AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರತ್ತ ಬೆರಳು ತೋರಿಸಲೂ ಇಷ್ಟವಿಲ್ಲ’; ಸಂಗೀತ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಮೌನ ಮುರಿದ ಎಆರ್​ ರೆಹಮಾನ್

‘ಜನರು ಸುನಾಮಿ ರೀತಿ ಬಂದಿದ್ದರು. ಅವರು ನೀಡಿದ ಪ್ರೀತಿಯನ್ನು ನಿರ್ವಹಿಸಲು ನಮ್ಮ ಬಳಿ ಸಾಧ್ಯವಾಗಿಲ್ಲ. ಓರ್ವ ಕಂಪೋಸರ್ ಆಗಿ ಒಂದೊಳ್ಳೆ ಶೋ ಕೊಡೋದು ಮಾತ್ರ ನನ್ನ ಕೆಲಸ. ಉಳಿದ ವಿಚಾರಗಳನ್ನು ಆಯೋಜಕರು ನಿರ್ವಹಿಸಬಹುದು ಎಂದು ನಾನು ಭಾವಿಸಿದ್ದೆ. ಮಳೆ ಬರಬಾರದು ಎಂದು ನಾನು ಬೇಡಿಕೊಂಡಿದ್ದೆ. ಹೊರಗೆ ಏನಾಗುತ್ತಿತ್ತು ಅನ್ನೋದು ಗೊತ್ತಿರಲಿಲ್ಲ’ ಎಂದಿದ್ದಾರೆ ರೆಹಮಾನ್.

‘ಯಾರತ್ತ ಬೆರಳು ತೋರಿಸಲೂ ಇಷ್ಟವಿಲ್ಲ’; ಸಂಗೀತ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಮೌನ ಮುರಿದ ಎಆರ್​ ರೆಹಮಾನ್
ಎಆರ್​ ರೆಹಮಾನ್
Follow us
ರಾಜೇಶ್ ದುಗ್ಗುಮನೆ
|

Updated on: Sep 12, 2023 | 7:08 AM

ಚೆನ್ನೈನ ಪಣಿಯೂರ್ ಸಮೀಪ ಇತ್ತೀಚೆಗೆ ಎಆರ್​ ರೆಹಮಾನ್​ (AR Rahman) ಆ್ಯಂಡ್ ಟೀಂ ಸಂಗೀತ ಕಾರ್ಯಕ್ರಮ ನೀಡಿತ್ತು. ಆದರೆ, ಇದನ್ನು ಸರಿಯಾಗಿ ನಿರ್ವಹಿಸದ ಕಾರಣ ಜನ ಜಾತ್ರೆ ಆಗಿತ್ತು. ಸರಿಯಾಗಿ ನಿಲ್ಲಲೂ ಜಾಗ ಇರಲಿಲ್ಲ. ಟಿಕೆಟ್ ಇದ್ದ ಹೊರತಾಗಿಯೂ ಅನೇಕರನ್ನು ಒಳಗೆ ಬಿಡಲಿಲ್ಲ. ಈ ಘಟನೆ ಕುರಿತು ಅನೇಕರು ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು. ಹಲವರು ಎಆರ್​ ರೆಹಮಾನ್ ವಿರುದ್ಧ ಕಿಡಿಕಾರಿದ್ದರು. ಈ ವಿಚಾರದಲ್ಲಿ ರೆಹಮಾನ್ ಅವರು ಮೌನ ಮುರಿದಿದ್ದಾರೆ. ಕಾರ್ಯಕ್ರಮ ನೀಡೋದು ಮಾತ್ರ ನನ್ನ ಕೆಲಸ ಎಂದಿದ್ದಾರೆ.

‘ಜನರು ಸುನಾಮಿ ರೀತಿ ಬಂದಿದ್ದರು. ಅವರು ನೀಡಿದ ಪ್ರೀತಿಯನ್ನು ನಿರ್ವಹಿಸಲು ನಮ್ಮ ಬಳಿ ಸಾಧ್ಯವಾಗಿಲ್ಲ. ಓರ್ವ ಕಂಪೋಸರ್ ಆಗಿ ಒಂದೊಳ್ಳೆ ಶೋ ಕೊಡೋದು ಮಾತ್ರ ನನ್ನ ಕೆಲಸ. ಉಳಿದ ವಿಚಾರಗಳನ್ನು ಆಯೋಜಕರು ನಿರ್ವಹಿಸಬಹುದು ಎಂದು ನಾನು ಭಾವಿಸಿದ್ದೆ. ಮಳೆ ಬರಬಾರದು ಎಂದು ನಾನು ಬೇಡಿಕೊಂಡಿದ್ದೆ. ಹೊರಗೆ ಏನಾಗುತ್ತಿತ್ತು ಅನ್ನೋದು ಗೊತ್ತಿರಲಿಲ್ಲ. ನಮ್ಮ ನಿರೀಕ್ಷೆಗೂ ಮೀರಿ ಜನ ಬಂದಿದ್ದರು’ ಎಂದಿದ್ದಾರೆ ರೆಹಮಾನ್.

‘ನಡೆದ ಆ ಘಟನೆಯಿಂದ ನಾವು ವಿಚಲಿತಗೊಂಡಿದ್ದೇವೆ. ಮಹಿಳೆಯರು ಮತ್ತು ಮಕ್ಕಳು ಇದ್ದಿದ್ದರಿಂದ ಸುರಕ್ಷತೆಯು ಪ್ರಾಥಮಿಕ ಆದ್ಯತೆ ಆಗಿತ್ತು. ನಾನು ಯಾರತ್ತಲೂ ಬೆರಳು ತೋರಿಸಲು ಬಯಸುವುದಿಲ್ಲ.  ನಗರದ ರೀತಿಯೇ ಸಂಗೀತ ಮತ್ತು ಕಲೆಯನ್ನು ಪ್ರೋತ್ಸಾಹಿಸುವವರ ಸಂಖ್ಯೆಯೂ ವಿಸ್ತರಿಸುತ್ತಿದೆ ಎಂದು ನಾವು ಅರಿತುಕೊಳ್ಳಬೇಕು’ ಎಂದಿದ್ದಾರೆ ರೆಹಮಾನ್.

ಇದನ್ನೂ ಓದಿ: ಚೆನ್ನೈ ಸಂಗೀತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಅಭಿಮಾನಿಗಳಿಗೆ ಪ್ರತಿಕ್ರಿಯಿಸಿದ ಎಆರ್​​ ರೆಹಮಾನ್

 ಏನಿದು ಘಟನೆ?

ಮರಕ್ಕುಮಾ ನೆಂಜಮ್​ನಲ್ಲಿ ಎಆರ್​ ರೆಹಮಾನ್ ಮತ್ತು ತಂಡದವರಿಂದ ಭಾನುವಾರ (ಸೆಪ್ಟೆಂಬರ್ 10) ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ದುಡ್ಡಿನ ಆಸೆಗಾಗಿ ಹೆಚ್ಚಿನ ಟಿಕೆಟ್​ ಮಾರಾಟ ಮಾಡಿ ಸಮಸ್ಯೆ ಎದುರಿಸಬೇಕಾದ ಪರಿಸ್ಥಿತಿ ಬಂದೊದಗಿತ್ತು. ಟಿಕೆಟ್ ಪಡೆದ ಬಹುತೇಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹೀಗಾಗಿ, ಒಳಗೆ ನಿಲ್ಲಲೂ ಸರಿಯಾದ ಜಾಗ ಇರಲಿಲ್ಲ. ಟಿಕೆಟ್ ಇದ್ದವರನ್ನೂ ಒಳಗೆ ಬಿಡಲಿಲ್ಲ. ಈ ಬಗ್ಗೆ ಅನೇಕರು ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ