AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಆರ್​ ರೆಹಮಾನ್ ಮೇಲಿರುವ ಅಭಿಮಾನ ಸತ್ತು ಹೋಯಿತು’; ಫ್ಯಾನ್ಸ್ ಬೇಸರಕ್ಕೆ ಕಾರಣ ಏನು?

ಎಆರ್​ ರೆಹಮಾನ್ ಹಾಗೂ ಅವರ ತಂಡದವರಿಂದ ಭಾನುವಾರ ವಿಶೇಷ ಕಾರ್ಯಕ್ರಮ ಇತ್ತು. ಆದರೆ, ಇದನ್ನು ಸರಿಯಾಗಿ ಮ್ಯಾನೇಜ್ ಮಾಡಲಿಲ್ಲ. ದುಡ್ಡಿನ ಆಸೆಗಾಗಿ ಹೆಚ್ಚಿನ ಟಿಕೆಟ್​ ಮಾರಾಟ ಮಾಡಲಾಗಿತ್ತು. ಟಿಕೆಟ್ ಪಡೆದ ಬಹುತೇಕರು ಆಗಮಿಸಿದ್ದರು. ಹೀಗಾಗಿ, ಒಳಗೆ ಜಾಗವೇ ಇಲ್ಲದಂತೆ ಆಗಿತ್ತು.

‘ಎಆರ್​ ರೆಹಮಾನ್ ಮೇಲಿರುವ ಅಭಿಮಾನ ಸತ್ತು ಹೋಯಿತು’; ಫ್ಯಾನ್ಸ್ ಬೇಸರಕ್ಕೆ ಕಾರಣ ಏನು?
ರೆಹಮಾನ್
ರಾಜೇಶ್ ದುಗ್ಗುಮನೆ
|

Updated on: Sep 11, 2023 | 11:32 AM

Share

ಸಂಗೀತ ಸಂಯೋಜಕ ಎಆರ್​​ ರೆಹಮಾನ್ (AR Rahman) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಒಮ್ಮೆ ನೋಡಿದರೆ ಸಾಕು ಎಂದು ಕನಸು ಕಂಡವರು ಅನೇಕರು. ಈ ಕನಸನ್ನು ನನಸು ಮಾಡಿಕೊಳ್ಳಲು ಅನೇಕರು ಚೆನ್ನೈನ ಮರಕ್ಕುಮಾ ನೆಂಜಮ್​ನಲ್ಲಿ ಆಯೋಜನೆಗೊಂಡಿದ್ದ ರೆಹಮಾನ್ ಅವರ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ, ಅನೇಕರಿಗೆ ಬೇಸರ ಆಗುವಂಥ ಘಟನೆಯೊಂದು ನಡೆದಿದೆ. ಟಿಕೆಟ್ ಇದ್ದ ಹೊರತಾಗಿಯೂ ಅನೇಕರನ್ನು ಒಳಗೆ ಬಿಡಲೇ ಇಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ಬೇಸರ ಹೊರಹಾಕಿದ್ದಾರೆ.

ಎಆರ್​ ರೆಹಮಾನ್ ಹಾಗೂ ಅವರ ತಂಡದವರಿಂದ ಭಾನುವಾರ ವಿಶೇಷ ಕಾರ್ಯಕ್ರಮ ಇತ್ತು. ಆದರೆ, ಇದನ್ನು ಸರಿಯಾಗಿ ಮ್ಯಾನೇಜ್ ಮಾಡಲಿಲ್ಲ. ದುಡ್ಡಿನ ಆಸೆಗಾಗಿ ಹೆಚ್ಚಿನ ಟಿಕೆಟ್​ ಮಾರಾಟ ಮಾಡಲಾಗಿತ್ತು. ಟಿಕೆಟ್ ಪಡೆದ ಬಹುತೇಕರು ಆಗಮಿಸಿದ್ದರು. ಹೀಗಾಗಿ, ಒಳಗೆ ಜಾಗವೇ ಇಲ್ಲದಂತೆ ಆಗಿತ್ತು. ಟಿಕೆಟ್ ಇದ್ದ ಹೊರತಾಗಿಯೂ ಅನೇಕರನ್ನು ಒಳಗೆ ಬಿಡಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

‘2000 ಸಾವಿರ ರೂಪಾಯಿ ಕೊಟ್ಟು ಟಿಕೆಟ್ ಖರೀದಿಸಿದ್ದೇವೆ. ಆದರೆ, ಒಳಗೆ ಬಿಡಲೇ ಇಲ್ಲ’ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ‘ಅತ್ಯಂತ ಕೆಟ್ಟದಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಹಣ, ಶಕ್ತಿ ಎಲ್ಲವೂ ವ್ಯರ್ಥವಾಗಿದೆ’ ಎಂದು ವ್ಯಕ್ತಿಯೋರ್ವ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ ₹ 6.75 ಲಕ್ಷಕ್ಕೆ ಹರಾಜಾದ ಎಆರ್​ ರೆಹಮಾನ್ ದಿರಿಸು; ಹಣ ಯಾವುದಕ್ಕೆ ಬಳಕೆಯಾಗಲಿದೆ ಗೊತ್ತಾ?

‘ರೆಹಮಾನ್ ನೀಡಿದ ಅತ್ಯಂತ ಕೆಟ್ಟ ಕಾರ್ಯಕ್ರಮ. ಮಾನವೀಯತೆಯನ್ನು ಗೌರವಿಸಿ. 30 ವರ್ಷಗಳಿಂದ ರೆಹಮಾನ್ ಮೇಲಿರುವ ನನ್ನ ಅಭಿಮಾನ ಇಂದು ಸತ್ತು ಹೋಯಿತು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಬಗ್ಗೆ ಆಯೋಜಕರು ಹಾಗೂ ಎಆರ್​ ರೆಹಮಾನ್ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್