AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty Wedding: ಅನುಷ್ಕಾ ಶೆಟ್ಟಿಗೆ ಕಂಕಣ ಭಾಗ್ಯ? ಮದುವೆ ಆಗ್ತಿರೋ ಹುಡುಗ ಯಾರು?

 ಕೆಲ ತಿಂಗಳ ಹಿಂದೆ ನಿರ್ದೇಶಕ ಪ್ರಕಾಶ್​ ಕೊವೆಲಮುಡಿ ಜತೆಗೆ ಅನುಷ್ಕಾ ಶೆಟ್ಟಿ ಮದುವೆ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಕೂಡ ಆಗಿತ್ತು. ನಂತರ ಅನುಷ್ಕಾ ಶೆಟ್ಟಿ ಇದನ್ನು ಅಲ್ಲಗಳೆದಿದ್ದರು.

Anushka Shetty Wedding: ಅನುಷ್ಕಾ ಶೆಟ್ಟಿಗೆ ಕಂಕಣ ಭಾಗ್ಯ? ಮದುವೆ ಆಗ್ತಿರೋ ಹುಡುಗ ಯಾರು?
ನಟಿ ಅನುಷ್ಕಾ ಶೆಟ್ಟಿ.
ರಾಜೇಶ್ ದುಗ್ಗುಮನೆ
|

Updated on:May 05, 2021 | 4:43 PM

Share

 ‘ಅನುಷ್ಕಾ ಶೆಟ್ಟಿ ಮದುವೆ ಆಗಲಿದ್ದಾರೆ’- ಹೀಗೊಂದು ವಿಚಾರ ಚರ್ಚೆ ಆಗಲು ಆರಂಭಿಸಿ ಅನೇಕ ವರ್ಷಗಳೇ ಕಳೆದಿವೆ. ಆದರೆ, ಈವರೆಗೆ ಅವರ ಕಡೆಯಿಂದ ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈಗ ಈ ವಿಚಾರದ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡಿದೆ. ಅವರು ದುಬೈ ಮೂಲದ ಉದ್ಯಮಿಯನ್ನು ವಿವಾಹವಾಗಲಿದ್ದಾರಂತೆ. ಹೀಗೊಂದು ವದಂತಿ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ.

ಬಾಹುಬಲಿ ಸಿನಿಮಾದಲ್ಲಿ ಪ್ರಭಾಸ್​ ಹಾಗೂ ಅನುಷ್ಕಾ ಒಟ್ಟಾಗಿ ನಟಿಸಿದ್ದರು. ಇವರ ಮಧ್ಯೆ ಪ್ರೀತಿ ಇದೆ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲ, ಇವರು ಮದುವೆ ಕೂಡ ಆಗಲಿದ್ದಾರೆ ಎನ್ನುವ ಮಟ್ಟಿಗೆ ಚರ್ಚೆಗಳು ನಡೆದಿದ್ದವು. ಆದರೆ, ಆ ರೀತಿಯ ಯಾವುದೇ ಬೆಳವಣಿಗೆ ನಡೆಯಲಿಲ್ಲ. ನಾವಿಬ್ಬರು ಉತ್ತಮ ಗೆಳೆಯರು ಅಷ್ಟೇ ಎಂದು ಹೇಳುವ ಮೂಲಕ ಅನುಷ್ಕಾ ಎಲ್ಲಾ ಚರ್ಚೆಗೆ ತೆರೆ ಎಳೆದಿದ್ದರು.

 ಕೆಲ ತಿಂಗಳ ಹಿಂದೆ ನಿರ್ದೇಶಕ ಪ್ರಕಾಶ್​ ಕೊವೆಲಮುಡಿ ಜತೆಗೆ ಅನುಷ್ಕಾ ಶೆಟ್ಟಿ ಮದುವೆ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಕೂಡ ಆಗಿತ್ತು. ನಂತರ ಅನುಷ್ಕಾ ಶೆಟ್ಟಿ ಇದನ್ನು ಅಲ್ಲಗಳೆದಿದ್ದರು.

ಈಗ ಅನುಷ್ಕಾ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಉದ್ಯಮಿ ಜತೆ ಅನುಷ್ಕಾ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅಚ್ಚರಿ ಎಂದರೆ, ಮದುವೆ ಆಗುತ್ತಿರುವ ಹುಡುಗ ಅನುಷ್ಕಾಗಿಂತ ಚಿಕ್ಕವರಂತೆ. ಮದುವೆ ಆದ ನಂತರದಲ್ಲಿ ದುಬೈನಲ್ಲಿಯೇ ಅವರು ಸೆಟಲ್​​ ಆಗಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಆದರೆ, ಈ ಬಗ್ಗೆ ಅನುಷ್ಕಾ ಶೆಟ್ಟಿ ಅವರ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಅನುಷ್ಕಾ ಶೆಟ್ಟಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದು ನಿಶಬ್ದಂ ಸಿನಿಮಾದಲ್ಲಿ. ಈ ಚಿತ್ರದಲ್ಲಿ ಅನುಷ್ಕಾ ಮೂಕಿಯಾಗಿ ಕಾಣಿಸಿಕೊಂಡಿದ್ದರು. ಆರ್​. ಮಾಧವನ್​ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಕಳೆದ ವರ್ಷ ಅಮೇಜಾನ್​ ಪ್ರೈಂನಲ್ಲಿ ಈ ಚಿತ್ರ ರಿಲೀಸ್​ ಆಗಿತ್ತು. ನವೀನ್​ ಪೊಲಿಶೆಟ್ಟಿ ಜತೆ ಬೇರೊಂದು ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Anushka Sharma: ಕೊವಿಡ್​ ಸಂಕಷ್ಟದಲ್ಲಿ ಕೊಯ್ಲಿ-ಅನುಷ್ಕಾ ಕೈಕಟ್ಟಿ ಕೂತಿದ್ದಾರಾ? ಕಡೆಗೂ ಬಾಯ್ಬಿಟ್ಟ ನಟಿ

Published On - 4:28 pm, Wed, 5 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!