AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ

ಸದ್ಯ ಸಾಯಿರಾ ಮುಂಬೈನಲ್ಲಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ.

‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ
ಸೈರಾ-ರೆಹಮಾನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Nov 25, 2024 | 12:32 PM

Share

ಆಸ್ಕರ್ ಪ್ರಶಸ್ತಿ ವಿಜೇತ ಸಂಯೋಜಕ ಮತ್ತು ಗಾಯಕ ಎ. ಆರ್. ರೆಹಮಾನ್ ಪತ್ನಿ ಸಾಯಿರಾ ಬಾನು ಅವರಿಗೆ ವಿಚ್ಛೇದನ ನೀಡಿದ್ದಾರೆ. ಈ ಮೂಲಕ  29 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡಿದ್ದಾರೆ. ವಿಚ್ಛೇದನವನ್ನು ಘೋಷಿಸುವಾಗ, ರೆಹಮಾನ್ ಮತ್ತು ಸೈರಾ ತಮ್ಮ ಖಾಸಗಿ ಜೀವನವನ್ನು ಗೌರವಿಸುವಂತೆ ಅಭಿಮಾನಿಗಳಿಗೆ ವಿನಂತಿಸಿದ್ದರು. ಎಂಬಂತೆ ಕೆಲವು ರೆಹಮಾನ್‌ರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಕಾಕತಾಳೀಯವೆಂಬಂತೆ, ಅದೇ ದಿನ ರೆಹಮಾನ್‌ ಅವರ ಬ್ಯಾಂಡ್‌ನಲ್ಲಿ ಬಾಸ್ ಪ್ಲೇಯರ್ ಮೋಹಿನಿ ಡೇ ಅವರು ತಮ್ಮ ಪತಿಯಿಂದ ವಿಚ್ಛೇದನವನ್ನು ಘೋಷಿಸಿದರು. ಹಾಗಾಗಿ, ರೆಹಮಾನ್ ವಿಚ್ಛೇದನಕ್ಕೆ ಮೋಹಿನಿ ಕಾರಣ ಎಂದು ಕೆಲವರು ಹೇಳಿದ್ದರು. ಹೀಗಾಗಿ ಇದೇ ಮೊದಲ ಬಾರಿಗೆ ರೆಹಮಾನ್ ಅವರ ಖಾಸಗಿ ಜೀವನ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ. ಈಗ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸೈರಾ ತಮ್ಮ ಪಿಆರ್‌ ಮೂಲಕ ವಾಯ್ಸ್ ನೋಟ್ ಬಿಡುಗಡೆ ಮಾಡಿದ್ದಾರೆ.

ಸದ್ಯ ಸಾಯಿರಾ ಮುಂಬೈನಲ್ಲಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ. ‘ಎಆರ್ ರೆಹಮಾನ್ ಓರ್ವ ವ್ಯಕ್ತಿಯಾಗಿ ವಜ್ರ ಇದ್ದಂತೆ. ಅವರು ಈ ಜಗತ್ತಿನಲ್ಲಿ ಅತ್ಯುತ್ತಮ ವ್ಯಕ್ತಿ. ನನ್ನ ಆರೋಗ್ಯ ಸಮಸ್ಯೆಯಿಂದಾಗಿ ನಾನು ಚೆನ್ನೈ ಬಿಟ್ಟು ಹೋಗಬೇಕಾಯಿತು. ಅವರ ವಿರುದ್ಧ ಕೆಟ್ಟದ್ದನ್ನು ಹೇಳಬೇಡಿ ಎಂದು ನಾನು ಯೂಟ್ಯೂಬ್‌ಗಳು ಮತ್ತು ತಮಿಳು ಮಾಧ್ಯಮಗಳಲ್ಲಿ ವಿನಂತಿಸುತ್ತೇನೆ. ನನ್ನ ಜೀವನದಲ್ಲಿ ನಾನು ಅವನನ್ನು ಹೆಚ್ಚು ನಂಬಿದ್ದೇನೆ. ನಾನು ಅವರನ್ನು ತುಂಬಾ ಪ್ರೀತಿಸುತ್ತೇನೆ ಮತ್ತು ಅವರು ನನ್ನನ್ನು ತುಂಬಾ ಪ್ರೀತಿಸುತ್ತಾರೆ. ಹಾಗಾಗಿ ಅವರ ಮೇಲೆ ಸುಳ್ಳು ಆರೋಪ ಮಾಡಬೇಡಿ’’ ಎಂದು ಸೈರಾ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ

ಚಿಕಿತ್ಸೆ ಮುಗಿಸಿ ಚೆನ್ನೈಗೆ ಮರಳುವವರೆಗೂ ಕಾಯುವಂತೆ ಅವರು ಕೋರಿದ್ದಾರೆ. ‘ನಾವು ಇನ್ನೂ ಅಧಿಕೃತವಾಗಿ ಏನನ್ನೂ ಘೋಷಿಸಿಲ್ಲ. ಅವರ ಹೆಸರನ್ನು ಹಾಳು ಮಾಡಬೇಡಿ. ಇದೆಲ್ಲ ತುಂಬಾ ಮೂರ್ಖತನ. ರೆಹಮಾನ್ ವಜ್ರದಂತಿದ್ದಾರೆ’ ಎಂದು ಅವರು ಹೇಳಿದ್ದಾರೆ. ರೆಹಮಾನ್ ಮತ್ತು ಸೈರಾ ತಮ್ಮ ವಕೀಲ ವಂದನಾ ಶಾ ಮೂಲಕ ವಿಚ್ಛೇದನವನ್ನು ಘೋಷಿಸಿದರು. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬರೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Mon, 25 November 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ