AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಮದುವೆಯಲ್ಲಿ ಅಪ್ಪು; ಈ ಉಡುಗೊರೆಗೆ ಬೆಲೆ ಕಟ್ಟೋಕೆ ಆಗುತ್ತಾ?

ಅನುಶ್ರೀ ಅವರು ತಮ್ಮ ಮದುವೆಯಲ್ಲಿ ಅಪ್ಪುಗೆ ಅಪಾರ ಪ್ರೀತಿ ಮತ್ತು ಗೌರವ ಸಲ್ಲಿಸಿದ್ದಾರೆ. ಅಪ್ಪು ಫೋಟೋದೊಂದಿಗೆ ಮಾಡಿದ ಭಾವುಕ ಉಡುಗೊರೆ ವೈರಲ್ ಆಗಿದೆ. ಶಿವರಾಜ್ ಕುಮಾರ್, ಅರ್ಜುನ್ ಜನ್ಯ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮದುವೆಗೆ ಆಗಮಿಸಿ ಆಶೀರ್ವದಿಸಿದ್ದಾರೆ. ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನುಶ್ರೀ ಮದುವೆಯಲ್ಲಿ ಅಪ್ಪು; ಈ ಉಡುಗೊರೆಗೆ ಬೆಲೆ ಕಟ್ಟೋಕೆ ಆಗುತ್ತಾ?
ಅನುಶ್ರೀ
ರಾಜೇಶ್ ದುಗ್ಗುಮನೆ
|

Updated on:Aug 30, 2025 | 8:59 AM

Share

ಆ್ಯಂಕರ್ ಅನುಶ್ರೀ (Anushree) ಅವರ ವಿವಾಹ ಇತ್ತೀಚೆಗೆ ನೆರವೇರಿದೆ. ಐಟಿ ಉದ್ಯೋಗಿ ರೋಷನ್ ಅವರ ಜೊತೆ ಅನುಶ್ರೀ ಅವರು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇಬ್ಬರೂ ಅಪ್ಪು ಅಭಿಮಾನಿಗಳು. ಪುನೀತ್ ರಾಜ್​ಕುಮಾರ್ ಮೇಲೆ ಇವರಿಗೆ ವಿಶೇಷ ಪ್ರೀತಿ ಇದೆ. ಈಗ ಇವರಿಗೆ ಬೆಲೆ ಕಟ್ಟಲಾಗದ ಉಡುಗೊರೆ ಒಂದು ಸಿಕ್ಕಿದೆ. ಇದನ್ನು ನೋಡಿ ಅನುಶ್ರೀ ಅವರು ಭಾವುಕರಾಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

ಅನುಶ್ರೀ ಅವರು ಆಗಸ್ಟ್ 28ರಂದು ಬೆಂಗಳೂರಿನ ಹೊರ ವಲಯದಲ್ಲಿರೋ ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ನಡೆದಿದೆ. ಆಪ್ತರು ಹಾಗೂ ಗೆಳೆಯರು ಮಾತ್ರ ವಿವಾಹದಲ್ಲಿ ಭಾಗಿ ಆಗಿದ್ದರು. ಅನುಶ್ರೀ ಹಾಗೂ ರೋಷನ್ ಇಬ್ಬರೂ ಅಪ್ಪು ಅಭಿಮಾನಿಗಳಾಗಿರುವುದರಿಂದ ಅಲ್ಲಿ ಪುನೀತ್ ಫೋಟೋ ಇಟ್ಟು ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಇದು ಇವರ ಅಭಿಮಾನಕ್ಕೆ ಸಾಕ್ಷಿ ಆಗಿತ್ತು.

ಇದನ್ನೂ ಓದಿ
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್
Image
ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?
Image
ಧೂಳೆಬ್ಬಿಸಿದ ರಾಜ್ ಹಂಚಿಕೆ ಮಾಡ್ತಿರೋ ‘ಲೋಕಃ’ ಸಿನಿಮಾ; 9.5 ರೇಟಿಂಗ್
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಅನುಶ್ರೀಗೆ ಸಿಕ್ಕ ಗಿಫ್ಟ್

ಈಗ ಅನುಶ್ರೀ ಅವರು ಭಾವುಕರಾಗುವಂತಹ ಘಟನೆ ಒಂದು ನಡೆದಿದೆ. ಅನುಶ್ರೀ ಹಾಗೂ ರೋಷನ್ ಮಧ್ಯದಲ್ಲಿ ಅಪ್ಪು ಇರುವ ರೀತಿಯಲ್ಲಿ ಫೋಟೋನ ಎಡಿಟ್ ಮಾಡಲಾಗಿದೆ. ಇದನ್ನು ಅನುಶ್ರೀ ಅವರಿಗೆ ನೀಡಲಾಗಿದೆ. ಫೋಟೋ ನೋಡಿದ ಬಳಿಕ ಅನುಶ್ರೀ ಅವರಿಗೆ ಖುಷಿ ಆಗಿದೆ. ಅಲ್ಲದೆ, ಅವರು ಭಾವುಕ ಕೂಡ ಆದರು. ಅಪ್ಪು ಯೂತ್ ಬ್ರಿಗೇಡ್ ಈ ಗಿಫ್ಟ್​ನ ಕೊಟ್ಟಿದೆ.

ಇದನ್ನೂ ಓದಿ:  ‘ಅಪ್ಪು ನಮ್ಮನ್ನು ಸೇರಿಸಿದ್ರು’; ವಿವಾಹದ ಬಳಿಕ ಮೊದಲ ರಿಯಾಕ್ಷನ್ ಕೊಟ್ಟ ಅನುಶ್ರೀ

ಅನುಶ್ರೀ ಅವರ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ಶಿವರಾಜ್​ಕುಮಾರ್, ಅರ್ಜುನ್ ಜನ್ಯ, ವಿಜಯ್ ರಾಘವೇಂದ್ರ, ವಿಜಯ್ ಪ್ರಕಾಶ್, ಡಾಲಿ ಧನಂಜಯ್ ಸೇರಿದಂತೆ ಅನೇಕರು ವಿವಾಹಕ್ಕೆ ಆಗಮಿಸಿ ದಂಪತಿಗೆ ಹಾರೈಸಿದ್ದಾರೆ. ಮದುವೆಯ ವಿಡಿಯೋಗಳನ್ನು ಅನುಶ್ರೀ ಅವರು ಹಂಚಿಕೊಳ್ಳುತ್ತಿದ್ದಾರೆ. ಅನುಶ್ರೀ ಅವರು ಮದುವೆ ಬಳಿಕವೂ ತಮ್ಮ ಕೆಲಸವನ್ನು ಮುಂದುವರಿಸಲಿದ್ದಾರೆ. ವಿವಿಧ ಕಾರ್ಯಕ್ರಮಗಳು ಹಾಗೂ ಶೋಗಳನ್ನು ಅವರು ಹೋಸ್ಟ್ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Sat, 30 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ