ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು

ಬಾಹುಬಲಿ ರೀತಿಯ ಸೂಪರ್​ ಹಿಟ್​ ಸಿನಿಮಾ ಕೊಟ್ಟ ಬಳಿಕವೂ ಅನುಷ್ಕಾ ಶೆಟ್ಟಿ ಸೋಲು ಕಾಣುವಂತಾಗಿದ್ದು ಬೇಸರದ ಸಂಗತಿ. ಈಗ ಅವರು ಬಹಳ ಎಚ್ಚರಿಕೆಯಿಂದ ಸಿನಿಮಾ ಆಯ್ಕೆ ಮಾಡಿಕೊಳ್ಳಬೇಕಿದೆ.

ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು
ಅನುಷ್ಕಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: Sep 19, 2021 | 3:14 PM

ನಟಿ ಅನುಷ್ಕಾ ಶೆಟ್ಟಿ ಈಗೇಕೋ ಕೊಂಚ ಸೈಲೆಂಟ್​ ಆಗಿದ್ದಾರೆ ಇತ್ತೀಚೆಗೆ ಅವರು ಮಾಡುತ್ತಿರುವ ಸಿನಿಮಾಗಳು ಹೇಳಿಕೊಳ್ಳುವ ಮಟ್ಟಕ್ಕೆ ಹಿಟ್​ ಆಗುತ್ತಿಲ್ಲ. ಇದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಸಿನಿಪ್ರಿಯರಲ್ಲಿ ಕುತೂಹಲ ಇದೆ. ಈ ವೇಳೆಗೆ ಸರಿಯಾಗಿ ಕಾಲಿವುಡ್​ನಿಂದ ಒಂದು ಮಾಹಿತಿ ಕೇಳಿಬಂದಿದೆ. ರಾಘವ ಲಾರೆನ್ಸ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಅವರು ನಾಗವಲ್ಲಿ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿದೆ.

2006ರಲ್ಲಿ ತಮಿಳಿನಲ್ಲಿ ‘ಚಂದ್ರಮುಖಿ’ ಸಿನಿಮಾ ತೆರೆಕಂಡಿತ್ತು. ತೆಲುಗಿಗೂ ಡಬ್​ ಆಗಿ ಆ ಚಿತ್ರ ಬಿಡುಗಡೆ ಆಗಿತ್ತು. ಅದರ ಮುಂದುವರಿದ ಭಾಗ ಎಂಬಂತೆ ತೆಲುಗಿನಲ್ಲಿ ‘ನಾಗವಲ್ಲಿ’ ಚಿತ್ರ ನಿರ್ಮಾಣವಾದಾಗ ಅದರಲ್ಲಿ ನಾಗವಲ್ಲಿ ಪಾತ್ರ ಮಾಡುವ ಅವಕಾಶ ಅನುಷ್ಕಾ ಶೆಟ್ಟಿಗೆ ಒಲಿದಿತ್ತು. ಈಗ ತಮಿಳಿನಲ್ಲಿ ‘ಚಂದ್ರಮುಖಿ’ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದಕ್ಕೆ ರಾಘವ ಲಾರೆನ್ಸ್​ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿಯೂ ನಾಗವಲ್ಲಿ ಪಾತ್ರಕ್ಕೆ ಅನುಷ್ಕಾ ಅವರೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆಯಂತೆ.

ಈಗಾಗಲೇ ರಾಘವ ಲಾರೆನ್ಸ್​ ಮತ್ತು ಅನುಷ್ಕಾ ಶೆಟ್ಟಿ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಂತಿಮವಾಗಿ ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬ ಕೌತುಕ ಮೂಡಿದೆ. ‘ನಾಗವಲ್ಲಿ’, ‘ಅರುಂಧತಿ’ ರೀತಿಯ ಸೂಪರ್​ ನ್ಯಾಚುರಲ್​ ಕಥೆ ಇರುವ ಸಿನಿಮಾಗಳಲ್ಲಿ ಅನುಷ್ಕಾರನ್ನು ನೋಡಲು ಜನರು ಇಷ್ಟಪಡುತ್ತಾರೆ. ಆ ಕಾರಣಕ್ಕಾಗಿಯೇ ಅವರಿಗೆ ಈ ಆಫರ್​ ನೀಡಲಾಗಿದೆ ಎಂಬ ಮಾತು ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ.

ಅಂದಹಾಗೆ, ಅನುಷ್ಕಾ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳದೇ ಬಹಳ ದಿನಗಳೇ ಕಳೆದಿವೆ. 2018ರಲ್ಲಿ ಬಂದ ‘ಭಾಗವತಿ’ ಸಿನಿಮಾ ಚಿತ್ರಮಂದಿರದಲ್ಲಿ ತೆರೆಕಂಡಿತ್ತು. ಆ ಬಳಿಕ ಬಂದ ‘ನಿಶಬ್ದಂ’ ಕೇವಲ ಓಟಿಟಿಗೆ ಸೀಮಿತವಾಯಿತು. ಅಮೇಜಾನ್​ ಪ್ರೈಂನಲ್ಲಿ ತೆರೆಕಂಡ ಆ ಸಿನಿಮಾ ದೊಡ್ಡಮಟ್ಟಕ್ಕೆ ಸೌಂಡು ಮಾಡಲೇ ಇಲ್ಲ. ಬಾಹುಬಲಿ ರೀತಿಯ ಸೂಪರ್​ ಹಿಟ್​ ಸಿನಿಮಾ ಕೊಟ್ಟ ಬಳಿಕ ಅನುಷ್ಕಾ ಹೀಗೆ ಸೋಲು ಕಾಣುವಂತಾಗಿದ್ದು ಬೇಸರದ ಸಂಗತಿ. ಈಗ ಅವರು ಬಹಳ ಎಚ್ಚರಿಕೆಯಿಂದ ಸಿನಿಮಾ ಆಯ್ಕೆ ಮಾಡಿಕೊಳ್ಳಬೇಕಿದೆ.

ಇದನ್ನೂ ಓದಿ:

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ