Sign In

By signing in or creating an account, you agree with Associated Broadcasting Company's Terms & Conditions and Privacy Policy.

AR Rahman: ಬರೋಬ್ಬರಿ ₹ 6.75 ಲಕ್ಷಕ್ಕೆ ಹರಾಜಾದ ಎಆರ್​ ರೆಹಮಾನ್ ದಿರಿಸು; ಹಣ ಯಾವುದಕ್ಕೆ ಬಳಕೆಯಾಗಲಿದೆ ಗೊತ್ತಾ?

ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಧರಿಸಿದ್ದ ದಿರಿಸೊಂದು ಬರೋಬ್ಬರಿ 6.75 ಲಕ್ಷ ರೂಗೆ ಮಾರಾಟವಾಗಿದೆ. ಹರಾಜಿನ ಉದ್ದೇಶವೇನು? ಮಾರಾಟದಿಂದ ಬಂದ ಹಣದಿಂದ ಏನು ಮಾಡಲಾಗುತ್ತದೆ? ಕುತೂಹಲಕರ ಮಾಹಿತಿ ಇಲ್ಲಿದೆ.

AR Rahman: ಬರೋಬ್ಬರಿ ₹ 6.75 ಲಕ್ಷಕ್ಕೆ ಹರಾಜಾದ ಎಆರ್​ ರೆಹಮಾನ್ ದಿರಿಸು; ಹಣ ಯಾವುದಕ್ಕೆ ಬಳಕೆಯಾಗಲಿದೆ ಗೊತ್ತಾ?
ಎ.ಆರ್.ರೆಹಮಾನ್ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Mar 22, 2022 | 5:51 PM

ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಎ.ಆರ್.ರೆಹಮಾನ್ (AR Rahman) ಭಾರತೀಯ ಚಿತ್ರ ಸಂಗೀತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸಿದವರು. 2009ರಲ್ಲಿ ‘ಸ್ಲಂಡಾಗ್ ಮಿಲಿಯನೇರ್’ ಚಿತ್ರಕ್ಕೆ ಎರಡೆರಡು ಆಸ್ಕರ್ ಪ್ರಶಸ್ತಿ ಪಡೆದ ಪ್ರತಿಭಾವಂತ ಸಂಗೀತ ಸಂಯೋಜಕ ಅವರು. ಭಾರತೀಯ ಜಾನಪದ ಸಂಗೀತ, ವಿವಿಧ ಬಗೆಯ ವಾದ್ಯಗಳನ್ನು ಪಾಶ್ಚಾತ್ಯ ಸಂಗೀತದೊಂದಿಗೆ ಅವರು ಮಿಳಿತಗೊಳಿಸುವ ಪರಿ ಎಂಥವರಿಗೂ ಬೆರಗು ಹುಟ್ಟಿಸುತ್ತದೆ. ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಚಿತ್ರರಂಗದಲ್ಲಿ ಮುಖ್ಯವಾಗಿ ಸಕ್ರಿಯರಾಗಿರುವ ಅವರು, ದೇಶ- ವಿದೇಶದಲ್ಲಿ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. 1992ರಲ್ಲಿ ‘ರೋಜಾ’ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಅವರು ಪದಾರ್ಪಣೆ ಮಾಡಿದ ಅವರು ಪ್ರಸ್ತುತ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ಸಂಗೀತ ಸಂಯೋಜಕರಲ್ಲಿ ಒಬ್ಬರು. ಅವರ ಮೇಲೆ ಜನರಿಗೆ ಎಷ್ಟು ಅಭಿಮಾನವಿದೆ ಎನ್ನುವುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೌದು. ಎ.ಆರ್.ರೆಹಮಾನ್ ಧರಿಸಿದ್ದ ದಿರಿಸೊಂದು ಹರಾಜಿನಲ್ಲಿ ಬರೋಬ್ಬರಿ ₹ 6.75 ಲಕ್ಷಕ್ಕೆ ಮಾರಾಟವಾಗಿದೆ.

ಎ.ಆರ್.ರೆಹಮಾನ್ ದಿರಿಸು ಹರಾಜಾಗಿದ್ದು ಯಾವ ಉದ್ದೇಶಕ್ಕೆ?

‘ರಾಜಸ್ಥಾನ ಕಾಸ್ಮೋ ಕ್ಲಬ್ ಫೌಂಡೇಶನ್‌’ನ 28 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಇತ್ತೀಚೆಗೆ ಆಳ್ವಾರ್‌ಪೇಟೆ ಮ್ಯೂಸಿಕ್ ಅಕಾಡೆಮಿಯಲ್ಲಿ ನಡೆದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳುನಾಡು ಕೈಮಗ್ಗ ಸಚಿವ ಆರ್.ಗಾಂಧಿ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದ್ದರು. ಕಾರ್ಯಕ್ರಮದ ಅಂಗವಾಗಿ, ಬಟ್ಟೆಯನ್ನು ಖರೀದಿಸಲು ಅಶಕ್ತರಾದವರಿಗೆ ಸಹಾಯ ಮಾಡುವ ಯೋಜನೆಯಡಿ ಎ.ಆರ್.ರೆಹಮಾನ್ ಧರಿಸಿದ್ದ ದಿರಿಸನ್ನು ಹರಾಜು ಹಾಕಲಾಯಿತು.

ಆರ್ಥಿಕವಾಗಿ ಅಶಕ್ತರಾದವರಿಗೆ ಸಹಾಯ ಮಾಡುವ ಉದ್ದೇಶದಿಂದ ಹರಾಜಿಗೆ ಇಡಲಾಗಿದ್ದ ಎ.ಆರ್.ರೆಹಮಾನ್ ಧರಿಸಿದ್ದ ದಿರಿಸು ಬರೋಬ್ಬರಿ 6.75 ಲಕ್ಷ ರೂಗೆ ಮಾರಾಟವಾಯಿತು. ಪ್ರಮೋದ್ ಸುರಾಡಿಯಾ ಎನ್ನುವವರು ಹರಾಜಿನಲ್ಲಿ ಉಡುಪನ್ನು ಖರೀದಿಸಿದರು. ಹರಾಜಿನ ಉದ್ದೇಶಕ್ಕೆ ಇದೀಗ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಎ.ಆರ್.ರೆಹಮಾನ್ ಪ್ರಸ್ತುತ ಹಲವು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.  ಪಾರ್ತಿಬನ್ ನಿರ್ದೇಶನದ ಮುಂದಿನ ಚಿತ್ರ ‘ಇರವಿನ್ ನಿಜಲ್’ಗೆ ಅವರು ಸಂಗೀತ ನೀಡುತ್ತಿದ್ದು ಇತ್ತೀಚೆಗೆ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿತ್ತು. ಖ್ಯಾತ ನಿರ್ದೇಶಕ ಮಣಿರತ್ನಂ ಇದನ್ನು ರಿಲೀಸ್ ಮಾಡಿದ್ದರು.

ಪ್ರಸ್ತುತ ‘ಮೈದಾನ್’, ‘ಪೊನ್ನಿಯಿನ್ ಸೆಲ್ವನ್’ ಮೊದಲಾದ ಖ್ಯಾತ ಚಿತ್ರಗಳಿಗೆ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ವರ್ಚುವಲ್ ರಿಯಾಲಿಟಿ ಚಿತ್ರವಾದ ‘ಲೆ ಮಸ್ಕ್’ ಚಿತ್ರಕ್ಕೆ ಎ.ಆರ್.ರೆಹಮಾನ್ ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿದ್ದಾರೆ. ಇದರ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:

Samantha: ‘ಪುಷ್ಪ: ದಿ ರೂಲ್’ನಲ್ಲಿಲ್ಲ ಸಮಂತಾ ಮೋಡಿ? ಹೆಜ್ಜೆಹಾಕಲಿದ್ದಾರಂತೆ ಈ ಬಾಲಿವುಡ್ ಬ್ಯೂಟಿ

ಪಾರ್ವತಮ್ಮ, ಪುನೀತ್ ಹೆಸರಲ್ಲಿ 2 ಬಂಗಾರದ ಪದಕ ಘೋಷಿಸಿದ ಅಶ್ವಿನಿ; ‘ದೊಡ್ಮನೆ ಯಾವತ್ತಿಗೂ ದೊಡ್ಮನೆ’ ಎಂದ ಅಭಿಮಾನಿಗಳು

Published On - 5:45 pm, Tue, 22 March 22

ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್