AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ

ಸದ್ಯ ಸಾಯಿರಾ ಮುಂಬೈನಲ್ಲಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ.

‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ
ಸೈರಾ-ರೆಹಮಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Nov 25, 2024 | 12:32 PM

ಆಸ್ಕರ್ ಪ್ರಶಸ್ತಿ ವಿಜೇತ ಸಂಯೋಜಕ ಮತ್ತು ಗಾಯಕ ಎ. ಆರ್. ರೆಹಮಾನ್ ಪತ್ನಿ ಸಾಯಿರಾ ಬಾನು ಅವರಿಗೆ ವಿಚ್ಛೇದನ ನೀಡಿದ್ದಾರೆ. ಈ ಮೂಲಕ  29 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡಿದ್ದಾರೆ. ವಿಚ್ಛೇದನವನ್ನು ಘೋಷಿಸುವಾಗ, ರೆಹಮಾನ್ ಮತ್ತು ಸೈರಾ ತಮ್ಮ ಖಾಸಗಿ ಜೀವನವನ್ನು ಗೌರವಿಸುವಂತೆ ಅಭಿಮಾನಿಗಳಿಗೆ ವಿನಂತಿಸಿದ್ದರು. ಎಂಬಂತೆ ಕೆಲವು ರೆಹಮಾನ್‌ರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಕಾಕತಾಳೀಯವೆಂಬಂತೆ, ಅದೇ ದಿನ ರೆಹಮಾನ್‌ ಅವರ ಬ್ಯಾಂಡ್‌ನಲ್ಲಿ ಬಾಸ್ ಪ್ಲೇಯರ್ ಮೋಹಿನಿ ಡೇ ಅವರು ತಮ್ಮ ಪತಿಯಿಂದ ವಿಚ್ಛೇದನವನ್ನು ಘೋಷಿಸಿದರು. ಹಾಗಾಗಿ, ರೆಹಮಾನ್ ವಿಚ್ಛೇದನಕ್ಕೆ ಮೋಹಿನಿ ಕಾರಣ ಎಂದು ಕೆಲವರು ಹೇಳಿದ್ದರು. ಹೀಗಾಗಿ ಇದೇ ಮೊದಲ ಬಾರಿಗೆ ರೆಹಮಾನ್ ಅವರ ಖಾಸಗಿ ಜೀವನ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ. ಈಗ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸೈರಾ ತಮ್ಮ ಪಿಆರ್‌ ಮೂಲಕ ವಾಯ್ಸ್ ನೋಟ್ ಬಿಡುಗಡೆ ಮಾಡಿದ್ದಾರೆ.

ಸದ್ಯ ಸಾಯಿರಾ ಮುಂಬೈನಲ್ಲಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ. ‘ಎಆರ್ ರೆಹಮಾನ್ ಓರ್ವ ವ್ಯಕ್ತಿಯಾಗಿ ವಜ್ರ ಇದ್ದಂತೆ. ಅವರು ಈ ಜಗತ್ತಿನಲ್ಲಿ ಅತ್ಯುತ್ತಮ ವ್ಯಕ್ತಿ. ನನ್ನ ಆರೋಗ್ಯ ಸಮಸ್ಯೆಯಿಂದಾಗಿ ನಾನು ಚೆನ್ನೈ ಬಿಟ್ಟು ಹೋಗಬೇಕಾಯಿತು. ಅವರ ವಿರುದ್ಧ ಕೆಟ್ಟದ್ದನ್ನು ಹೇಳಬೇಡಿ ಎಂದು ನಾನು ಯೂಟ್ಯೂಬ್‌ಗಳು ಮತ್ತು ತಮಿಳು ಮಾಧ್ಯಮಗಳಲ್ಲಿ ವಿನಂತಿಸುತ್ತೇನೆ. ನನ್ನ ಜೀವನದಲ್ಲಿ ನಾನು ಅವನನ್ನು ಹೆಚ್ಚು ನಂಬಿದ್ದೇನೆ. ನಾನು ಅವರನ್ನು ತುಂಬಾ ಪ್ರೀತಿಸುತ್ತೇನೆ ಮತ್ತು ಅವರು ನನ್ನನ್ನು ತುಂಬಾ ಪ್ರೀತಿಸುತ್ತಾರೆ. ಹಾಗಾಗಿ ಅವರ ಮೇಲೆ ಸುಳ್ಳು ಆರೋಪ ಮಾಡಬೇಡಿ’’ ಎಂದು ಸೈರಾ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ

ಚಿಕಿತ್ಸೆ ಮುಗಿಸಿ ಚೆನ್ನೈಗೆ ಮರಳುವವರೆಗೂ ಕಾಯುವಂತೆ ಅವರು ಕೋರಿದ್ದಾರೆ. ‘ನಾವು ಇನ್ನೂ ಅಧಿಕೃತವಾಗಿ ಏನನ್ನೂ ಘೋಷಿಸಿಲ್ಲ. ಅವರ ಹೆಸರನ್ನು ಹಾಳು ಮಾಡಬೇಡಿ. ಇದೆಲ್ಲ ತುಂಬಾ ಮೂರ್ಖತನ. ರೆಹಮಾನ್ ವಜ್ರದಂತಿದ್ದಾರೆ’ ಎಂದು ಅವರು ಹೇಳಿದ್ದಾರೆ. ರೆಹಮಾನ್ ಮತ್ತು ಸೈರಾ ತಮ್ಮ ವಕೀಲ ವಂದನಾ ಶಾ ಮೂಲಕ ವಿಚ್ಛೇದನವನ್ನು ಘೋಷಿಸಿದರು. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬರೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Mon, 25 November 24

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ