪ್ಪ ಆಗಿದ್ದಾರೆ. ಈಗ ಅನುಷ್ಕಾ ಮುಖದಲ್ಲಿ ಮೊದಲಿನಷ್ಟು ಚಾರ್ಮ್​ ಇಲ್ಲ. ಅವರ ಮುಖ ಸ್ವಲ್ಪ ಊದಿಕೊಂಡಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ. ಕೆಲವರು ಅನುಷ್ಕಾಗೆ ತೂಕ ಇಳಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಾಹುಬಲಿ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಒಟ್ಟಾಗಿ ನಟಿಸಿದ್ದರು. ಇವರ ಮಧ್ಯೆ ಪ್ರೀತಿ ಇದೆ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲ, ಇವರು ಮದುವೆ ಕೂಡ ಆಗಲಿದ್ದಾರೆ ಎನ್ನುವ ಮಟ್ಟಿಗೆ ಚರ್ಚೆಗಳು ನಡೆದಿದ್ದವು. ಆದರೆ, ಆ ರೀತಿಯ ಯಾವುದೇ ಬೆಳವಣಿಗೆ ನಡೆಯಲಿಲ್ಲ. ಕೆಲ ತಿಂಗಳ ಹಿಂದೆ ನಿರ್ದೇಶಕ ಪ್ರಕಾಶ್ ಕೊವೆಲಮುಡಿ ಜತೆಗೆ ಅನುಷ್ಕಾ ಶೆಟ್ಟಿ ಮದುವೆ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ದುಬೈ ಮೂಲದ ಉದ್ಯಮಿ ಜತೆ ಅನುಷ್ಕಾ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: Anushka Shetty Wedding: ಅನುಷ್ಕಾ ಶೆಟ್ಟಿಗೆ ಕಂಕಣ ಭಾಗ್ಯ? ಮದುವೆ ಆಗ್ತಿರೋ ಹುಡುಗ ಯಾರು?

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?