AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು

ಬಾಹುಬಲಿ ರೀತಿಯ ಸೂಪರ್​ ಹಿಟ್​ ಸಿನಿಮಾ ಕೊಟ್ಟ ಬಳಿಕವೂ ಅನುಷ್ಕಾ ಶೆಟ್ಟಿ ಸೋಲು ಕಾಣುವಂತಾಗಿದ್ದು ಬೇಸರದ ಸಂಗತಿ. ಈಗ ಅವರು ಬಹಳ ಎಚ್ಚರಿಕೆಯಿಂದ ಸಿನಿಮಾ ಆಯ್ಕೆ ಮಾಡಿಕೊಳ್ಳಬೇಕಿದೆ.

ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು
ಅನುಷ್ಕಾ ಶೆಟ್ಟಿ
TV9 Web
| Edited By: |

Updated on: Sep 19, 2021 | 3:14 PM

Share

ನಟಿ ಅನುಷ್ಕಾ ಶೆಟ್ಟಿ ಈಗೇಕೋ ಕೊಂಚ ಸೈಲೆಂಟ್​ ಆಗಿದ್ದಾರೆ ಇತ್ತೀಚೆಗೆ ಅವರು ಮಾಡುತ್ತಿರುವ ಸಿನಿಮಾಗಳು ಹೇಳಿಕೊಳ್ಳುವ ಮಟ್ಟಕ್ಕೆ ಹಿಟ್​ ಆಗುತ್ತಿಲ್ಲ. ಇದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಸಿನಿಪ್ರಿಯರಲ್ಲಿ ಕುತೂಹಲ ಇದೆ. ಈ ವೇಳೆಗೆ ಸರಿಯಾಗಿ ಕಾಲಿವುಡ್​ನಿಂದ ಒಂದು ಮಾಹಿತಿ ಕೇಳಿಬಂದಿದೆ. ರಾಘವ ಲಾರೆನ್ಸ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಅವರು ನಾಗವಲ್ಲಿ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿದೆ.

2006ರಲ್ಲಿ ತಮಿಳಿನಲ್ಲಿ ‘ಚಂದ್ರಮುಖಿ’ ಸಿನಿಮಾ ತೆರೆಕಂಡಿತ್ತು. ತೆಲುಗಿಗೂ ಡಬ್​ ಆಗಿ ಆ ಚಿತ್ರ ಬಿಡುಗಡೆ ಆಗಿತ್ತು. ಅದರ ಮುಂದುವರಿದ ಭಾಗ ಎಂಬಂತೆ ತೆಲುಗಿನಲ್ಲಿ ‘ನಾಗವಲ್ಲಿ’ ಚಿತ್ರ ನಿರ್ಮಾಣವಾದಾಗ ಅದರಲ್ಲಿ ನಾಗವಲ್ಲಿ ಪಾತ್ರ ಮಾಡುವ ಅವಕಾಶ ಅನುಷ್ಕಾ ಶೆಟ್ಟಿಗೆ ಒಲಿದಿತ್ತು. ಈಗ ತಮಿಳಿನಲ್ಲಿ ‘ಚಂದ್ರಮುಖಿ’ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದಕ್ಕೆ ರಾಘವ ಲಾರೆನ್ಸ್​ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿಯೂ ನಾಗವಲ್ಲಿ ಪಾತ್ರಕ್ಕೆ ಅನುಷ್ಕಾ ಅವರೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆಯಂತೆ.

ಈಗಾಗಲೇ ರಾಘವ ಲಾರೆನ್ಸ್​ ಮತ್ತು ಅನುಷ್ಕಾ ಶೆಟ್ಟಿ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಂತಿಮವಾಗಿ ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬ ಕೌತುಕ ಮೂಡಿದೆ. ‘ನಾಗವಲ್ಲಿ’, ‘ಅರುಂಧತಿ’ ರೀತಿಯ ಸೂಪರ್​ ನ್ಯಾಚುರಲ್​ ಕಥೆ ಇರುವ ಸಿನಿಮಾಗಳಲ್ಲಿ ಅನುಷ್ಕಾರನ್ನು ನೋಡಲು ಜನರು ಇಷ್ಟಪಡುತ್ತಾರೆ. ಆ ಕಾರಣಕ್ಕಾಗಿಯೇ ಅವರಿಗೆ ಈ ಆಫರ್​ ನೀಡಲಾಗಿದೆ ಎಂಬ ಮಾತು ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ.

ಅಂದಹಾಗೆ, ಅನುಷ್ಕಾ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳದೇ ಬಹಳ ದಿನಗಳೇ ಕಳೆದಿವೆ. 2018ರಲ್ಲಿ ಬಂದ ‘ಭಾಗವತಿ’ ಸಿನಿಮಾ ಚಿತ್ರಮಂದಿರದಲ್ಲಿ ತೆರೆಕಂಡಿತ್ತು. ಆ ಬಳಿಕ ಬಂದ ‘ನಿಶಬ್ದಂ’ ಕೇವಲ ಓಟಿಟಿಗೆ ಸೀಮಿತವಾಯಿತು. ಅಮೇಜಾನ್​ ಪ್ರೈಂನಲ್ಲಿ ತೆರೆಕಂಡ ಆ ಸಿನಿಮಾ ದೊಡ್ಡಮಟ್ಟಕ್ಕೆ ಸೌಂಡು ಮಾಡಲೇ ಇಲ್ಲ. ಬಾಹುಬಲಿ ರೀತಿಯ ಸೂಪರ್​ ಹಿಟ್​ ಸಿನಿಮಾ ಕೊಟ್ಟ ಬಳಿಕ ಅನುಷ್ಕಾ ಹೀಗೆ ಸೋಲು ಕಾಣುವಂತಾಗಿದ್ದು ಬೇಸರದ ಸಂಗತಿ. ಈಗ ಅವರು ಬಹಳ ಎಚ್ಚರಿಕೆಯಿಂದ ಸಿನಿಮಾ ಆಯ್ಕೆ ಮಾಡಿಕೊಳ್ಳಬೇಕಿದೆ.

ಇದನ್ನೂ ಓದಿ:

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​