AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ವರ್ಷದ ಬಳಿಕ ಒಂದಾಗುತ್ತಿರುವ ‘ಮುಕ್ಕಾಲ ಮುಕ್ಕಾಬುಲಾ’ ಜೋಡಿ

AR Rahman-Prabhu Deva: ನಟ ಪ್ರಭುದೇವ ಹಾಗೂ ಎಆರ್ ರೆಹಮಾನ್ ಜೋಡಿ ಬರೋಬ್ಬರಿ 25 ವರ್ಷಗಳ ಬಳಿಕ ವಿಶಿಷ್ಟವಾದ ಸಿನಿಮಾ ಒಂದಕ್ಕಾಗಿ ಒಂದಾಗುತ್ತಿದ್ದಾರೆ.

25 ವರ್ಷದ ಬಳಿಕ ಒಂದಾಗುತ್ತಿರುವ ‘ಮುಕ್ಕಾಲ ಮುಕ್ಕಾಬುಲಾ’ ಜೋಡಿ
ಮಂಜುನಾಥ ಸಿ.
|

Updated on: Mar 26, 2024 | 4:30 PM

Share

‘ಮುಕ್ಕಾಲ ಮುಕಾಬುಲಾ’ ಹಾಡು ಯಾರಿಗೆ ನೆನಪಿಲ್ಲ. ಪ್ರಭುದೇವ (Prabhu Deva) ಅವರ ಡ್ಯಾನ್ಸ್, ಎಆರ್ ರೆಹಮಾನ್ ಅವರ ಸಂಗೀತ ಸಿನಿಮಾ ಪ್ರಿಯರಿಗೆ ಹುಚ್ಚೆಬ್ಬಿಸಿತ್ತು. ‘ಕಾದಲನ್’ ಸಿನಿಮಾದ ಈ ಹಾಡು ಇಂಟರ್ನೆಟ್ ಇಲ್ಲದ ಕಾಲದಲ್ಲಿಯೂ ಸಖತ್ ವೈರಲ್ ಆಗಿತ್ತು. ಹಾಡಿಗೆ ಪ್ರಭುದೇವ ಕುಣಿದಿದ್ದ ರೀತಿ, ಅವರಿಗೆ ಭಾರತದ ಮೈಕಲ್ ಜಾಕ್ಸನ್ ಎಂಬ ಬಿರುದು ತಂದುಕೊಟ್ಟಿತ್ತು. ‘ಕಾದಲನ್’ ಸಿನಿಮಾದ ಬಳಿಕ ಎಆರ್ ರೆಹಮಾನ್ ಹಾಗೂ ಪ್ರಭುದೇವ ಕೆಲ ಸಿನಿಮಾಗಳಿಗೆ ಒಟ್ಟಿಗೆ ಕೆಲಸ ಮಾಡಿದರಾದರೂ ಪ್ರಭುದೇವಗಾಗಿ ರೆಹಮಾನ್ ಸಂಗೀತ ನೀಡಿ 25 ವರ್ಷಗಳಾಗಿವೆ. ಇದೀಗ ಈ ಜೋಡಿ ಮತ್ತೆ ಒಂದಾಗಿದೆ.

ಇನ್ನೂ ಹೆಸರಿಡ ಸಿನಿಮಾ ಒಂದಕ್ಕಾಗಿ ಪ್ರಭುದೇವ ಹಾಗೂ ಎಆರ್ ರೆಹಮಾನ್ ಒಂದಾಗಿದ್ದಾರೆ. ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಪೋಸ್ಟರ್​ನಲ್ಲಿ ಪ್ರಭುದೇವಾ ಅವರ ‘ಮುಕ್ಕಾಲ ಮುಕಾಬುಲಾ’ ಹಾಡಿನ ಡ್ಯಾನ್ಸ್ ಸ್ಟೆಪ್​ನ ಚಿತ್ರವನ್ನು ಬಳಸಿಕೊಳ್ಳಲಾಗಿದೆ. ಜೊತೆಗೆ ಪೋಸ್ಟರ್​ನಲ್ಲಿ ಎಆರ್ ರೆಹಮಾನ್​ರ ಚಿತ್ರವೂ ಇದೆ.

ಬಿಹೈಂಡ್ ವೂಡ್ಸ್ ಸಂಸ್ಥೆಯ ಮಾಲೀಕ ಮೊದಲ ಬಾರಿಗೆ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದು, ಎಆರ್ ರೆಹಮಾನ್ ಹಾಗೂ ಪ್ರಭುದೇವ ಅವರನ್ನು 25 ವರ್ಷಗಳ ಬಳಿಕ ಒಟ್ಟಿಗೆ ಜೊತೆಗೆ ತಂದಿದ್ದಾರೆ. ಸಿನಿಮಾದಲ್ಲಿ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಸಿನಿಮಾವನ್ನು ಬಿಹೈಂಡ್ ವೂಡ್ಸ್ ಸಿಇಓ ಮನೋಜ್ ಎನ್​ಎಸ್ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ:ಮಾಳು ನಿಪನಾಳ ಹಾಡಿದ ಗೀತೆಗೆ ಪ್ರಭುದೇವ ಡ್ಯಾನ್ಸ್​; ಮಿಲಿಯನ್​ ವೀವ್ಸ್​

ಪ್ರಭುದೇವ ಹಾಗೂ ಎಆರ್ ರೆಹಮಾನ್ ಒಟ್ಟಿಗೆ ಕೆಲಸ ಮಾಡುತ್ತಿರುವ ಆರನೇ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಯಾವುದೇ ಹಿಂಸೆ, ಗೋಳು ಇರುವುದಿಲ್ಲ ಬದಲಿಗೆ ಎರಡೂವರೆ ಗಂಟೆಗಳ ಕಾಲ ಚಿತ್ರಮಂದಿರವನ್ನು ಅತ್ಯಂತ ಸಂತೋಷದ ಸ್ಥಳವನ್ನಾಗಿ ಮಾರ್ಪಾಟು ಮಾಡಲು ನಾವು ಬಯಸಿದ್ದು, ಸಿನಿಮಾದಲ್ಲಿ ಸಂಗೀತ ಹಾಗೂ ನೃತ್ಯದ ಅದ್ಭುತ ಜುಗಲ್​ಬಂಧಿಯನ್ನು ಉಣಬಡಿಸಲಿದ್ದೇವೆ. ಜೊತೆಗೆ ಹಾಸ್ಯವೂ ಸಹ ಭರಪೂರವಾಗಿ ಇರಲಿದೆ ಎಂದಿದ್ದಾರೆ ನಿರ್ದೇಶಕ ಮನೋಜ್.

ಸಿನಿಮಾ ಬಗ್ಗೆ ಮಾತನಾಡಿರುವ ಎಆರ್ ರೆಹಮಾನ್, ‘ನಾನು ಹಲವು ವರ್ಷಗಳ ಹಿಂದೆ ಹೀಗೊಂದು ಯೋಚನೆ ಮಾಡಿದ್ದೆ. ಕೇವಲ ಸಂಗೀತ, ನೃತ್ಯ, ಹಾಸ್ಯ ಈ ಮೂರನ್ನೇ ಇಟ್ಟುಕೊಂಡು ಸಿನಿಮಾ ಮಾಡುವ ಆಲೋಚನೆಯೊಂದು ಹೊಳೆದಿತ್ತು. ಆದರೆ ಕಾಲಾನಂತರದಲ್ಲಿ ಆ ಯೋಚನೆಯನ್ನು ಬದಿಗೆ ಸರಿಸಿದ್ದೆ. ಈಗ ಈ ಪ್ರಾಜೆಕ್ಟ್ ಮೂಲಕ ಆ ಯೋಚನೆಯನ್ನು ಮತ್ತೆ ತೆರೆಗೆ ತರುವಂತಾಗುತ್ತಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು