ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು

ಬಾಹುಬಲಿ ರೀತಿಯ ಸೂಪರ್​ ಹಿಟ್​ ಸಿನಿಮಾ ಕೊಟ್ಟ ಬಳಿಕವೂ ಅನುಷ್ಕಾ ಶೆಟ್ಟಿ ಸೋಲು ಕಾಣುವಂತಾಗಿದ್ದು ಬೇಸರದ ಸಂಗತಿ. ಈಗ ಅವರು ಬಹಳ ಎಚ್ಚರಿಕೆಯಿಂದ ಸಿನಿಮಾ ಆಯ್ಕೆ ಮಾಡಿಕೊಳ್ಳಬೇಕಿದೆ.

ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು
ಅನುಷ್ಕಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: Sep 19, 2021 | 3:14 PM

ನಟಿ ಅನುಷ್ಕಾ ಶೆಟ್ಟಿ ಈಗೇಕೋ ಕೊಂಚ ಸೈಲೆಂಟ್​ ಆಗಿದ್ದಾರೆ ಇತ್ತೀಚೆಗೆ ಅವರು ಮಾಡುತ್ತಿರುವ ಸಿನಿಮಾಗಳು ಹೇಳಿಕೊಳ್ಳುವ ಮಟ್ಟಕ್ಕೆ ಹಿಟ್​ ಆಗುತ್ತಿಲ್ಲ. ಇದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಸಿನಿಪ್ರಿಯರಲ್ಲಿ ಕುತೂಹಲ ಇದೆ. ಈ ವೇಳೆಗೆ ಸರಿಯಾಗಿ ಕಾಲಿವುಡ್​ನಿಂದ ಒಂದು ಮಾಹಿತಿ ಕೇಳಿಬಂದಿದೆ. ರಾಘವ ಲಾರೆನ್ಸ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಅವರು ನಾಗವಲ್ಲಿ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿದೆ.

2006ರಲ್ಲಿ ತಮಿಳಿನಲ್ಲಿ ‘ಚಂದ್ರಮುಖಿ’ ಸಿನಿಮಾ ತೆರೆಕಂಡಿತ್ತು. ತೆಲುಗಿಗೂ ಡಬ್​ ಆಗಿ ಆ ಚಿತ್ರ ಬಿಡುಗಡೆ ಆಗಿತ್ತು. ಅದರ ಮುಂದುವರಿದ ಭಾಗ ಎಂಬಂತೆ ತೆಲುಗಿನಲ್ಲಿ ‘ನಾಗವಲ್ಲಿ’ ಚಿತ್ರ ನಿರ್ಮಾಣವಾದಾಗ ಅದರಲ್ಲಿ ನಾಗವಲ್ಲಿ ಪಾತ್ರ ಮಾಡುವ ಅವಕಾಶ ಅನುಷ್ಕಾ ಶೆಟ್ಟಿಗೆ ಒಲಿದಿತ್ತು. ಈಗ ತಮಿಳಿನಲ್ಲಿ ‘ಚಂದ್ರಮುಖಿ’ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದಕ್ಕೆ ರಾಘವ ಲಾರೆನ್ಸ್​ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿಯೂ ನಾಗವಲ್ಲಿ ಪಾತ್ರಕ್ಕೆ ಅನುಷ್ಕಾ ಅವರೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆಯಂತೆ.

ಈಗಾಗಲೇ ರಾಘವ ಲಾರೆನ್ಸ್​ ಮತ್ತು ಅನುಷ್ಕಾ ಶೆಟ್ಟಿ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಂತಿಮವಾಗಿ ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬ ಕೌತುಕ ಮೂಡಿದೆ. ‘ನಾಗವಲ್ಲಿ’, ‘ಅರುಂಧತಿ’ ರೀತಿಯ ಸೂಪರ್​ ನ್ಯಾಚುರಲ್​ ಕಥೆ ಇರುವ ಸಿನಿಮಾಗಳಲ್ಲಿ ಅನುಷ್ಕಾರನ್ನು ನೋಡಲು ಜನರು ಇಷ್ಟಪಡುತ್ತಾರೆ. ಆ ಕಾರಣಕ್ಕಾಗಿಯೇ ಅವರಿಗೆ ಈ ಆಫರ್​ ನೀಡಲಾಗಿದೆ ಎಂಬ ಮಾತು ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ.

ಅಂದಹಾಗೆ, ಅನುಷ್ಕಾ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳದೇ ಬಹಳ ದಿನಗಳೇ ಕಳೆದಿವೆ. 2018ರಲ್ಲಿ ಬಂದ ‘ಭಾಗವತಿ’ ಸಿನಿಮಾ ಚಿತ್ರಮಂದಿರದಲ್ಲಿ ತೆರೆಕಂಡಿತ್ತು. ಆ ಬಳಿಕ ಬಂದ ‘ನಿಶಬ್ದಂ’ ಕೇವಲ ಓಟಿಟಿಗೆ ಸೀಮಿತವಾಯಿತು. ಅಮೇಜಾನ್​ ಪ್ರೈಂನಲ್ಲಿ ತೆರೆಕಂಡ ಆ ಸಿನಿಮಾ ದೊಡ್ಡಮಟ್ಟಕ್ಕೆ ಸೌಂಡು ಮಾಡಲೇ ಇಲ್ಲ. ಬಾಹುಬಲಿ ರೀತಿಯ ಸೂಪರ್​ ಹಿಟ್​ ಸಿನಿಮಾ ಕೊಟ್ಟ ಬಳಿಕ ಅನುಷ್ಕಾ ಹೀಗೆ ಸೋಲು ಕಾಣುವಂತಾಗಿದ್ದು ಬೇಸರದ ಸಂಗತಿ. ಈಗ ಅವರು ಬಹಳ ಎಚ್ಚರಿಕೆಯಿಂದ ಸಿನಿಮಾ ಆಯ್ಕೆ ಮಾಡಿಕೊಳ್ಳಬೇಕಿದೆ.

ಇದನ್ನೂ ಓದಿ:

‘ಫಾಲೋ ಮಿ’; ಅಭಿಮಾನಿಗಳ ಬಳಿ ಅನುಷ್ಕಾ ಶೆಟ್ಟಿ ಮಾಡಿದ್ರು ವಿಶೇಷ ಮನವಿ

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ